social_icon

ಮಂಗಳೂರು: ಮಕ್ಕಳಿಗೆ ಮಾನಸಿಕ ಆರೋಗ್ಯ ಮಹತ್ವ ತಿಳಿಸಲು 'ಮನೋಸ್ಥೈರ್ಯ' ಕಾರ್ಯಕ್ರಮ ಆರಂಭ!

ಮಕ್ಕಳಿಗೆ ಮಾನಸಿಕ ಆರೋಗ್ಯದ ಮಹತ್ವವನ್ನು ತಿಳಿಸಲು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ ಅವರ ನೇತೃತ್ವದಲ್ಲಿ ‘ಮನೋಸ್ತೈರ್ಯ’ ಎಂಬ ವಿನೂತನ ಕಾರ್ಯಕ್ರಮವನ್ನು ಆರಂಭಿಸಲಾಗಿದೆ.

Published: 21st December 2022 10:52 AM  |   Last Updated: 21st December 2022 12:10 PM   |  A+A-


File photo

ಸಂಗ್ರಹ ಚಿತ್ರ

Posted By : manjula
Source : The New Indian Express

ಮಂಗಳೂರು: ಮಕ್ಕಳಿಗೆ ಮಾನಸಿಕ ಆರೋಗ್ಯದ ಮಹತ್ವವನ್ನು ತಿಳಿಸಲು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ ಅವರ ನೇತೃತ್ವದಲ್ಲಿ ‘ಮನೋಸ್ಥೈರ್ಯ’ ಎಂಬ ವಿನೂತನ ಕಾರ್ಯಕ್ರಮವನ್ನು ಆರಂಭಿಸಲಾಗಿದೆ.

ಮಂಗಳವಾರ ಮಂಗಳೂರಿನಲ್ಲಿ ಈ ಉಪಕ್ರಮಕ್ಕೆ ಚಾಲನೆ ನೀಡಲಾಗಿದ್ದು, ಕಾರ್ಯಕ್ರಮದಡಿ ಜಿಲ್ಲೆಯ ಪ್ರೌಢಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಮಾನಸಿಕ ಆರೋಗ್ಯದ ಬಗ್ಗೆ ಅರಿವು ಮತ್ತು ಸಮಾಲೋಚನೆ ನೀಡಲಾಗುತ್ತಿದೆ.

ಕಾರ್ಯಕ್ರಮದ ಮೂಲಕ ಶಾಲೆಯ ಶಿಕ್ಷಕರಿಗೆ ಮನಶ್ಶಾಸ್ತ್ರಜ್ಞರು ಮತ್ತು ಮನೋವೈದ್ಯರಿಂದ ತರಬೇತಿ ನೀಡಲಾಗುತ್ತದೆ. ಜಿಲ್ಲೆಯಲ್ಲಿ ಮಾನಸಿಕ ಆರೋಗ್ಯ ಮತ್ತು ಆತ್ಮಹತ್ಯೆ ತಡೆ ಕಾರ್ಯಕ್ರಮಕ್ಕೆ ಇದು ಮೊದಲ ಉಪಕ್ರಮವಾಗಿದೆ.

ಇದನ್ನೂ ಓದಿ: ಕೊಪ್ಪಳ: ವಿಷಪೂರಿತ ಆಹಾರ ಸೇವಿಸಿ 20ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಈಗಾಗಲೇ 220 ಶಿಕ್ಷಕರನ್ನು ಗುರುತಿಸಲಾಗಿದ್ದು, 2023ರ ಜನವರಿಯಿಂದ ಕಾರ್ಯಕ್ರಮ ಆರಂಭವಾಗುವ ನಿರೀಕ್ಷೆಯಿದೆ.

ಮಕ್ಕಳಲ್ಲಿ ಹೆಚ್ಚುತ್ತಿರುವ ಆತ್ಮಹತ್ಯೆ ಮತ್ತು ಖಿನ್ನತೆಯ ಸಂಖ್ಯೆಯು ಕಳವಳಕ್ಕೆ ಪ್ರಮುಖ ಕಾರಣವಾಗಿದೆ. ಈ ಸಮಸ್ಯೆಗೆ ಅಂತ್ಯ ಹಾಡಲು ನಾವು ಸರಿಯಾದ ಸಮಯದಲ್ಲಿ ಮತ್ತು ಸರಿಯಾದ ವಯಸ್ಸಿನಲ್ಲಿ ಮಧ್ಯಪ್ರವೇಶಿಸಬೇಕಾಗಿದೆ. ಅನೇಕ ವಿದ್ಯಾರ್ಥಿಗಳು, ವಿಶೇಷವಾಗಿ ಪ್ರೌಢಶಾಲೆ ಮತ್ತು ಕಾಲೇಜುಗಳಲ್ಲಿ ಓದುತ್ತಿರುವವರು ಜೀವನದ ವಾಸ್ತವಗಳನ್ನು ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇದರಿಂದ ಕಷ್ಟಕರ ಸಂದರ್ಭಗಳನ್ನು ಎದುರಿಸಲು ಅಸಹಾಯಕರಾಗುತ್ತಾರೆ. ತಮ್ಮ ಸಮಸ್ಯೆಗಳಿಗೆ ಪರ್ಯಾಯ ಪರಿಹಾರಗಳನ್ನು ಕಂಡುಗೊಳ್ಳದೆ,ಖಿನ್ನತೆಯಲ್ಲಿ ಏಕಾಂಗಿಯಾಗಿ ಹೋರಾಡುತ್ತಾರೆ.

