ಬೇಡಿಕೆ ಈಡೇರಿಸುವ ಭರವಸೆ: ಪೌರಕಾರ್ಮಿಕರ ಮುಷ್ಕರ ಅಂತ್ಯ

ರಾಜ್ಯಾದ್ಯಂತ ಜುಲೈ 1 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದ ಪೌರಕಾರ್ಮಿಕರು ಸೋಮವಾರ ಸಿಎಂ ಬಸವರಾಜ ಬೊಮ್ಮಾಯಿ ಅವರ ಕಚೇರಿಯಿಂದ ತಮ್ಮ ಸೇವೆಗಳನ್ನು ಕಾಯಂಗೊಳಿಸುವ ಪ್ರಕ್ರಿಯೆ ಪ್ರಾರಂಭಿಸುವುದಾಗಿ ಭರವಸೆ ನೀಡಿದ ನಂತರ ಸೋಮವಾರ ಮುಷ್ಕರ ವಾಪಸ್ ಪಡೆದಿದ್ದಾರೆ.
ಪೌರ ಕಾರ್ಮಿಕರು
ಪೌರ ಕಾರ್ಮಿಕರು
Updated on

ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದ ಪೌರಕಾರ್ಮಿಕರು ಸೋಮವಾರ ಸಿಎಂ ಬಸವರಾಜ ಬೊಮ್ಮಾಯಿ ಅವರ ಕಚೇರಿಯಿಂದ ತಮ್ಮ ಸೇವೆಗಳನ್ನು ಕಾಯಂಗೊಳಿಸುವ ಪ್ರಕ್ರಿಯೆ ಪ್ರಾರಂಭಿಸುವುದಾಗಿ ಭರವಸೆ ನೀಡಿದ ನಂತರ ಸೋಮವಾರ ಮುಷ್ಕರ ವಾಪಸ್ ಪಡೆದಿದ್ದಾರೆ.

ಸರ್ಕಾರದ ಮೇಲೆ ಒತ್ತಡ ಹೇರಲು ಜುಲೈ 1 ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರ್ನಾಟಕ ರಾಜ್ಯ ನಗರ ಪಾಲಿಕೆ, ಗ್ರಾಮ ಸಭೆಗಳು ಮತ್ತು ಪಟ್ಟಣ ಪಂಚಾಯತ್ ಪೌರಕಾರ್ಮಿಕ ಮಹಾ ಸಂಘಗಳ ಅಧ್ಯಕ್ಷ ನಾರಾಯಣ ಮೈಸೂರು ಕರೆ ನೀಡಿದ್ದರು. ಅದೇ ದಿನ ಸಂಜೆ 6.30ಕ್ಕೆ ಸಿಎಂ ಅವರ ಅಧಿಕೃತ ನಿವಾಸ ಕೃಷ್ಣಾದಲ್ಲಿ ಸಭೆ ನಡೆಸಿ, ಅವರ ಬೇಡಿಕೆಗಳ ಪರಿಶೀಲನೆಗೆ ಸಮಿತಿ ರಚಿಸಿ ಶಾಶ್ವತ ಸ್ಥಾನಮಾನ ನೀಡಲು ಇರುವ ಕಾನೂನು ಅಂಶಗಳನ್ನು ವಿವರಿಸಿ ವರದಿ ಸಲ್ಲಿಸಲಾಗುವುದು ಎಂಬ ನಡಾವಳಿ ಪ್ರತಿಯನ್ನು ರವಾನಿಸಲಾಯಿತು. 

ವಕೀಲ ಮತ್ತು ಹೋರಾಟಗಾರ ವಿನಯ್ ಶ್ರೀನಿವಾಸ ಅವರು, "ಸರ್ಕಾರವು ಪ್ರಕ್ರಿಯೆಯ ಇತ್ತೀಚಿನ ಪ್ರತಿಯನ್ನು ಬಿಡುಗಡೆ ಮಾಡಿದೆ ಮತ್ತು ಮುಂದಿನ ಮೂರು ತಿಂಗಳಲ್ಲಿ ಶಾಶ್ವತ ಸ್ಥಾನಮಾನ ನೀಡಲು ಕಾಲಮಿತಿಯನ್ನು ಉಲ್ಲೇಖಿಸಿದೆ" ಎಂದು ಹೇಳಿದರು.

ಬಿಬಿಎಂಪಿ ಘನತ್ಯಾಜ್ಯ ನಿರ್ವಹಣಾ ಆಯುಕ್ತ ಹರೀಶ್ ಕುಮಾರ್ ಪಾಲಿಕೆಗೆ ಮಾಹಿತಿ ನೀಡಿ, ಕಸಗುಡಿಸುವ ಯಂತ್ರಗಳನ್ನು ನಿಯೋಜಿಸಿದ್ದರಿಂದ ಅನೇಕ ಕಸಗುಡಿಸುವವರು ಮುಷ್ಕರದಲ್ಲಿದ್ದರೂ ರಸ್ತೆಗಳನ್ನು ಸ್ವಚ್ಛವಾಗಿಡಲು ಸ್ವಲ್ಪ ಸಮಸ್ಯೆ ಎದುರಾಗಿದೆ. ಪೌರಕಾರ್ಮಿಕರ ಸಂಭಾವನೆ ಹೆಚ್ಚಿಸುವ ಕುರಿತು ಶುಕ್ರವಾರ ಆದೇಶ ಹೊರಡಿಸಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರತಿಭಟನಾಕಾರರಿಗೆ ಭರವಸೆ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com