social_icon

ಕೇಂದ್ರ ಬಜೆಟ್ ರಾಷ್ಟ್ರದ ಆರ್ಥಿಕಬಲ ವೃದ್ಧಿಸುವ ಬಜೆಟ್:‌ ಮುಖ್ಯಮಂತ್ರಿ ಬಿಎಸ್ ಬೊಮ್ಮಾಯಿ

ಕೋವಿಡ್ ನಂತರದ ಭಾರತದ ಆರ್ಥಿಕತೆಯ ಬಲ ಹೆಚ್ಚಿಸುವ ಬಜೆಟ್ ಇದಾಗಿದ್ದು ಬೆಳವಣಿಗೆಗೆ ಪೂರಕವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವ್ಯಾಖ್ಯಾನಿಸಿದ್ದಾರೆ.

Published: 01st February 2022 07:04 PM  |   Last Updated: 01st February 2022 07:50 PM   |  A+A-


Online Desk

ಬೆಂಗಳೂರು: ಕೋವಿಡ್ ನಂತರದ ಭಾರತದ ಆರ್ಥಿಕತೆಯ ಬಲ ಹೆಚ್ಚಿಸುವ ಬಜೆಟ್ ಇದಾಗಿದ್ದು ಬೆಳವಣಿಗೆಗೆ ಪೂರಕವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವ್ಯಾಖ್ಯಾನಿಸಿದ್ದಾರೆ.

ಮೂಲಸೌಕರ್ಯ ವಲಯದಲ್ಲಿ ದೊಡ್ಡ ಉತ್ತೇಜ ನ ಕೊಡಲಾಗಿದೆ. ಇವತ್ತಿನ ಕೇಂದ್ರ ಬಜೆಟ್ ಕೋವಿಡ್ ನೆರಳಿನಲ್ಲಿ ಮೊದಲ ಬಜೆಟ್ ಆಗಿದೆ. ಎರಡು ಅಲೆಗಳ ಕರಿಛಾಯೆಯಿಂದ ಆರ್ಥಿಕತೆ ಹಿಂಜರಿತ ಆಗಿತ್ತು ಈ ಬಾರಿ ಅರ್ಥಿಕತೆ ಹೆಚ್ಚಿಸಲು ಆದ್ಯತೆ ನೀಡಲಾಗಿದ್ದು ಉತ್ಪಾದನೆ ಹೆಚ್ಚಿಸುವತ್ತಲೂ ಗಮನ ನೀಡಲಾಗಿದೆ ಎಂದು ಶ್ಲಾಘಿಸಿದ್ದಾರೆ.

ಆರ್ಥಿಕತೆಯನ್ನು ಸುಸ್ಥಿರಗೊಳಿಸುವ ಬಜೆಟ್ ಇದಾಗಿದ್ದು ಗ್ರಾಮೀಣ ಭಾರತ ಸಬಲೀಕರಣ ಮಾಡುವ ನಿಟ್ಟಿನಲ್ಲಿ ಸಶಕ್ತವಾಗಿದೆ. ನಗರಗಳ‌ ಅಭಿವೃದ್ಧಿಗೆ ಹೊಸತನ ಕೊಡಲು ಡಿಜಿಟೈಲೈಸೇಷನ್ ಮಾಡಲಾಗಿದೆ. ಸಾರಿಗೆಗೆ ದೊಡ್ಡ ಮೊತ್ತ ನೀಡಲಾಗಿದೆ. ನಗರ, ಗ್ರಾಮೀಣ ಭಾಗಗಳ ಅಭಿವೃದ್ಧಿಗೆ ಸಮನಾದ ಒತ್ತು ನೀಡಲಾಗಿದೆ. ಎಣ್ಣೆ ಕಾಳುಗಳ ಆಮದಿಗೆ ಒತ್ತು ನೀಡಲಾಗಿದೆ. ರಕ್ಷಣಾ ವಲಯದಲ್ಲಿ 68% ರಷ್ಟು ನಮ್ಮ ದೇಸೀ ಉತ್ಪಾದಕ ಬಿಡಿಭಾಗಗಳ ತಯಾರಿಗೆ ಒತ್ತು ನೀಡಲಾಗಿದೆ. ಹೂಡಿಕೆ ದೊಡ್ಡ ಪ್ರಮಾಣದಲ್ಲಿ ಆಗಿದೆ ಎಂದು ವಿಶ್ಲೇಷಿಸಿದ್ದಾರೆ.

