ಬೆಂಗಳೂರು: ಕುಟುಂಬವೊಂದಕ್ಕೆ ಜೀವ ಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಪ್ರವಾಸೋದ್ಯ ಸಚಿವ ಆನಂದ್ ಸಿಂಗ್ ಸೇರಿ 4 ಮಂದಿ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಈ ಸಂಬಂಧ ಪ್ರತಿಕ್ರಿಯಿಸಿರುವ ರಾಜ್ಯ ಕಾಂಗ್ರೆಸ್, 'ಮನೆಯಲ್ಲ, ಅರಮನೆಯನ್ನೇ ನಿರ್ಮಿಸಿರುವ ಸಚಿವ ಆನಂದ್ ಸಿಂಗ್ ವಿರುದ್ಧ ಕಾನೂನು ಕೆಲಸ ಮಾಡ್ತಿಲ್ಲ ಏಕೆ? ಎಂದು ಪ್ರಶ್ನಿಸಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ಕೂಡಲೇ ಸರ್ವೆ ನಡೆಸಿ ಒತ್ತುವರಿ ತೆರವುಗೊಳಿಸಿ, ಧ್ವನಿ ಎತ್ತಿದ ವ್ಯಕ್ತಿಗೆ ರಕ್ಷಣೆ ನೀಡಿ, ಅಕ್ರಮ ನಡೆಸಿದ ಸಚಿವರನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿದೆ. ಈ ಮೂಲಕ ನಿಮ್ಮ 'ಪಾರದರ್ಶಕ' ಆಡಳಿತವನ್ನು ತೋರಿಸಿ ಮುಖ್ಯಮಂತ್ರಿಗೆ ಹೇಳಿದೆ.
ಸಚಿವ ಆನಂದ್ ಸಿಂಗ್ ಪೆಟ್ರೋಲ್ ಹಾಕಿ ಸುಟ್ಟು ಹಾಕುತ್ತೇನೆ’ ಎಂದು ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಿ ಕುಟುಂಬದ 9 ಜನ ಮಂಗಳವಾರ ಎಸ್ಪಿ ಕಚೇರಿ ಎದುರು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು.
Advertisement