ನ್ಯಾಯಾಧೀಶರ ವಿರುದ್ಧ ಟ್ವೀಟ್ ಪ್ರಕರಣ: ನಟ ಚೇತನ್ಗೆ ಜಾಮೀನು ಮಂಜೂರು
ಹಿಜಾಬ್ ಪ್ರಕರಣದ ವಿಚಾರಣೆ ನಡೆಸುತ್ತಿರುವ ಕರ್ನಾಟಕ ಹೈಕೋರ್ಟ್ ಪೂರ್ಣಪೀಠದಲ್ಲಿ ನ್ಯಾಯಮೂರ್ತಿಯಾಗಿರುವ ಕೃಷ್ಣ ಎಸ್. ದೀಕ್ಷಿತ್ ಅವರ ಬಗ್ಗೆ ಆಕ್ಷೇಪಾರ್ಹ ಟ್ವೀಟ್ ಮಾಡಿದ ಆರೋಪದ ಮೇಲೆ...
Published: 25th February 2022 08:32 PM | Last Updated: 25th February 2022 08:32 PM | A+A A-

ನಟ ಚೇತನ್
ಬೆಂಗಳೂರು: ಹಿಜಾಬ್ ಪ್ರಕರಣದ ವಿಚಾರಣೆ ನಡೆಸುತ್ತಿರುವ ಕರ್ನಾಟಕ ಹೈಕೋರ್ಟ್ ಪೂರ್ಣಪೀಠದಲ್ಲಿ ನ್ಯಾಯಮೂರ್ತಿಯಾಗಿರುವ ಕೃಷ್ಣ ಎಸ್. ದೀಕ್ಷಿತ್ ಅವರ ಬಗ್ಗೆ ಆಕ್ಷೇಪಾರ್ಹ ಟ್ವೀಟ್ ಮಾಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಸಾಮಾಜಿಕ ಹೋರಾಟಗಾರ, ನಟ ಚೇತನ್ ಅವರಿಗೆ 8ನೇ ಎಸಿಎಂಎಂ ಕೋರ್ಟ್ ಶುಕ್ರವಾರ ಷರತ್ತುಬದ್ಧ ಜಾಮೀನು ನೀಡಿದೆ.
ನಟ ಚೇತನ್ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ 8ನೇ ಹೆಚ್ಚುವರಿ 8ನೇ ಎಸಿಎಂಎಂ ಕೋರ್ಟ್, ಇಬ್ಬರು ಸರ್ಕಾರಿ ನೌಕರರ ಶ್ಯೂರಿಟಿ ಮತ್ತು ಒಂದು ಲಕ್ಷ ರೂ. ಬಾಂಡ್ ಮೇಲೆ ಜಾಮೀನು ನೀಡಲಾಗಿದೆ. ತನಿಖೆಗೆ ಸಹಕರಿಸುವಂತೆ ಚೇತನ್ಗೆ ಷರತ್ತು ವಿಧಿಸಲಾಗಿದೆ.
ಇದನ್ನು ಓದಿ: ನ್ಯಾಯಾಧೀಶರ ವಿರುದ್ಧ ಆಕ್ಷೇಪಾರ್ಹ ಟ್ವೀಟ್: ನಟ ಚೇತನ್ಗೆ 14 ದಿನಗಳ ನ್ಯಾಯಾಂಗ ಬಂಧನ, ಪತ್ನಿ ಹೇಳಿದ್ದೇನು?
'ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆತಂಕಕಾರಿ ಅಭಿಪ್ರಾಯ ವ್ಯಕ್ತಪಡಿಸಿದ್ದ ನ್ಯಾ. ದೀಕ್ಷಿತ್ ಅವರು ಸರ್ಕಾರಿ ಶಾಲೆಗಳಲ್ಲಿ ಹಿಜಾಬ್ ಧರಿಸುವ ಕುರಿತಾದ ವಿಚಾರವನ್ನು ನಿರ್ಧರಿಸಲಿದ್ದಾರೆ. ನ್ಯಾ. ದೀಕ್ಷಿತ್ ಅವರಿಗೆ ಅದನ್ನು ನಿರ್ಧರಿಸಲು ಅಗತ್ಯವಾದ ಸ್ಪಷ್ಟತೆ ಇದೆಯೇ' ಎಂದು ಪ್ರಶ್ನಿಸಿ ಚೇತನ್ ಅವರು ಫೆಬ್ರವರಿ 16ರಂದು ಟ್ವೀಟ್ ಮಾಡಿದ್ದರು.
ಟ್ವೀಟ್ ಆಧರಿಸಿ ಚೇತನ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ಗಳಾದ 505(2) (ಕೋಮುಗಳ ನಡುವೆ ವೈಷಮ್ಯ ಸೃಷ್ಟಿ), 504 (ಉದ್ದೇಶಪೂರ್ವಕವಾಗಿ ಅವಮಾನಿಸಿ, ಆ ಮೂಲಕ ಸಾರ್ವಜನಿಕ ಶಾಂತಿಗೆ ಭಂಗ ಉಂಟು ಮಾಡುವುದು) ಅಡಿ ಶೇಷಾದ್ರಿಪುರಂ ಠಾಣೆಯಲ್ಲಿ ದೂರು ದಾಖಲಿಸಿ, ಪೊಲೀಸರು ಅವರನ್ನು ಮಂಗಳವಾರ ಬಂಧಿಸಿದ್ದರು.