social_icon

ಬೆಂಗಳೂರಿನ 847 ಕಿ.ಮೀ ರಸ್ತೆಗಳಲ್ಲಿ ಗುಂಡಿಗಳಿವೆ: ಬಿಬಿಎಂಪಿ

ಬೆಂಗಳೂರಿನ 847 ಕಿ.ಮೀ ರಸ್ತೆಗಳಲ್ಲಿ ಗುಂಡಿಗಳಿವೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕರ್ನಾಟಕ ಹೈಕೋರ್ಟ್ ಗೆ ಮಾಹಿತಿ ನೀಡಿದೆ.

Published: 01st July 2022 02:02 PM  |   Last Updated: 01st July 2022 02:02 PM   |  A+A-


Potholes on 847 km of Bengaluru roads: BBMP

ಸಂಗ್ರಹ ಚಿತ್ರ

Posted By : srinivasamurthy
Source : The New Indian Express

ಬೆಂಗಳೂರು: ಬೆಂಗಳೂರಿನ 847 ಕಿ.ಮೀ ರಸ್ತೆಗಳಲ್ಲಿ ಗುಂಡಿಗಳಿವೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕರ್ನಾಟಕ ಹೈಕೋರ್ಟ್ ಗೆ ಮಾಹಿತಿ ನೀಡಿದೆ.

ರಸ್ತೆ ಗುಂಡಿಗಳ ಕುರಿತಂತೆ ಕರ್ನಾಟಕ ಹೈಕೋರ್ಟ್ ನಲ್ಲಿ ನಡೆಯುತ್ತಿರುವ ವಿಚಾರಣೆ ವೇಳೆ ಬಿಬಿಎಂಪಿ ಮಾಹಿತಿ ನೀಡಿದ್ದು, ನಗರದಲ್ಲಿ ಹೊಂಡಗಳಿಂದ ಕೂಡಿದ 847 ಕಿ.ಮೀ ರಸ್ತೆಯನ್ನು ಗುರುತಿಸಿದ್ದು, ದುರಸ್ತಿ ಮಾಡಬೇಕಿದೆ ಎಂದು ಬಿಬಿಎಂಪಿ ಒಪ್ಪಿಕೊಂಡಿದೆ.  ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್ ಕಿಣಗಿ ಅವರನ್ನೊಳಗೊಂಡ ವಿಭಾಗೀಯ ಪೀಠದ ಮುಂದೆ ಈ ಸಂಬಂಧ ವರದಿಯನ್ನು ಬಿಬಿಎಂಪಿ ವಕೀಲ ವಿ ಶ್ರೀನಿಧಿ ಅವರು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮತ್ತು ಮುಖ್ಯ ಎಂಜಿನಿಯರ್ ಎಂ ಲೋಕೇಶ್ ಅವರ ಸಮ್ಮುಖದಲ್ಲಿ ಸಲ್ಲಿಸಿದರು.

ಇದನ್ನೂ ಓದಿ: ನಗರದಲ್ಲಿ ಟ್ರಾಫಿಕ್ ಸಮಸ್ಯೆ: ಪರಿಶೀಲನೆಗೆ ಅಧಿಕಾರಿಗಳಿಂದ ನೈಟ್ ರೌಂಡ್ಸ್!

ನಗರದ ಒಟ್ಟು 1,392 ಕಿ.ಮೀ ರಸ್ತೆಗಳಲ್ಲಿ ಗುರುತಿಸಲಾದ ರಸ್ತೆಯು ಶೇಕಡಾ 61 ರಷ್ಟಿದೆ. 2015ರಲ್ಲಿ ವಿಜಯನ್ ಮೆನನ್ ಮತ್ತು ಇತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ವೇಳೆ ಈ ವರದಿ ಸಲ್ಲಿಸಲಾಗಿತ್ತು.

ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಳೂರಿಗೆ ಭೇಟಿ ನೀಡಿದ್ದಕ್ಕಾಗಿ ದುರಸ್ತಿ ಮಾಡಿದ ರಸ್ತೆಗಳು ಹಾಳಾಗಿವೆ ಎಂಬ ಮಾಧ್ಯಮ ವರದಿಗಳನ್ನು ಉಲ್ಲೇಖಿಸಿದ ನ್ಯಾಯಾಲಯ, ಪಾಲಿಕೆ ಅಧಿಕಾರಿಗಳಿಂದ ಬೆಂಗಳೂರಿಗೆ ಕೆಟ್ಟ ಹೆಸರು ಬರಲು ಕಾರಣ ಎಂದು ಗಿರಿನಾಥ್ ಅವರನ್ನು ತರಾಟೆಗೆ ತೆಗೆದುಕೊಂಡರು. ಆದರೆ ನೀರು ಸೋರಿಕೆಯಿಂದಾಗಿ ಹಾಳಾದ ರಸ್ತೆಗಳನ್ನು ಪ್ರಧಾನಿ ಬಳಸಿಲ್ಲ ಎಂದು ಬಿಬಿಎಂಪಿ ವಕೀಲರು ನ್ಯಾಯಾಲಯಕ್ಕೆ ಸ್ಪಷ್ಟನೆ ನೀಡಿದರು.