ಮುಂದಿನ ಒಂದು ವರ್ಷ ಆರ್ಥಿಕ ಬೆಳವಣಿಗೆ, ಸ್ಥಿರೀಕರಣಕ್ಕೆ ಪೂರಕ. ಸಾಮಾನ್ಯ ಜನರ ದೃಷ್ಟಿಯಿಂದಲೂ ಆದ್ಯತೆ ಕೊಡಲಾಗಿದೆ. ಸಣ್ಣ ಕೈಗಾರಿಕೆಗಳಿಗೆ 5 ಲಕ್ಷ ಕೋಟಿ ಇಟ್ಟಿದ್ದಾರೆ. ಇದರಿಂದಲೂ ನಮ್ಮ ರಾಜ್ಯಕ್ಕೆ ಅನುಕೂಲ. ರಾಷ್ಟ್ರೀಯ ಹೆದ್ದಾರಿ, ರೈಲ್ವೆ ಯೋಜನೆಗಳಲ್ಲೂ ರಾಜ್ಯಕ್ಕೆ ಅನುಕೂಲವಾಗಿದೆ. ಆಡಳಿತದಲ್ಲಿ ಆಧುನಿಕತೆ ತರುವ ಬಜೆಟ್  ಆಗಿದೆ. ಕರ್ನಾಟಕದ ಮಟ್ಟಿಗೆ ಬಂಡವಾಳ ಹೂಡಿಕೆ ವಲಯಕ್ಕೆ ಉತ್ತೇಜನ ದೊರೆತಿದೆ. ಈ ಸಲ ಈ ಸಲ 29 ಸಾವಿರ ಕೋಟಿ ಬಂಡವಾಳ ನಿರೀಕ್ಷೆ ಮಾಡಲಾಗಿದೆ. ಮೆಟ್ರೋಗೆ ಹೆಚ್ಚಿನ ಅನುದಾನ ಸಿಗುವ ಸಾಧ್ಯತೆ ಇದೆ. 

ಪ್ರವಾಸೋದ್ಯಮ, ಸೇವಾವಲಯಗಳಿಗೂ ಉತ್ತೇಜನ ದೊರೆಯುತ್ತದೆ. ನದಿ ಜೋಡಣೆ ಬಗ್ಗೆ ಹೇಳಿದ್ದಾರೆ. ಇದರ ಡಿಪಿಆರ್ ಗೆ ರಾಜ್ಯಗಳು ಒಪ್ಪಿದರೆ ಚಾಲನೆ ಕೊಡೋದಾಗಿ ಕೇಂದ್ರ ಹೇಳಿದೆ. ಡಿಪಿಆರ್ ಮಾಡುವಾಗ ನಮ್ಮ ರಾಜ್ಯದ ಪಾಲು ಸರಿಯಾದ ರೀತಿಯಲ್ಲಿ ನಿರ್ಧಾರ ಆಗಬೇಕು. ಯುಪಿಎ ಅವಧಿಯಲ್ಲಿ ಸರಿಯಾಗಿ ನಿರ್ಧಾರ ಆಗಿರ್ಲಿಲ್ಲ. ನಮ್ಮ ಪಾಲು ನಿರ್ಧಾರ ಆಗೋವರೆಗೂ ಡಿಪಿಆರ್ ಮಾಡಲು ಒಪ್ಪಲ್ಲ ಇದೇ‌ ನಿಲುವಿಗೆ ನಾವು ಅಂಟಿಕೊಂಡಿರುತ್ತೇವೆ ಎಂದು ಪ್ರತಿಪಾದಿಸಿದ್ದಾರೆ


Stay up to date on all the latest ರಾಜ್ಯ news
Poll
rahul-gandhi

ಮಾನಹಾನಿ ಪ್ರಕರಣದಲ್ಲಿ ಜೈಲು ಶಿಕ್ಷೆ; ಲೋಕಸಭಾ ಸದಸ್ಯ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹ: ಇದರಿಂದ...


Result
ಕಾಂಗ್ರೆಸ್ ಗೆ ಹಿನ್ನಡೆ
ಕಾಂಗ್ರೆಸ್ ಗೆ ಪ್ರಯೋಜನ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp