ಬೆಳಗಾವಿ ಅಧಿವೇಶನ: ನಾಳೆ ವಿಧಾನಸಭೆಯಲ್ಲಿ ಎಸ್​​ಸಿ,ಎಸ್​​ಟಿ ಮೀಸಲಾತಿ ಹೆಚ್ಚಳ ವಿಧೇಯಕ ಸೇರಿ 4 ಮಸೂದೆ ಮಂಡನೆ

ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು, ಮೊದಲ ದಿನ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಯ್ತು. ಎರಡನೇ ದಿನವಾದ ಮಂಗಳವಾರ ವಿಧಾನಸಭೆಯಲ್ಲಿ ಎಸ್​​ಸಿ, ಎಸ್​​ಟಿ ಸಮುದಾಯದ...
ಬೆಳಗಾವಿ ಸುವರ್ಣ ವಿಧಾನಸೌಧ
ಬೆಳಗಾವಿ ಸುವರ್ಣ ವಿಧಾನಸೌಧ

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು, ಮೊದಲ ದಿನ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಯ್ತು. ಎರಡನೇ ದಿನವಾದ ಮಂಗಳವಾರ ವಿಧಾನಸಭೆಯಲ್ಲಿ ಎಸ್​​ಸಿ, ಎಸ್​​ಟಿ ಸಮುದಾಯದ ಮೀಸಲಾತಿ ಹೆಚ್ಚಳ ವಿಧೇಯಕ ಹಾಗೂ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರ ವಿಧೇಯಕ ಸೇರಿ ನಾಲ್ಕು ಮಸೂದೆ ಮಂಡನೆಯಾಗಲಿವೆ.

ಆಡಳಿತರೂಢ ಬಿಜೆಪಿ ಸರ್ಕಾರ ಕೆಲವೇ ತಿಂಗಳಲ್ಲಿ ನಡೆಯುವ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಎಸ್​​ಸಿ, ಎಸ್​​ಟಿ ಸಮುದಾಯದ ಮೀಸಲಾತಿ ಹೆಚ್ಚಳ ವಿಧೇಯಕ ಮಂಡನೆಗೆ ಮುಂದಾಗಿದೆ. 

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವ ನಿರ್ಧಾರವನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಈ ಹಿಂದಿನ ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡಲಾಗಿದೆ.

ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇ.15 ರಿಂದ 17ಕ್ಕೆ ಮತ್ತು ಪರಿಶಿಷ್ಟ ಪಂಡಗಳ ಮೀಸಲಾತಿ ಶೇ.3ರಿಂದ ಶೇ.7ಕ್ಕೆ ಹೆಚ್ಚಿಸಲಾಗಿದೆ. ಆದರೆ ಕೇವಲ ಸರ್ಕಾರಿ ಆದೇಶದ ಮೂಲಕ ಮೀಸಲಾತಿ ಹೆಚ್ಚಿಸಿದರೆ ನ್ಯಾಯಾಲಯದಲ್ಲಿ ಹಿನ್ನಡೆಯಾಗಬಹುದು ಎಂಬ ಕಾರಣಕ್ಕೆ ಮಸೂದೆಯೊಂದನ್ನು ರೂಪಿಸಿ, ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆಯಲಾಗಿದೆ. ಬಳಿಕ ಸುಗ್ರೀವಾಜ್ಞೆ ಮೂಲಕ ಅದನ್ನು ಜಾರಿಗೊಳಿಸಲಾಗಿದೆ. ಆರು ತಿಂಗಳೊಳಗೆ ತಿದ್ದುಪಡಿ ಮಸೂದೆಗೆ ವಿಧಾನ ಮಂಡಲದ ಒಪ್ಪಿಗೆ ಪಡೆಯಬೇಕು. ನಂತರ ಸಂವಿಧಾನದ ಒಂಭತ್ತನೇ ಪರಿಚ್ಛೇದಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂಬ ಸಲಹೆಯನ್ನು ನಾಗಮೋಹನ್ ದಾಸ್ ಅವರು ವರದಿ ನೀಡಿದ್ದರು. ಅದರ ಅನ್ವಯ ನಾಳಿನ ಅಧಿವೇಶನದಲ್ಲಿ ಎಸ್​​ಸಿ, ಎಸ್​​ಟಿ ಸಮುದಾಯದ ಮೀಸಲಾತಿ ಹೆಚ್ಚಳ ವಿಧೇಯಕ ಮಂಡನೆ ಮಾಡಲಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com