ಇದನ್ನೂ ಓದಿ: 4 ಮೇಲ್ಸೇತುವೆ ನಿರ್ಮಿಸಲು ಬಿಬಿಎಂಪಿ ಸಜ್ಜು: ಅಂದಾಜು 230 ಕೋಟಿ ರೂ., 18 ತಿಂಗಳ ಗಡುವು!

ಬಿಬಿಎಂಪಿಯು ಅಮೆರಿಕದ ರೋಡ್ ಟೆಕ್ನಾಲಜಿ ಸೊಲ್ಯೂಷನ್ಸ್ (ಎಆರ್‌ಟಿಎಸ್) ನೊಂದಿಗೆ ಬುಧವಾರ ಒಪ್ಪಂದ ಮಾಡಿಕೊಂಡಿದ್ದು, 397 ಕಿಮೀ ಗುಂಡಿಗಳನ್ನು ಮುಚ್ಚಲು ಕಾಮಗಾರಿ ಆದೇಶಗಳನ್ನು ನೀಡಲಾಗಿದೆ. ಜೊತೆಗೆ ಕಾಮಗಾರಿಗೆ ಪೈಥಾನ್ ಯಂತ್ರವನ್ನು ನೀಡಲಾಗಿದೆ ಎಂದು ಅವರು ಹೇಳಿದರು. 576 ಕಿ.ಮೀ ಬಾಕಿ ಉಳಿದ ಕಾಮಗಾರಿ ಅಂತಿಮಗೊಳ್ಳಬೇಕಿದ್ದು, ಬುಧವಾರ ಟೆಂಡರ್ ಆಹ್ವಾನಿಸಲಾಗಿದೆ. ಗುತ್ತಿಗೆದಾರರಿಗೆ ಪಾವತಿ ಮಾಡಲು, ಎಆರ್‌ಟಿಎಸ್, ಹೆಚ್ಚು ಪಾರದರ್ಶಕವಾಗಿ ಪಾವತಿ ವೇಳಾಪಟ್ಟಿಯನ್ನು ನೀಡಲಾಗುವುದು ಎಂದು ಅವರು ನ್ಯಾಯಾಲಯಕ್ಕೆ ತಿಳಿಸಿದರು.

ಅದರಂತೆ ಗುತ್ತಿಗೆದಾರರು ಮಾಪನ ಪುಸ್ತಕ, ಮಾಸಿಕ ಬಿಲ್‌ಗಳು, ಟ್ಯಾಗ್ ಮಾಡಿದ ಭಾವಚಿತ್ರಗಳನ್ನು ನ.5 ರೊಳಗೆ ಸಲ್ಲಿಸಬೇಕಾಗುತ್ತದೆ. ಪ್ರತಿ ತಿಂಗಳು ಮತ್ತು ನಂತರ ಬಾಕಿ ಇರುವ ಬಿಲ್ ಅನ್ನು ಪ್ರಕ್ರಿಯೆಗೊಳಿಸಬೇಕು ಮತ್ತು ಒಂದು ವಾರದೊಳಗೆ ಪಾವತಿ ಮಾಡಬೇಕು. ಜುಲೈ 27, 2022 ರಂದು ಸ್ಥಿತಿಗತಿ ವರದಿ ಸಲ್ಲಿಸುವಂತೆ ನ್ಯಾಯಾಲಯ ಬಿಬಿಎಂಪಿಗೆ ಸೂಚಿಸಿದೆ.
 


Stay up to date on all the latest ರಾಜ್ಯ news
Poll
K Annamalai

ಎನ್‌ಡಿಎಯಿಂದ ಹೊರಬರುವ ಎಐಎಡಿಎಂಕೆ ನಿರ್ಧಾರವು 2024ರ ಲೋಕಸಭೆ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಬಿಜೆಪಿ ಪಕ್ಷದ ಸಾಧನೆ ಮೇಲೆ ಪರಿಣಾಮ ಬೀರಲಿದೆಯೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp