ಮಂಗಳೂರು: ಉಡುಪಿ ಜಿಲ್ಲೆಯಲ್ಲಿ ಈ ಹಿಂದೆ ಕೆಲಸ ಮಾಡುತ್ತಿದ್ದ ಆಭರಣ ಉತ್ಪಾದನಾ ಘಟಕದಿಂದ ಸುಮಾರು 7 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಬಂಧಿತ ವ್ಯಕ್ತಿಯನ್ನು ಪಶ್ಚಿಮ ಬಂಗಾಳದ ಮೇದಿನಿಪುರ ಜಿಲ್ಲೆಯ ಸುಭಾಶಿಶ್ ಬೇರಾ (38) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಿಲ್ಲೆಯ ಕೆಳಾರ್ಕಲಬೆಟ್ಟು ಎಂಬಲ್ಲಿ ನವೆಂಬರ್ 25 ರಂದು ಕಳ್ಳತನ ನಡೆದಿತ್ತು. ಆಭರಣ ತಯಾರಿಕಾ ಘಟಕದ ಮಾಜಿ ಕೆಲಸಗಾರನಾಗಿದ್ದ ಬೇರಾ ಮುಖ್ಯ ಬಾಗಿಲು ಒಡೆದು ಒಳಗಿದ್ದ ಬೆಲೆಬಾಳು ವಸ್ತುಗಳನ್ನು ತೆಗೆದುಕೊಂಡು ಪರಾರಿಯಾಗಿದ್ದ.
ಆರೋಪಿಯನ್ನು ಬಂಧಿಸಿದಾಗ ತಯಾರಿಕಾ ಘಟಕದಲ್ಲಿ ಇರಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾವನ್ನು ಬಾವಿಗೆ ಎಸೆದಿರುವುದಾಗಿ ಪೊಲೀಸರ ಬಳಿ ಒಪ್ಪಿಕೊಂಡಿದ್ದಾನೆ. ನಂತರ ಅದನ್ನು ಬಾವಿಯಿಂದ ಹೊರತೆಗೆಯಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
Advertisement