ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬೆಂಗಳೂರಿಗೆ ಆಗಮನ
ಬೆಂಗಳೂರಿನ ಇಸ್ಕಾನ್ ದೇಗುಲದ ವತಿಯಿಂದ ಆಯೋಜಿಸಿರುವ ಗೀತಾ ಜಯಂತಿ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಕೇಂದ್ರ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಅವರು ಇಂದು ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
Published: 03rd December 2022 01:25 PM | Last Updated: 03rd December 2022 06:26 PM | A+A A-

ರಾಜನಾಥ್ ಸಿಂಗ್
ಬೆಂಗಳೂರು: ಬೆಂಗಳೂರಿನ ಇಸ್ಕಾನ್ ದೇಗುಲದ ವತಿಯಿಂದ ಆಯೋಜಿಸಿರುವ ಗೀತಾ ಜಯಂತಿ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಕೇಂದ್ರ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಅವರು ಇಂದು ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ನಗರಾಭಿವೃದ್ಧಿ ಸಚಿವರಾದ ಬಿ ಬಸವರಾಜು (ಬೈರತಿ) ಅವರು ರಕ್ಷಣಾ ಸಚಿವರನ್ನು ಆತ್ಮೀಯವಾಗಿ ಬರ ಮಾಡಿಕೊಂಡರು.
ಈ ಸಮಯದಲ್ಲಿ ಲೆಫ್ಟಿನೆಂಟ್ ಜನರಲ್ ಬಸಂತ್ ರೆಪ್ ಸ್ವಾಲ್, ಉತ್ತರಾಧಿ ಮಠದ ಸ್ವಾಮೀಜಿ ಸತ್ಯಧ್ಯಾನಾಚಾರ್, ಹೆಚ್.ಎ.ಎಲ್ ನ ವ್ಯವಸ್ಥಾಪಕ ನಿರ್ದೇಶಕರಾದ ಅನಂತ ಕೃಷ್ಣ ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಇಂದು ಬೆಂಗಳೂರಿನ ಎಚ್.ಎ.ಎಲ್. ವಿಮಾನ ನಿಲ್ದಾಣದಲ್ಲಿ ಕೇಂದ್ರ ರಕ್ಷಣಾ ಸಚಿವರಾದ ಶ್ರೀ ರಾಜನಾಥ್ ಸಿಂಗ್ ಜೀ ಅವರನ್ನು ಬರಮಾಡಿಕೊಳ್ಳಲಾಯಿತು.@rajnathsingh#RajnathSingh#BJP4IND pic.twitter.com/0nG5BQPrC2
— Byrathi Basavaraja (@BABasavaraja) December 3, 2022
ಇಸ್ಕಾನ್ ವತಿಯಿಂದ ಆಯೋಜಿಸಿದ್ದ ಗೀತಾ ಜಯಂತಿ ಹಾಗೂ ಗೀತಾ ದಾನ ಯಜ್ಞ ಮಹೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಮಂತ್ರಿ @BSBommai ಅವರು ಇಂದು ಕೇಂದ್ರ ರಕ್ಷಣಾ ಸಚಿವ @rajnathsingh ಅವರೊಂದಿಗೆ ಪಾಲ್ಗೊಂಡರು.
— CM of Karnataka (@CMofKarnataka) December 3, 2022
1/2 pic.twitter.com/KEdV1iqUic