ಬೆಳಗಾವಿ ಜಿಲ್ಲಾಸ್ಪತ್ರೆಗೆ ಸಚಿವರಾದ ಡಾ. ಕೆ. ಸುಧಾಕರ್, ಆರ್. ಅಶೋಕ್  ಭೇಟಿ: ಪರಿಶೀಲನೆ

ವಿಶ್ವದ ಕೆಲವು ದೇಶಗಳಲ್ಲಿ ಕೋವಿಡ್ ಸೋಂಕಿತರ ಪ್ರಮಾಣ ಹೆಚ್ಚಳ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸರ್ಕಾರ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಬೆಳಗಾವಿ ಜಿಲ್ಲಾಸ್ಪತ್ರೆಗೆ ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಹಾಗೂ ಕಂದಾಯ ಸಚಿವ ಆರ್. ಅಶೋಕ್ ಸೋಮವಾರ ಭೇಟಿ ನೀಡಿ,  ಪರಿಶೀಲನೆ ನಡೆಸಿದರು.
ಡಾ. ಕೆ. ಸುಧಾಕರ್, ಆರ್. ಅಶೋಕ್ ಅವರ ಚಿತ್ರ
ಡಾ. ಕೆ. ಸುಧಾಕರ್, ಆರ್. ಅಶೋಕ್ ಅವರ ಚಿತ್ರ

ಬೆಳಗಾವಿ: ವಿಶ್ವದ ಕೆಲವು ದೇಶಗಳಲ್ಲಿ ಕೋವಿಡ್ ಸೋಂಕಿತರ ಪ್ರಮಾಣ ಹೆಚ್ಚಳ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸರ್ಕಾರ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಬೆಳಗಾವಿ ಜಿಲ್ಲಾಸ್ಪತ್ರೆಗೆ ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಹಾಗೂ ಕಂದಾಯ ಸಚಿವ ಆರ್. ಅಶೋಕ್ ಸೋಮವಾರ ಭೇಟಿ ನೀಡಿ,  ಪರಿಶೀಲನೆ ನಡೆಸಿದರು.

ಈ ಕುರಿತು ಟ್ವೀಟ್ ಮಾಡಿರುವ ಸಚಿವ ಡಾ. ಕೆ. ಸುಧಾಕರ್, ಆಸ್ಪತ್ರೆ ಭೇಟಿ ವೇಳೆ ಅಲ್ಲಿನ  ಆರೋಗ್ಯ ವ್ಯವಸ್ಥೆಯ ಸಿದ್ಧತೆಗಳನ್ನು ಪರೀಶಿಲಿಸಲಾಯಿತು.

ಆಕ್ಸಿಜನ್ ಘಟಕ, ತೀವ್ರ ನಿಗಾ ಘಟಕ, ಔಷಧಿ ದಾಸ್ತಾನು ಸೇರಿದಂತೆ ಆಸ್ಪತ್ರೆಯ ಮೂಲಸೌಕರ್ಯಗಳ ವಿವರ ಪಡೆದು, ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸನ್ನದ್ಧರಾಗಿರುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು. ರಾಜ್ಯದ ಆಸ್ಪತ್ರೆಗಳಲ್ಲಿ ಸಿದ್ಧತೆಯನ್ನು ಖಾತ್ರಿ ಪಡಿಸಿಕೊಳ್ಳಲು ನಾಳೆ ಅಣಕು ಡ್ರಿಲ್ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com