ಖಿನ್ನತೆ, ಹತಾಶೆ, ಆತಂಕ, ಅನಿಯಂತ್ರಿತ ಕೋಪ ಮತ್ತು ಇತರ ಮಾನಸಿಕ ಅಸ್ವಸ್ಥತೆಗಳಿಗೆ ಬಲಿಯಾಗುತ್ತಿದ್ದಾರೆ. ಆದ್ದರಿಂದ, ಕೆಲವು ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದೆ. ಇದು ಸಮಯದ ಅಗತ್ಯವಾಗಿದೆ. ಕೌನ್ಸೆಲಿಂಗ್‌ನಿಂದ ವಿದ್ಯಾರ್ಥಿಗಳು ಇದರಿಂದ ಹೊರಬರಲು ಖಂಡಿತಾ ಸಹಕಾರಿಯಾಗುತ್ತದೆ ಎಂದು ಡಾ.ಕುಮಾರ ಹೇಳಿದ್ದಾರೆ.

ಇದನ್ನೂ ಓದಿ: ಗದಗ ವಿದ್ಯಾರ್ಥಿ ಹತ್ಯೆ ಪ್ರಕರಣ: ಶಿಕ್ಷಕ ಮುತ್ತಪ್ಪ ಹಡಗಲಿ ಬಂಧನ; ಇಬ್ಬಿಬ್ಬರ ಜೊತೆಗೆ ಅಮ್ಮನ ಸಲುಗೆ ಮಗನಿಗೆ ಮುಳುವು!

‘ನೋ ಬ್ಯಾಗ್’ ದಿನದಂದು ಮಕ್ಕಳ ಮಾನಸಿಕ ಆರೋಗ್ಯಕ್ಕಾಗಿ ಒಂದು ಗಂಟೆ ಮೀಸಲಿಡಲಾಗುವುದು. ಪ್ರತಿ ಶಾಲೆಯ ಮುಖ್ಯೋಪಾಧ್ಯಾಯಿನಿ/ ಮುಖ್ಯೋಪಾಧ್ಯಾಯರು ಮಾನಸಿಕ ಆರೋಗ್ಯದ ಕುರಿತು ತರಗತಿಗಳನ್ನು ನಡೆಸಲು ಒಬ್ಬ ಶಿಕ್ಷಕರನ್ನು ನೋಡಲ್ ಅಧಿಕಾರಿ ಅಥವಾ ಮಾರ್ಗದರ್ಶಕರಾಗಿ ನೇಮಿಸುತ್ತಾರೆ. ಶಾಲೆಗಳಲ್ಲಿ ಮಾನಸಿಕ ಆರೋಗ್ಯ ಸಮಾಲೋಚನಾ ಕೇಂದ್ರವನ್ನು ಸಹ ತೆರೆಯಲಾಗುವುದು ಮತ್ತು ಒತ್ತಡದಲ್ಲಿರುವ ಮಕ್ಕಳಿಗೆ ವಿಶೇಷ ಸಮಾಲೋಚನೆಯನ್ನು ನೀಡುವ ಮತ್ತು ಪೋಷಕರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲಾಗುತ್ತದೆ. ಮಾನಸಿಕ ಆರೋಗ್ಯ ಮತ್ತು ಸ್ಥಿರತೆ ಕುರಿತು ತರಗತಿಗಳು ಪ್ರತಿ ವಾರ ನಡೆಯಲಿವೆ ಎಂದು ತಿಳಿಸಿದ್ದಾರೆ.


Stay up to date on all the latest ರಾಜ್ಯ news
Poll
Khalistani militant Hardeep Singh Nijjar

ಸಿಖ್ ಪ್ರತ್ಯೇಕತಾವಾದಿ ನಿಜ್ಜರ್ ಹತ್ಯೆಯಲ್ಲಿ ಭಾರತದ ಪಾತ್ರವಿದೆ ಎಂಬ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರ ಆರೋಪವನ್ನು ನೀವು ನಂಬುತ್ತೀರಾ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp