ಚಿತ್ರದುರ್ಗ: ನ್ಯಾಯಾಲಯದಲ್ಲಿ ಮುರುಘಾ ಮಠದ ಶ್ರೀಗಳ ವಿರುದ್ಧ ಸಂತ್ರಸ್ತ ಬಾಲಕಿಯರ ಹೇಳಿಕೆ ದಾಖಲು

ಮುರುಘಾ ಮಠಾಧೀಶ ಡಾ.ಶಿವಮೂರ್ತಿ ಮುರುಘಾ ಶರಣರು ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಸಂತ್ರಸ್ತ ಇಬ್ಬರು ಅಪ್ರಾಪ್ತ ಬಾಲಕಿಯರು ಚಿತ್ರದುರ್ಗದ ಒಂದನೇ ಹೆಚ್ಚುವರಿ ಜಿಲ್ಲಾಸ್ಪತ್ರೆ ಮತ್ತು ಸೆಷನ್ಸ್ ಎದುರು ಮಂಗಳವಾರ ಹೇಳಿಕೆಯನ್ನು ದಾಖಲಿಸಿದ್ದಾರೆ.  
ಡಾ. ಶಿವಮೂರ್ತಿ ಸ್ವಾಮೀಜಿ
ಡಾ. ಶಿವಮೂರ್ತಿ ಸ್ವಾಮೀಜಿ
Updated on

ಚಿತ್ರದುರ್ಗ: ಮುರುಘಾ ಮಠಾಧೀಶ ಡಾ.ಶಿವಮೂರ್ತಿ ಮುರುಘಾ ಶರಣರು ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಸಂತ್ರಸ್ತ ಇಬ್ಬರು ಅಪ್ರಾಪ್ತ ಬಾಲಕಿಯರು ಚಿತ್ರದುರ್ಗದ ಒಂದನೇ ಹೆಚ್ಚುವರಿ ಜಿಲ್ಲಾಸ್ಪತ್ರೆ ಮತ್ತು ಸೆಷನ್ಸ್ ಎದುರು ಮಂಗಳವಾರ ಹೇಳಿಕೆಯನ್ನು ದಾಖಲಿಸಿದ್ದಾರೆ.  

ಮಕ್ಕಳ ಕಲ್ಯಾಣ ಸಮಿತಿ ಪದಾಧಿಕಾರಿಗಳು ಹಾಗೂ ಒಡನಾಡಿ ಸದಸ್ಯರೊಂದಿಗೆ ಬಿಗಿ ಭದ್ರತೆಯಲ್ಲಿ ಮಧ್ಯಾಹ್ನ 2.30ಕ್ಕೆ ಸರ್ಕಾರಿ ಬಾಲ ಮಂದಿರದಿಂದ ಇಬ್ಬರನ್ನು ನ್ಯಾಯಾಲಯಕ್ಕೆ ಕರೆದೊಯ್ಯಲಾಯಿತು. ನ್ಯಾಯಾಲಯದಲ್ಲಿ ಹೆಚ್ಚಿನ ಸಂಖ್ಯೆಯ ಜನರು ಜಮಾಯಿಸಿದ್ದರು ಮತ್ತು ಗುಂಪನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು.

ಈ ಮಧ್ಯೆ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಜಿ.ಎಚ್. ತಿಪ್ಪಾರೆಡ್ಡಿ. ಈ ಬೆಳವಣಿಗೆಯಿಂದ ನನಗೆ ನೋವಾಗಿದ್ದು, ತನಿಖೆಗೆ ಸಹಕರಿಸುವುದಾಗಿ ಸ್ವಾಮೀಜಿ ತಿಳಿಸಿರುವುದಾಗಿ ಹೇಳಿದರು. ಸ್ವಾಮೀಜಿ ವಿರುದ್ಧ ದೊಡ್ಡ ಷಡ್ಯಂತ್ರ ನಡೆಯುತ್ತಿದೆ ಎಂದು ಅವರು ಆರೋಪಿಸಿದರು. 

ಸಂತ್ರಸ್ತೆಯರು ಮತ್ತು ಮಠಾಧೀಶರು ನನ್ನ ಕ್ಷೇತ್ರದವರೇ ಆಗಿದ್ದು, ಕಾನೂನಿನ ಪ್ರಕಾರ ಅವಕಾಶವಿದ್ದಲ್ಲಿ ಬಾಲಕಿಯರನ್ನು ಭೇಟಿಯಾಗಲು ಇಚ್ಛಿಸುತ್ತೇನೆ ಎಂದು ತಿಪ್ಪಾರೆಡ್ಡಿ ಹೇಳಿದರು. ಸೋಮವಾರದ ಘಟನೆಯ ಹಿನ್ನೆಲೆಯಲ್ಲಿ ಮಠಾಧೀಶರು ಕೆಲ ಸಮಯದಿಂದ ಪತ್ತೆಯಾಗದ ಹಿನ್ನೆಲೆಯಲ್ಲಿ ಪೊಲೀಸರು ಹೆಚ್ಚಿನ ಭದ್ರತೆಯನ್ನು ನಿಯೋಜಿಸಿದ್ದಾರೆ. ಬಾಲಕಿಯರ ಸರ್ಕಾರಿ ಗೃಹಕ್ಕೆ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಈ ಮಧ್ಯೆ ಸಂತ್ರಸ್ತೆಯರಲ್ಲಿ ಒಬ್ಬರು ಎಸ್‌ಸಿ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ಜಿಲ್ಲಾ ಪೊಲೀಸರು ಮಂಗಳವಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ, 1989 (ಆಕ್ಟ್) ನ್ನು ಆರೋಪಿಗಳ ವಿರುದ್ಧ ದಾಖಲಿಸಿದ್ದಾರೆ. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com