ಮೈಸೂರಿನಲ್ಲಿ ಸಾರ್ವಜನಿಕವಾಗಿ ಕೆಎಸ್‌ಆರ್‌ಟಿಸಿ ಅಧಿಕಾರಿಗಳಿಗೆ ಮಚ್ಚು ತೋರಿಸಿ ಬೆದರಿಕೆ ಹಾಕಿದ್ದ ದಂಪತಿ ಬಂಧನ

ಮೈಸೂರು ನಗರದ ಬಸ್ ಡಿಪೋದಲ್ಲಿದ್ದ ಅಂಗಡಿಗಳನ್ನು ತೆರವು ಮಾಡುವ ಸಂದರ್ಭದಲ್ಲಿ ಪೊಲೀಸರ ಸಮ್ಮುಖದಲ್ಲಿಯೇ ಸರ್ಕಾರಿ ಅಧಿಕಾರಿಗಳಿಗೆ ಮಚ್ಚು ತೋರಿಸಿ ಬೆದರಿಸಿದ ಆರೋಪದ ಮೇಲೆ ಕಾಂಗ್ರೆಸ್ ಮುಖಂಡ ಎನ್ನಲಾದ ಆರೋಪಿ ಪತಿ ಮತ್ತು ಆತನ ಹೆಂಡತಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮೈಸೂರು: ನಗರದ ಬಸ್ ಡಿಪೋದಲ್ಲಿದ್ದ ಅಂಗಡಿಗಳನ್ನು ತೆರವು ಮಾಡುವ ಸಂದರ್ಭದಲ್ಲಿ ಪೊಲೀಸರ ಸಮ್ಮುಖದಲ್ಲಿಯೇ ಸರ್ಕಾರಿ ಅಧಿಕಾರಿಗಳಿಗೆ ಮಚ್ಚು ತೋರಿಸಿ ಬೆದರಿಸಿದ ಆರೋಪದ ಮೇಲೆ ಕಾಂಗ್ರೆಸ್ ಮುಖಂಡ ಎನ್ನಲಾದ ಆರೋಪಿ ಪತಿ ಮತ್ತು ಆತನ ಹೆಂಡತಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ದಂಪತಿ ತಲೆಮರೆಸಿಕೊಂಡಿದ್ದರು. ಆದರೆ, ಈಗ ಅವರನ್ನು ಬಂಧಿಸಲಾಗಿದೆ ಎಂದು ಮೈಸೂರು ಪೊಲೀಸ್ ಆಯುಕ್ತ ರಮೇಶ್ ಬಾನೋತ್ ತಿಳಿಸಿದ್ದಾರೆ.

ಬಂಧಿತರನ್ನು ಕಾಂಗ್ರೆಸ್ ಮುಖಂಡ ಶಫೀಕ್ ಅಹ್ಮದ್ ಮತ್ತು ಅವರ ಪತ್ನಿ ಸೈಯದ್ ಮುನಿಬುನ್ನಿಸಾ ಎಂದು ಗುರುತಿಸಲಾಗಿದೆ. ಇಬ್ಬರನ್ನೂ ಪೊಲೀಸರು ರೌಡಿ ಶೀಟರ್‌ಗಳ ಪಟ್ಟಿಗೆ ಸೇರಿಸಿದ್ದಾರೆ ಎಂದು ತಿಳಿಸಿದರು.

ಆರೋಪಿ ದಂಪತಿ ಇತರ ಕೆಲವರ ಜೊತೆ ಸೇರಿ ಸಾತಗಳ್ಳಿ ಬಸ್ ಡಿಪೋದ ಆವರಣದಲ್ಲಿನ ತಮ್ಮ ಅಂಗಡಿಗಳನ್ನು ತೆರವುಗೊಳಿಸುವಂತೆ ನೋಟಿಸ್ ನೀಡಿದ್ದ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಅಧಿಕಾರಿಗಳಿಗೆ ಮಚ್ಚು ತೋರಿಸಿ ಬೆದರಿಕೆ ಹಾಕಿದ್ದರು.

ದಂಪತಿ ಎರಡು ವರ್ಷಗಳಿಂದ ಬಾಡಿಗೆ ಪಾವತಿಸದ ಕಾರಣ ನ್ಯಾಯಾಲಯದ ಆದೇಶದಂತೆ ಈ ಕ್ರಮ ಕೈಗೊಳ್ಳಲಾಗಿದೆ. ಡಿಸೆಂಬರ್ 10 ರಂದು ಈ ಘಟನೆ ನಡೆದಿದ್ದು, ಇತರ ಮಹಿಳೆಯರೊಂದಿಗೆ ದಂಪತಿ ಅಧಿಕಾರಿಗಳನ್ನು ನಿಂದಿಸಿದ್ದರು ಮತ್ತು ಮಚ್ಚು ತೋರಿಸಿ ಬೆದರಿಸಿದ್ದರು.

ಅದು ವಿವಾದಕ್ಕೆ ತಿರುಗಿದಾಗ ಅವರು ತಲೆಮರೆಸಿಕೊಂಡಿದ್ದರು. ಈ ಕುರಿತು ಕೆಎಸ್‌ಆರ್‌ಟಿಸಿ ವಿಭಾಗೀಯ ಸಾರಿಗೆ ಅಧಿಕಾರಿ ಮರಿಗೌಡ ಅವರು ಮೈಸೂರಿನ ಉದಯಗಿರಿ ಪೊಲೀಸರಿಗೆ ದೂರು ನೀಡಿದ್ದರು.

ಘಟನೆಯ ಫೋಟೋಗಳು ಮತ್ತು ವಿಡಿಯೋಗಳು ವೈರಲ್ ಆಗಿವೆ. ಪಕ್ಕದ ಕೊಡಗು ಜಿಲ್ಲೆಯ ಹಳ್ಳಿಯಲ್ಲಿ ದಂಪತಿ ಪತ್ತೆಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇತರ ಮೂವರು ಆರೋಪಿಗಳಿಗಾಗಿ ಶೋಧ ಕಾರ್ಯ ಆರಂಭಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com