ರಾಜ್ ಕುಟುಂಬದ ಬಗ್ಗೆ ಕೆಟ್ಟದಾಗಿ ಮಾತನಾಡಿದ ಆರೋಪ; ಹಿಂದೂ ಸಂಘಟನೆ ಮುಖಂಡ ಪುನೀತ್​​ ಕೆರೆಹಳ್ಳಿಗೆ ಧರ್ಮದೇಟು!

ನಟ ಸಾರ್ವಭೌಮ ಡಾ. ರಾಜ್‌ಕುಮಾರ್​ ಫ್ಯಾಮಿಲಿ ಬಗ್ಗೆ ಕೆಟ್ಟದಾಗಿ ಮಾತಾಡಿದ್ದ ಆರೋಪದ ಮೇರೆಗೆ ಪುನೀತ್​ ಕೆರೆಹಳ್ಳಿಗೆ ಕನ್ನಡಪರ ಹೋರಾಟಗಾರರು ಧರ್ಮದೇಟು ನೀಡಿದ್ದಾರೆ. ಈ ವಿಡಿಯೋ ಈಗ ಮೊಬೈಲ್​ನಲ್ಲಿ ಸೆರೆಯಾಗಿದೆ.
ಪುನೀತ್ ಕೆರೆಹಳ್ಳಿ
ಪುನೀತ್ ಕೆರೆಹಳ್ಳಿ

ಬೆಂಗಳೂರು: ನಟ ಸಾರ್ವಭೌಮ ಡಾ. ರಾಜ್‌ಕುಮಾರ್​ ಫ್ಯಾಮಿಲಿ ಬಗ್ಗೆ ಕೆಟ್ಟದಾಗಿ ಮಾತಾಡಿದ್ದ ಆರೋಪದ ಮೇರೆಗೆ ಪುನೀತ್​ ಕೆರೆಹಳ್ಳಿಗೆ ಕನ್ನಡಪರ ಹೋರಾಟಗಾರರು ಧರ್ಮದೇಟು ನೀಡಿದ್ದಾರೆ. ಈ ವಿಡಿಯೋ ಈಗ ಮೊಬೈಲ್​ನಲ್ಲಿ ಸೆರೆಯಾಗಿದೆ.

ವರದಿಗಳ ಪ್ರಕಾರ ಚಾಮರಾಜಪೇಟೆಯಲ್ಲಿ ಈ ಘಟನೆ ನಡೆದಿದ್ದು,  ರಾಜ್ ಕುಮಾರ್ ಫ್ಯಾಮಿಲಿ ಬಗ್ಗೆ ಹಗುರವಾಗಿ ಮಾತನಾಡಿದ್ದೀಯಾ? ನೀನು ಕ್ಷಮೆ ಕೇಳಬೇಕು ಎಂದು ತಂಡ ಅವಾಜ್ ಹಾಕಿದ ಬಳಿಕ ಪುನೀತ್ ಕೆರೆಹಳ್ಳಿ ಮೇಲೆ ಹಲ್ಲೆ ನಡೆಸುತ್ತಿರುವುದು ಕಂಡು ಬಂದಿದೆ.

ಶಿವಕುಮಾರ್ ನಾಯ್ಕ್ ಬಣ ಹಲ್ಲೆ ನಡೆಸಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಘಟನೆಗೂ ಮುನ್ನ ಪುನೀತ್ ಕೆರೆಹಳ್ಳಿಗೆ ಕರೆ ಮಾಡಿ ಕ್ಷಮೆ ಕೇಳುವಂತೆ ಹೇಳಲಾಗಿತ್ತು. ಆದರೆ, ಈ ವೇಳೆ ಕ್ಷಮೆ ಕೇಳಲು ನಿರಾಕರಿಸಿದ ಪುನೀತ್ ನಾನು ಚಾಮರಾಜಪೇಟೆಯಲ್ಲೇ ಇದ್ದೇನೆ, ಬರೋದಾದ್ರೆ ಬನ್ನಿ ಎಂದು ಅವಾಜ್ ಹಾಕಿದ್ದಾರೆ ಎನ್ನಲಾಗಿದೆ. ಹಲ್ಲೆ ಹಿನ್ನೆಲೆಯಲ್ಲಿ ಚಾಮರಾಜಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com