ಮರವಂತೆ ಬೀಚ್ ನಲ್ಲಿ ದುರಂತ: ಸಮುದ್ರಕ್ಕೆ ಉರುಳಿದ ಕಾರು. ಓರ್ವ ಸಾವು, ಇನ್ನೋರ್ವನಿಗಾಗಿ ತೀವ್ರ ಹುಡುಕಾಟ

ಉಡುಪಿಯ ಖ್ಯಾತ ಮರವಂತೆ ಬೀಚ್ ನಲ್ಲಿ ದುರಂತ ಸಂಭವಿಸಿದ್ದು, ನಿಯಂತ್ರಣ ತಪ್ಪಿದ ಕಾರು ಸಮುದ್ರಕ್ಕೆ ಉರುಳಿದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿ, ಮತ್ತೋರ್ವ ನಾಪತ್ತೆಯಾಗಿರುವ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ.
ಸಮುದ್ರಕ್ಕೆ ಬಿದ್ದ ಕಾರು
ಸಮುದ್ರಕ್ಕೆ ಬಿದ್ದ ಕಾರು

ಉಡುಪಿ: ಉಡುಪಿಯ ಖ್ಯಾತ ಮರವಂತೆ ಬೀಚ್ ನಲ್ಲಿ ದುರಂತ ಸಂಭವಿಸಿದ್ದು, ನಿಯಂತ್ರಣ ತಪ್ಪಿದ ಕಾರು ಸಮುದ್ರಕ್ಕೆ ಉರುಳಿದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿ, ಮತ್ತೋರ್ವ ನಾಪತ್ತೆಯಾಗಿರುವ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ.

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಮರವಂತೆ ಸಮುದ್ರಕ್ಕೆ ಕಾರೊಂದು ಉರುಳಿ ಬಿದ್ದು, ಓರ್ವ ಮೃತಪಟ್ಟಿದ್ದು, ಇನ್ನೋರ್ವ ನಾಪತ್ತೆಯಾಗಿದ್ದಾರೆ. ನಾಪತ್ತೆಯಾಗಿರುವ ವ್ಯಕ್ತಿಗಾಗಿ ಹುಡುಕಾಟ ನಡೆಯುತ್ತಿರುವ ಘಟನೆ ನಡೆದಿದೆ. ಮರವಂತೆಯ ಮಾರಸ್ವಾಮಿ ದೇವಸ್ಥಾನದ ಬಳಿ ಹೆದ್ದಾರಿ ಮೇಲಿನಿಂದ ಕಳೆದ ರಾತ್ರಿ ಕಾರು ಸಮುದ್ರಕ್ಕೆ ಬಿದ್ದಿದೆ.

ಮೂಲಗಳ ಪ್ರಕಾರ ದುರಂತಕ್ಕೀಡಾದ ಕಾರಿನಲ್ಲಿ ನಾಲ್ವರಿದ್ದರು ಎಂದು ತಿಳಿದುಬಂದಿದೆ. ಈ ಪೈಕಿ ಓರ್ವ ಕಾರಿನೊಳಗೆ ಸಾವನ್ನಪ್ಪಿದ್ದು, ಮತ್ತೊಬ್ಬರು ನೀರಲ್ಲಿ ಮುಳುಗಿ ನಾಪತ್ತೆಯಾಗಿದ್ದಾರೆ. ಮುಳುಗಿರುವವರಿಗಾಗಿ ಅಗ್ನಿಶಾಮಕದಳ, ಮೀನುಗಾರರು ಹುಡುಕಾಟ ನಡೆಸುತ್ತಿದ್ದಾರೆ. ಘಟನೆಯಲ್ಲಿ ಮತ್ತಿಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದು, ಅವರಿಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಏನಿದು ಘಟನೆ?
ಕುಂದಾಪುರದ ಕೋಟೇಶ್ವರ ಬಳಿಯಿಂದ ಬೈಂದೂರು ಕಡೆಗೆ ಕಾರು ತೆರಳುತ್ತಿತ್ತು. ಕಾರಿನೊಳಗೆ ವೀರಜ್ ಆಚಾರ್ಯ ಮೃತದೇಹ ಪತ್ತೆಯಾಗಿದೆ. ಅಗ್ನಿಶಾಮಕ ದಳ ಆಗಮಿಸಿ, ಕಾರನ್ನು ಮೇಲಕ್ಕೆತ್ತುವ ಕಾರ್ಯಚರಣೆ ಕೈಗೊಂಡಿದ್ದಾರೆ. ಗಂಗೊಳ್ಳಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಗಾಳಿ ಮಳೆಗೆ ರಸ್ತೆ ಕಾಣದೆ ಕಾರು ಸಮುದ್ರಕ್ಕೆ ಇಳಿದಿರಬಹುದು ಎಂದು ಶಂಕಿಸಲಾಗಿದೆ. ಸ್ಥಳೀಯ ಮೀನುಗಾರರ ಸಹಾಯದಿಂದ ಕಣ್ಮರೆಯಾದ ಯುವಕನನ್ನು ಹುಡುಕುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com