social_icon

ಚಿತ್ರದುರ್ಗ: ATR ನಿಂದ ಹೊಸ UAV ಯಶಸ್ವೀ ಪರೀಕ್ಷೆ ನಡೆಸಿದ DRDO

ರಕ್ಷಣಾ ವಿಭಾಗದಲ್ಲಿ ಸ್ವಾವಲಂಬನೆಯತ್ತ ಮಹತ್ವದ ಹೆಜ್ಜೆಯನ್ನಿಟ್ಟಿರುವ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಚಿತ್ರದುರ್ಗದ ಎಟಿಆರ್ (ಏರೋನಾಟಿಕಲ್ ಟೆಸ್ಟ್ ರೇಂಜ್‌) ನಿಂದ ಮೊದಲ ಚಾಲಕ ರಹಿತ ವಿಮಾನದ ಯಶಸ್ವಿ ಹಾರಾಟ ನಡೆಸಿದೆ.

Published: 01st July 2022 06:41 PM  |   Last Updated: 01st July 2022 06:41 PM   |  A+A-


DRDO successfully carries out maiden UAV in Chitradurga

ಚಾಲಕ ರಹಿತ ವಿಮಾನದ ಯಶಸ್ವಿ ಹಾರಾಟ

Posted By : srinivasamurthy
Source : The New Indian Express

ಚಿತ್ರದುರ್ಗ: ರಕ್ಷಣಾ ವಿಭಾಗದಲ್ಲಿ ಸ್ವಾವಲಂಬನೆಯತ್ತ ಮಹತ್ವದ ಹೆಜ್ಜೆಯನ್ನಿಟ್ಟಿರುವ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಚಿತ್ರದುರ್ಗದ ಎಟಿಆರ್ (ಏರೋನಾಟಿಕಲ್ ಟೆಸ್ಟ್ ರೇಂಜ್‌) ನಿಂದ ಮೊದಲ ಚಾಲಕ ರಹಿತ ವಿಮಾನದ ಯಶಸ್ವಿ ಹಾರಾಟ ನಡೆಸಿದೆ.

ಜುಲೈ 1 ಶುಕ್ರವಾರದಂದು ಅಟಾನಮಸ್ ಫ್ಲೈಯಿಂಗ್ ವಿಂಗ್‌ನ ಮೊದಲ ಹಾರಾಟವನ್ನು ನಡೆಸಲಾಗಿದ್ದು, ಚಿತ್ರದುರ್ಗದ ಚಳ್ಳಕೆರೆಯಲ್ಲಿರುವ ಏರೋನಾಟಿಕಲ್ ಟೆಸ್ಟ್ ರೇಂಜ್‌ನಿಂದ ಯಶಸ್ವಿಯಾಗಿ ಚಾಲಕ ರಹಿತ ವಿಮಾನವನ್ನು ಹಾರಾಟ ನಡೆಸಲಾಗಿದೆ. ಈ ಚಾಲಕ ರಹಿತ ವಿಮಾನವು ಸಂಪೂರ್ಣ ಸ್ವಾಯತ್ತ ಮೋಡ್‌ನಲ್ಲಿ ಕಾರ್ಯನಿರ್ವಹಿಸಲಿದ್ದು, ವಿಮಾನವು ಟೇಕ್-ಆಫ್, ವೇ ಪಾಯಿಂಟ್, ನ್ಯಾವಿಗೇಷನ್ ಮತ್ತು ಟಚ್‌ಡೌನ್ ಸೇರಿದಂತೆ ಎಲ್ಲ ವಿಭಾಗಗಳಲ್ಲಿ ಪರಿಪೂರ್ಣ ಹಾರಾಟವನ್ನು ಯಶಸ್ವಿಯಾಗಿದೆ ಪ್ರದರ್ಶಿಸಿದೆ ಎಂದು DRDO ಹೇಳಿದೆ.

