ಬೆಂಗಳೂರು: ‘ಮೊಬೈಲ್ ಆ್ಯಪ್ ಆಧಾರಿತ ಸಾರಿಗೆ, ಸರಕು ಸಾಗಣೆ ಹಾಗೂ ಆಹಾರ ಪೂರೈಕೆ ಮಾಡುವ ಕಂಪನಿಗಳು ಗ್ರಾಹಕರ ಸುರಕ್ಷತೆಗೆ ಕ್ರಮ ಕೈಗೊಳ್ಳಬೇಕು. ನಿಯಮ ಮೀರಿದರೆ ಕಠಿಣ ಕಾನೂನು ಕ್ರಮ ಎದುರಿಸಬೇಕಾಗುತ್ತದೆ’ ಎಂದು ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ ಅವರು ಶನಿವಾರ ಎಚ್ಚರಿಗೆ ನೀಡಿದ್ದಾರೆ.
ನಿನ್ನೆಯಷ್ಟೇ ಆಯುಕ್ತರು ಶನಿವಾರ ಇನ್ಫೆಂಟ್ರಿ ರಸ್ತೆಯಲ್ಲಿರುವ ತಮ್ಮ ಕಚೇರಿಯಲ್ಲಿ ಓಲಾ, ಉಬರ್, ರಾಪಿಡೊ ಮತ್ತು ಇತರ ಟ್ಯಾಕ್ಸಿ ಮತ್ತು ರೆಸ್ಟೋರೆಂಟ್ ಅಗ್ರಿಗೇಟರ್ಗಳು ಮತ್ತು ಇತರ ಇ-ಕಾಮರ್ಸ್ ಕಂಪನಿಗಳ ಮುಖ್ಯಸ್ಥರು ಮತ್ತು ಪ್ರತಿನಿಧಿಗಳೊಂದಿಗೆ ಸುರಕ್ಷತಾ ಕ್ರಮಗಳ ಕುರಿತು ಚರ್ಚಿಸಲು ಸಮನ್ವಯ ಸಭೆ ನಡೆಸಿದರು. ಸಭೆಯಲ್ಲಿ ವಿವಿಧ ಕಂಪನಿಗಳ ಸುಮಾರು 40 ಪ್ರತಿನಿಧಿಗಳು ಭಾಗವಹಿಸಿದ್ದರು.
ಚಾಲಕರು, ಡೆಲಿವರಿ ಏಜೆಂಟ್ಗಳು ಮತ್ತು ಇತರ ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳುವ ಮೊದಲು ಅವರ ಪೂರ್ವಾಪರವನ್ನು ಪರಿಶೀಲಿಸುವಂತೆ ರೆಡ್ಡಿ ಆ್ಯಪ್ ಆಧಾರಿತ ಟ್ಯಾಕ್ಸಿ ಕಂಪನಿಗಳಿಗೆ ಸಲಹೆ ನೀಡಿದರು ಮತ್ತು ಸುರಕ್ಷತಾ ಕ್ರಮಗಳಲ್ಲಿ ಯಾವುದೇ ಲೋಪ ಕಂಡುಬಂದರೆ ಮತ್ತು ಗ್ರಾಹಕರು ಸಮಸ್ಯೆಗಳನ್ನು ಎದುರಿಸಿದರೆ ಕಂಪನಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.
ಕಂಪನಿಗಳು ಏಜೆನ್ಸಿಗಳಲ್ಲಿ ಕೆಲಸ ಮಾಡುವ ನೌಕರರ ಕ್ರಿಮಿನಲ್ ಹಿನ್ನೆಲೆಯನ್ನು ಅವರ ಗುರುತಿನ ಬಗ್ಗೆ ಕನಿಷ್ಠ ಎರಡು ದಾಖಲಾತಿಗಳನ್ನು ಹಾಗೂ ಅವರು ಉಪಯೋಗಿಸುವ ವಾಹನಗಳ ಬಗ್ಗೆ ದಾಖಲೆಗಳನ್ನು ಸಂಗ್ರಹಿಸಿದ ನಂತರವೇ ಕೆಲಸಕ್ಕೆ ತೆಗೆದುಕೊಳ್ಳಬೇಕು ಎಂದರು.
ಮನೆಗಳಿಗೆ ಗೃಹೋಪಯೋಗಿ ವಸ್ತುಗಳು ಆಹಾರ ಊಟ ಸರಬರಾಜು ಮಾಡುವ ಕಂಪನಿಗಳ ಡಿಲಿವರಿ ಬಾಯ್ ಗಳಿಂದ ಲೈಂಗಿಕ ಕಿರುಕುಳ ಡ್ರಗ್ಸ್ ಸೇರಿ ನಿಷೇಧಿತ ವಸ್ತುಗಳ ಸಾಗಾಣೆ ಇನ್ನಿತರ ಕಾನೂನು ಬಾಹಿರ ಕೃತ್ಯಗಳು ನಡೆಯುವುದಂತೆ ಕಟ್ಟುನಿಟ್ಟಿನ ನಿಗಾ ವಹಿಸಲು ಸೂಚನೆ ನೀಡಿದರು.
ಸಭೆಯಲ್ಲಿ ವಿಶೇಷ ಆಯುಕ್ತ (ಸಂಚಾರ) ಎಂಎ ಸಲೀಂ ಮತ್ತು ಇತರ ಹಿರಿಯ ಐಪಿಎಸ್ ಅಧಿಕಾರಿಗಳು ಉಪಸ್ಥಿತರಿದ್ದರು.
ಮಹಿಳೆಯರು ಮತ್ತು ಮಕ್ಕಳಿಗಾಗಿ ಸುರಕ್ಷತಾ ಮಂತ್ರ...
Advertisement