ಮೆಟ್ರೊ ರೈಲು ಕಾಮಗಾರಿ: 138 ಮರ ಕತ್ತರಿಸಲು ಬಿಎಂಆರ್ಸಿಎಲ್ಗೆ ನ್ಯಾಯಾಲಯದಿಂದ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ನಮ್ಮ ಮೆಟ್ರೊ ರೈಲು ಹಳಿ ನಿರ್ಮಾಣಕ್ಕೆ ಅಡ್ಡಿಯಾಗಿರುವ 138 ಮರಗಳನ್ನು ಕತ್ತರಿಸಲು ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತಕ್ಕೆ ಬುಧವಾರ ಅನುಮತಿಸಿರುವ ಕರ್ನಾಟಕ ಹೈಕೋರ್ಟ್, 84 ಮರಗಳನ್ನು ಸ್ಥಳಾಂತರಿಸಲು ಅಸ್ತು ಎಂದಿದೆ.
Published: 10th February 2022 12:50 AM | Last Updated: 10th February 2022 12:54 AM | A+A A-

ಕರ್ನಾಟಕ ಹೈಕೋರ್ಟ್
ಬೆಂಗಳೂರು: ಬೆಂಗಳೂರಿನಲ್ಲಿ ನಮ್ಮ ಮೆಟ್ರೊ ರೈಲು ಹಳಿ ನಿರ್ಮಾಣಕ್ಕೆ ಅಡ್ಡಿಯಾಗಿರುವ 138 ಮರಗಳನ್ನು ಕತ್ತರಿಸಲು ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತಕ್ಕೆ ಬುಧವಾರ ಅನುಮತಿಸಿರುವ ಕರ್ನಾಟಕ ಹೈಕೋರ್ಟ್, 84 ಮರಗಳನ್ನು ಸ್ಥಳಾಂತರಿಸಲು ಅಸ್ತು ಎಂದಿದೆ.
ಬೆಂಗಳೂರು ಪರಿಸರ ಟ್ರಸ್ಟ್ ಮತ್ತಿತರರು ಸಲ್ಲಿಸಿರುವ ಮನವಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನಡೆಸಿತು.“ತಜ್ಞರ ಸಮಿತಿ ಸಮಿತಿಯ ಶಿಫಾರಸ್ಸುಗಳನ್ನು ಅನುಸರಿಸಬೇಕು. ಗಿಡ ನೆಡುವುದು ಮತ್ತು ಪರಿಸರದ ಮೇಲಿನ ಪರಿಣಾಮದ ಕುರಿತು ಸ್ಥಿತಿಗತಿ ವರದಿ ಸಲ್ಲಿಸಬೇಕು” ಎಂಬ ಷರತ್ತನ್ನು ಬಿಎಂಆರ್ಸಿಎಲ್ಗೆ ಪೀಠವು ವಿಧಿಸಿದೆ.
ಅರ್ಜಿದಾರರನ್ನು ಪ್ರತಿನಿಧಿಸಿದ್ದ ವಕೀಲರು ”ಮರಗಳನ್ನು ಕಡಿಯುವುದರಿಂದ ಆಗುವ ದುಷ್ಪರಿಣಾಮ ಮತ್ತು ಹೊಸ ಗಿಡಗಳನ್ನು ನೆಡುವುದರ ಕುರಿತು ತಜ್ಞರ ಸಮಿತಿಯು ವರದಿ ಸಲ್ಲಿಸಬೇಕಿತ್ತು. ಆದರೆ, ಅದನ್ನು ಮಾಡಲಾಗಿಲ್ಲ. 2019ರಲ್ಲಿ ಸಿದ್ಧಪಡಿಸಿದ್ದ ಪರಿಸರದ ಮೇಲಿನ ಪರಿಣಾಮ ವಿಶ್ಲೇಷಣಾ ವರದಿಯನ್ನು ಸಮಿತಿ ಸಲ್ಲಿಸಿದೆ” ಎಂದರು.
ಬಿಎಂಆರ್ಸಿಎಲ್ ಪ್ರತಿನಿಧಿಸಿದ್ದ ವಕೀಲರು “ಮರ ಕಡಿದ ಬಳಿಕ ಪರಿಸರದ ಮೇಲಿನ ಪರಿಣಾಮ ವರದಿ ಸಿದ್ಧಪಡಿಸಲು ಎರಡು ವರ್ಷಗಳು. ಹೀಗಾಗಿ, ಹಿಂದಿನ ವರದಿಯನ್ನು ಸಲ್ಲಿಸಲಾಗಿದೆ” ಎಂದರು. ಅದಾಗ್ಯೂ, ಹೊಸದಾಗಿ ಪರಿಸರದ ಮೇಲಿನ ಪರಿಣಾಮದ ಕುರಿತು ವಿಶ್ಲೇಷಣಾ ವರದಿ ಸಿದ್ಧಪಡಿಸಲಾಗುವುದು. ಪ್ರಕರಣವು ನ್ಯಾಯಾಲಯದಲ್ಲಿರುವುದರಿಂದ ಮೆಟ್ರೊ ಯೋಜನೆ ತಡವಾಗುತ್ತಿದ್ದು, ವೆಚ್ಚವೂ ಹೆಚ್ಚಾಗುತ್ತಿದೆ” ಎಂದರು.