ಇದನ್ನೂ ಓದಿ: ಪಿನಾಕಾ ರಾಕೆಟ್ ವ್ಯವಸ್ಥೆಯ ಹೊಸ ಆವೃತ್ತಿಯ ಪರೀಕ್ಷಾರ್ಥ ಉಡಾವಣೆ ಯಶಸ್ವಿ: ಡಿಆರ್ ಡಿಒ

ಈ ವಿಮಾನವು ಸ್ವಾವಲಂಬನೆಯ ಕಡೆಗೆ ತಂತ್ರಜ್ಞಾನಗಳನ್ನು ಸಾಬೀತುಪಡಿಸುವ ವಿಷಯದಲ್ಲಿ ಪ್ರಮುಖ ಮೈಲಿಗಲ್ಲಾಗಿದ್ದು, ಭವಿಷ್ಯದ ಮಾನವರಹಿತ ವಿಮಾನಗಳ ಅಭಿವೃದ್ಧಿಗೆ ನಿರ್ಣಾಯಕ ತಂತ್ರಜ್ಞಾನಗಳನ್ನು ಸಾಬೀತುಪಡಿಸುವ ವಿಷಯದಲ್ಲಿ ಈ ಹಾರಾಟವು ಪ್ರಮುಖ ಮೈಲಿಗಲ್ಲಾಗಿದ್ದು, ಅಂತಹ ಕಾರ್ಯತಂತ್ರದ ರಕ್ಷಣಾ ತಂತ್ರಜ್ಞಾನಗಳಲ್ಲಿ ಸ್ವಾವಲಂಬನೆಯತ್ತ ಮಹತ್ವದ ಹೆಜ್ಜೆಯಾಗಿದೆ. ನಿರ್ಣಾಯಕ ಕಾರ್ಯತಂತ್ರದ ರಕ್ಷಣಾ ತಂತ್ರಜ್ಞಾನದಲ್ಲಿ ಮಾನವರಹಿತ ವೈಮಾನಿಕ ವಾಹನವನ್ನು (UAV) ವಿನ್ಯಾಸಗೊಳಿಸಲಾಗಿದೆ ಎಂದು ಡಿಆರ್ ಡಿಒ ಹೇಳಿದೆ. 

ಇದು ಸಣ್ಣ ಟರ್ಬೋಫ್ಯಾನ್ ಎಂಜಿನ್‌ನಿಂದ ಚಾಲಿತ ವಿಮಾನವಾಗಿದ್ದು, ಈ ವಿಮಾನಕ್ಕೆ ಬಳಸಲಾದ ಏರ್‌ಫ್ರೇಮ್, ಅಂಡರ್‌ಕ್ಯಾರೇಜ್ ಮತ್ತು ಸಂಪೂರ್ಣ ಹಾರಾಟದ ನಿಯಂತ್ರಣ ಮತ್ತು ಏವಿಯಾನಿಕ್ಸ್ ವ್ಯವಸ್ಥೆಗಳನ್ನು ಸ್ಥಳೀಯವಾಗಿ ಅಭಿವೃದ್ಧಿಪಡಿಸಲಾಗಿದೆ. ಈ ವಿಮಾನವನ್ನು ಡಿಒರ್ ಡಿಒದ ಬೆಂಗಳೂರಿನ ಏರೋನಾಟಿಕಲ್ ಡೆವಲಪ್‌ಮೆಂಟ್ ಎಸ್ಟಾಬ್ಲಿಷ್‌ಮೆಂಟ್ (ಎಡಿಇ) ಅಭಿವೃದ್ಧಿಪಡಿಸಿದ್ದು, ಬೆಂಗಳೂರು ಡಿಆರ್‌ಡಿಒದ ಪ್ರಮುಖ ಸಂಶೋಧನಾ ಪ್ರಯೋಗಾಲಯ ಕೂಡ ಆಗಿದೆ.

