ಮುಖ್ಯಮಂತ್ರಿ ಪರಿಹಾರ ನಿಧಿಗೆ ಕೆಎಸ್ಎಂಸಿಎ 1 ಕೋಟಿ ರೂ. ದೇಣಿಗೆ
ಸರ್ಕಾರಿ ಜಾಹೀರಾತು ಸಂಸ್ಥೆ ಕರ್ನಾಟಕ ಸ್ಟೇಟ್ ಮಾರ್ಕೆಟಿಂಗ್ ಕಮ್ಯೂನಿಕೇಷನ್ ಆ್ಯಂಡ್ ಅಡ್ವರ್ಟೈಸಿಂಗ್ ಲಿಮಿಟೆಡ್ ಕಂಪೆನಿಯು ಸುವರ್ಣ ಮಹೋತ್ಸವ ವರ್ಷ 2021-22ನೇ ಸಾಲಿನ ತನ್ನ ಲಾಭಾಂಶದಿಂದ ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ 1 ಕೋಟಿ ರೂ. ದೇಣಿಗೆ ನೀಡಿದೆ.
Published: 08th December 2022 10:41 AM | Last Updated: 08th December 2022 02:30 PM | A+A A-

ಕರ್ನಾಟಕ ಸ್ಟೇಟ್ ಮಾರ್ಕೆಟಿಂಗ್ ಕಮ್ಯುನಿಕೇಷನ್ ಅಂಡ್ ಅಡ್ವರ್ಟೈಸಿಂಗ್ ಲಿಮಿಟೆಡ್ ವತಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಒಂದು ಕೋಟಿ ರೂಪಾಯಿ ಚೆಕ್ ಹಸ್ತಾಂತರಿಸಲಾಯಿತು.
ಬೆಂಗಳೂರು: ಸರ್ಕಾರಿ ಜಾಹೀರಾತು ಸಂಸ್ಥೆ ಕರ್ನಾಟಕ ಸ್ಟೇಟ್ ಮಾರ್ಕೆಟಿಂಗ್ ಕಮ್ಯೂನಿಕೇಷನ್ ಆ್ಯಂಡ್ ಅಡ್ವರ್ಟೈಸಿಂಗ್ ಲಿಮಿಟೆಡ್ ಕಂಪೆನಿಯು ಸುವರ್ಣ ಮಹೋತ್ಸವ ವರ್ಷ 2021-22ನೇ ಸಾಲಿನ ತನ್ನ ಲಾಭಾಂಶದಿಂದ ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ 1 ಕೋಟಿ ರೂ. ದೇಣಿಗೆ ನೀಡಿದೆ.
2021-22ರ ಸಾಲಿನಲ್ಲಿ ಕಂಪೆನಿಯು 358.13 ಕೋಟಿ ರೂ. ವಹಿವಾಟು ನಡೆಸಿದ್ದು, ತೆರಿಗೆ ನಂತರ 11.14 ಕೋಟಿ ರೂ. ಲಾಭ ಗಳಿಸಿದೆ. ಅಲ್ಲದೆ, ಕೋವಿಡ್-19ರ ಸೋಂಕಿನಿಂದ ಕಳೆದ ಸಾಲಿನಲ್ಲಿ ಎಲ್ಲ ವ್ಯವಹಾರಗಳೂ ತಟಸ್ಥವಾಗಿತ್ತು. ಆದರೂ ಕಂಪನಿಯು ತನ್ನ ಪರಿಶ್ರಮ ಮತ್ತು ಸಮರ್ಪಿತ ಸೇವೆಯಿಂದ ಲಾಭ ಗಳಿಕೆಯ ಪಥದಲ್ಲಿ ಮುನ್ನಡೆಯುತ್ತಿದೆ.
ಇದನ್ನೂ ಓದಿ: ಕೋವಿಡ್ ಸಂದರ್ಭದಲ್ಲಿ ಪಿಎಂ ಪರಿಹಾರ ನಿಧಿಗೆ ಸಂಗ್ರಹಿಸಿದ ಸಾವಿರಾರು ಕೋಟಿ ರೂ ಎಲ್ಲಿ ಹೋಯಿತು: ಸಿದ್ದರಾಮಯ್ಯ
ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಸಮ್ಮುಖದಲ್ಲಿ ಕಂಪೆನಿಯ ಅಧ್ಯಕ್ಷ ಎಂ.ಎಸ್.ಕರಿಗೌಡ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಚೆಕ್ ಹಸ್ತಾಂತರಿಸಿದರು.