ಚಿತ್ರದುರ್ಗ: ಕೆರೆಯಲ್ಲಿ ಮುಳುಗಿ ತಾಯಿ, ಮಕ್ಕಳಿಬ್ಬರ ಸಾವು, ಗಂಡನ ಮೇಲೆ ಶಂಕೆ!

ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಗ್ರಾಮದ ಕೆರೆಯಲ್ಲಿ ಮುಳುಗಿ ತಾಯಿ ಮತ್ತು ಇಬ್ಬರು ಮಕ್ಕಳು ಸಾವನ್ನಪ್ಪಿರುವಂತಹ ದಾರುಣ ಘಟನೆ ನಡೆದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಚಿತ್ರದುರ್ಗ: ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಗ್ರಾಮದ ಕೆರೆಯಲ್ಲಿ ಮುಳುಗಿ ತಾಯಿ ಮತ್ತು ಇಬ್ಬರು ಮಕ್ಕಳು ಸಾವನ್ನಪ್ಪಿರುವಂತಹ ದಾರುಣ ಘಟನೆ ನಡೆದಿದೆ. 

ಮೃತರು ಚಳ್ಳಕೆರೆ ತಾಲೂಕಿನ ಹಿರೇಹಳ್ಳಿಯ ನಿವಾಸಿಗಳಾದ 25 ವರ್ಷದ ದುರ್ಗಮ್ಮ, 6 ವರ್ಷದ ಅಜ್ಜಯ್ಯ ಹಾಗೂ 4 ವರ್ಷದ ಸೇವಂತಿ ಎಂದು ಗುರುತಿಸಲಾಗಿದೆ. 

ಬೋಸೇದೇವರಹಟ್ಟಿ ಜಾತ್ರೆಗೆ ಪತ್ನಿ, ಮಕ್ಕಳನ್ನು ಮಹಾಂತೇಶ ಕರೆತಂದಿದ್ದನು. ಗಂಗಾ ಪೂಜೆಗೆಂದು ನಾಯಕನಹಟ್ಟಿ ಹಿರೇಕೆರೆಗೆ ಕರೆದೊಯ್ದು ಅಲ್ಲಿ ಪತ್ನಿ ಮತ್ತು ಮಕ್ಕಳನ್ನು ಆತನೆ ಕೆರೆಗೆ ತಳ್ಳಿ ಕೊಂದಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದ್ದು, ಈ ಹಿನ್ನೆಲೆಯಲ್ಲಿ ಮಹಾಂತೇಶನನ್ನು ನಾಯಕನಹಟ್ಟಿ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com