ಇದನ್ನೂ ಓದಿ: ಡಿಆರ್ ಡಿಒ ದಿಂದ 45 ದಿನಗಳಲ್ಲಿ ಬಹುಮಹಡಿ ಕಟ್ಟಡ ನಿರ್ಮಾಣ; ರಾಜನಾಥ್ ಸಿಂಗ್ ಉದ್ಘಾಟನೆ

ಡಿಆರ್ ಡಿಒ ಕಾರ್ಯವನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಅಭಿನಂದಿಸಿದ್ದು, ಇದು ಸ್ವಾಯತ್ತ ವಿಮಾನದ ಕಡೆಗೆ ಪ್ರಮುಖ ಸಾಧನೆ ಮತ್ತು ದಾರಿಯನ್ನು ಸುಗಮಗೊಳಿಸುತ್ತದೆ. ನಿರ್ಣಾಯಕ ಸೇನಾ ವ್ಯವಸ್ಥೆಗಳ ವಿಷಯದಲ್ಲಿ 'ಆತ್ಮನಿರ್ಭರ್ ಭಾರತ'"ದ ಯಶಸ್ವಿ ಮೊದಲ ಹಾರಾಟಕ್ಕಾಗಿ ಡಿಆರ್ ಜಿಒಗೆ ಅಭಿನಂದನೆಗಳು ಎಂದು ಟ್ವೀಟ್ ಮಾಡಿದ್ದಾರೆ.

ಅಲ್ಲದೆ ಚಿತ್ರದುರ್ಗ ATR ನಿಂದ ಸ್ವಾಯತ್ತ ಫ್ಲೈಯಿಂಗ್ ವಿಂಗ್ ಟೆಕ್ನಾಲಜಿ ಡೆಮಾನ್ಸ್ಟ್ರೇಟರ್ ಯಶಸ್ವಿ ಹಾರಾಟವು ಸ್ವಾಯತ್ತ ವಿಮಾನಗಳ ಕಡೆಗೆ ಒಂದು ಪ್ರಮುಖ ಸಾಧನೆಯಾಗಿದೆ. ನಿರ್ಣಾಯಕ ಮಿಲಿಟರಿಯ ವಿಷಯದಲ್ಲಿ ಆತ್ಮನಿರ್ಭರ ಭಾರತಕ್ಕೆ ದಾರಿ ವ್ಯವಸ್ಥೆಯಾಗಿದೆ" ಎಂದು ಸಿಂಗ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಭಾರತೀಯ ಸೇನೆಗೆ ಮತ್ತಷ್ಟು ಬಲ: ಯೋಧರ ಬತ್ತಳಿಕೆಗೆ ನೂತನ ಅಸ್ತ್ರ, ಡಿಆರ್ ಡಿಒ​ದಿಂದ ಯಶಸ್ವಿ ಪರೀಕ್ಷೆ

ಡಿಆರ್‌ಡಿಒ ಕಾರ್ಯದರ್ಶಿ, ರಕ್ಷಣಾ ಇಲಾಖೆ ಆರ್ & ಡಿ ಮತ್ತು ಅಧ್ಯಕ್ಷ  ಡಾ ಜಿ ಸತೀಶ್ ರೆಡ್ಡಿ ವಿನ್ಯಾಸಕ್ಕೆ ಸಂಬಂಧಿಸಿದ ವ್ಯವಸ್ಥೆಯ ಅಭಿವೃದ್ಧಿ ಮತ್ತು ಪರೀಕ್ಷೆ ತಂಡಗಳ ಪ್ರಯತ್ನವನ್ನು ಶ್ಲಾಘಿಸಿದರು.
 


Stay up to date on all the latest ರಾಜ್ಯ news
Poll
K Annamalai

ಎನ್‌ಡಿಎಯಿಂದ ಹೊರಬರುವ ಎಐಎಡಿಎಂಕೆ ನಿರ್ಧಾರವು 2024ರ ಲೋಕಸಭೆ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಬಿಜೆಪಿ ಪಕ್ಷದ ಸಾಧನೆ ಮೇಲೆ ಪರಿಣಾಮ ಬೀರಲಿದೆಯೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp