ಧಾರವಾಡ: ನವಲಗುಂದದ ಲಾಡ್ಜ್​ನಲ್ಲಿ ಯುವ ಪ್ರೇಮಿಗಳು ಆತ್ಮಹತ್ಯೆಗೆ ಶರಣು!

ಕಳೆದ ಮೂರು ದಿನಗಳಿಂದ ನವಲಗುಂದದ ಅಶೋಕ ಲಾಡ್ಜ್​ನಲ್ಲಿ ಉಳಿದುಕೊಂಡಿದ್ದ ಯುವ ಜೋಡಿ ಇಂದು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಧಾರವಾಡ: ಕಳೆದ ಮೂರು ದಿನಗಳಿಂದ ನವಲಗುಂದದ ಅಶೋಕ ಲಾಡ್ಜ್​ನಲ್ಲಿ ಉಳಿದುಕೊಂಡಿದ್ದ ಯುವ ಜೋಡಿ ಇಂದು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. 

ನವಲಗುಂದ ತಾಲೂಕಿನ ಬೆಳವಟಗಿ ಗ್ರಾಮದ 22 ವರ್ಷದ ಕುಮಾರ ತಳವಾರ ಹಾಗೂ ಧಾರವಾಡ ತಾಲೂಕಿನ ನೀರಲಕಟ್ಟಿ ಗ್ರಾಮದ 18 ವರ್ಷದ ದೀಪಾ ಎತ್ತಿನಗುಡ್ಡ ಇಬ್ಬರು ಪ್ರೀತಿಸುತ್ತಿದ್ದರು. ಈ ಜೋಡಿ ಕಳೆದ ಮೂರು ದಿನಗಳ ಹಿಂದೆ ಪರಿಚಯಸ್ಥರೊಬ್ಬರ ಮೂಲಕ ನವಲಗುಂದದ ಅಶೋಕ ಲಾಡ್ಜ್​ನಲ್ಲಿ ರೂಮ್ ಪಡೆದಿತ್ತು ಎಂದು ತಿಳಿದುಬಂದಿದೆ.

ವಿಷಯ ತಿಳಿದು ಘಟನಾ ಸ್ಥಳಕ್ಕೆ ಬಂದ ನವಲಗುಂದ ಠಾಣೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಕೈಗೊಂಡಿದ್ದಾರೆ. ಇನ್ನು ಪ್ರೇಮಿಗಳ ಆತ್ಮಹತ್ಯೆಗೆ ನಿಖರ ತಿಳಿದುಬಂದಿಲ್ಲ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com