ವಿಧಾನಸಭೆಯಲ್ಲಿ ಸಾವರ್ಕರ್ ಫೋಟೋ ಅನಾವರಣ ಸಮರ್ಥಿಸಿಕೊಂಡ ಬಿಜೆಪಿ

ಬೆಳಗಾವಿ ವಿಧಾನಸಭೆಯಲ್ಲಿ ವೀರ್ ಸಾವರ್ಕರ್ ಫೋಟೋ ಅನಾವರಣಗೊಳಿಸಿದ್ದನ್ನು ಬಿಜೆಪಿ ಸೋಮವಾರ ಸಮರ್ಥಿಸಿಕೊಂಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಳಗಾವಿ: ಬೆಳಗಾವಿ ವಿಧಾನಸಭೆಯಲ್ಲಿ ವೀರ್ ಸಾವರ್ಕರ್ ಫೋಟೋ ಅನಾವರಣಗೊಳಿಸಿದ್ದನ್ನು ಬಿಜೆಪಿ ಸೋಮವಾರ ಸಮರ್ಥಿಸಿಕೊಂಡಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು, ಖಂಡಿತವಾಗಿಯೂ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳಿವೆ. ಆದರೆ, ಸಾವರ್ಕರ್ ಸ್ವಾತಂತ್ರ್ಯ ಹೋರಾಟಗಾರ. ವಿಧಾನಸಭೆಯಲ್ಲಿ ಸಾವರ್ಕರ್ ಫೋಟೋ ಹಾಕುವುದು ಬೇಡ ಎಂದರೆ, ದಾವೂದ್ ಇಬ್ರಾಹಿಂ ಫೋಟೋ ಹಾಕಬೇಕಾ ಎಂದು ಸಿದ್ದರಾಮಯ್ಯ ಅವರನ್ನು ಕೇಳಿ ಎಂದು ಹೇಳಿದ್ದಾರೆ.

ಇದೇ ವೇಳೆ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಅವರು, ಕಾಂಗ್ರೆಸ್ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ. ಸದಾಕಾಲ ಸ್ವಾತಂತ್ರ್ಯ ಹೋರಾಟದಲ್ಲಿ ತಮ್ಮ ಪಾತ್ರ, ತ್ಯಾಗದ ಬಗ್ಗೆ ಮಾತನಾಡುತ್ತಾರೆ. ಆದರೆ, ಅಂದಿದ್ದ ಕಾಂಗ್ರೆಸ್ ಇಂದು ಇರುವ ಕಾಂಗ್ರೆಸ್ ಒಂದೇ ಅಲ್ಲ. ಇಂದು ನಾವು ನೋಡುತ್ತಿರುವ ಕಾಂಗ್ರೆಸ್ ನಕಲಿಯಾಗಿದೆ ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com