ಬೈಕ್ ಗೆ ಬಿಜೆಪಿ ಎಂಎಲ್ ಸಿ ಕಾರು ಡಿಕ್ಕಿ; ಕನಿಷ್ಠ ಮಾನವೀಯತೆ ತೋರದ ಎನ್ ರವಿಕುಮಾರ್ ವಿರುದ್ಧ ಜನರ ಆಕ್ರೋಶ

ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಆಗಿರುವ  ಎಂಎಲ್ ಸಿ ಎನ್.  ರವಿಕುಮಾರ್ ಅವರ ಕಾರು ಬೈಕ್ ಸವಾರನೊಬ್ಬನಿಗೆ ಡಿಕ್ಕಿ ಹೊಡೆದ ಪರಿಣಾಮ ಆತ ಗಾಯಗೊಂಡಿರುವ ಘಟನೆ ಲಕ್ಷ್ಮಿ ಸಾಗರ ಗೇಟ್ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭಾನುವಾರ ನಡೆದಿದೆ.
ವಿಧಾನಪರಿಷತ್ ಸದಸ್ಯ ಎನ್ ರವಿಕುಮಾರ್
ವಿಧಾನಪರಿಷತ್ ಸದಸ್ಯ ಎನ್ ರವಿಕುಮಾರ್

ಕೋಲಾರ: ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಆಗಿರುವ  ಎಂಎಲ್ ಸಿ ಎನ್.  ರವಿಕುಮಾರ್ ಅವರ ಕಾರು ಬೈಕ್ ಸವಾರನೊಬ್ಬನಿಗೆ ಡಿಕ್ಕಿ ಹೊಡೆದ ಪರಿಣಾಮ ಆತ ಗಾಯಗೊಂಡಿರುವ ಘಟನೆ ಲಕ್ಷ್ಮಿ ಸಾಗರ ಗೇಟ್ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭಾನುವಾರ ನಡೆದಿದೆ.

ಆದರೆ, ಗಾಯಗೊಂಡ ಬೈಕ್ ಸವಾರನನ್ನು ಆಸ್ಪತ್ರೆಗೆ ಕರೆದೊಯ್ಯಲು ಕನಿಷ್ಠ ಮಾನವೀಯತೆ ತೋರದ ರವಿಕುಮಾರ್ ವಿರುದ್ಧ ಜನರು ನಾನಾ ರೀತಿಯ ಮಾತುಗಳ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಘಟನೆಯಲ್ಲಿ ಗಾಯಗೊಂಡ ಹೊಸಕೋಟೆಯ ಗೋಪಾಲ್ ಎಂಬುವರನ್ನು ಆಸ್ಪತ್ರೆಗೆ ದಾಖಲಿಸಲು ರವಿಕುಮಾರ್ ಹಿಂದೇಟು ಹಾಕಿದ್ದರಿಂದ ರೊಚ್ಚಿಗೆದ್ದ  ಜನರು, ನೀನು ಯಾವ ಸೀಮೆ ಎಂಎಲ್ ಸಿ? ಕನಿಷ್ಠ ಮಾನವೀಯತೆ ಇಲ್ಲವೇ ಎಂದು ಹರಿಹಾಯ್ದಿದ್ದಾರೆ.

ನಂತರ ಸ್ಥಳಕ್ಕೆ ಆಗಮಿಸಿದ ಪೊಲೀಸರು ಸ್ಥಳೀಯರನ್ನು ಸಮಾಧಾನಪಡಿಸಿದ್ದಾರೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com