ಮಂಗಳೂರು: ಬೆಳ್ತಂಗಡಿಯ ಮಲೆಬೆಟ್ಟು ಬಳಿ ಶನಿವಾರ ಶಾಲಾ ಬಸ್ ಮತ್ತು ಗೂಡ್ಸ್ ಆಟೋರಿಕ್ಷಾ ನಡುವೆ ಸಂಭವಿಸಿದ ಮುಖಾಮುಖಿ ಢಿಕ್ಕಿಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಇತರ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.
ಆಟೋ ರಿಕ್ಷಾದಲ್ಲಿದ್ದ ಕುವೆಟ್ಟು ಗ್ರಾಮದ ಪಿಲಿಚಾಮುಂಡಿಕಲ್ಲು ನಿವಾಸಿ ಅಬ್ದುಲ್ ರಜಾಕ್ ಸಾವನ್ನಪ್ಪಿದ್ದವರು. ಆಟೋ ರಿಕ್ಷಾ ಚಾಲಕ ಹನೀಫ್, ಕೆ ಮೊಹಮ್ಮದ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಘಟನೆಯಲ್ಲಿ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಬೆಳ್ತಂಗಡಿ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Advertisement