ಹುಬ್ಬಳ್ಳಿ: ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ, 10 ಮಂದಿ ಬಂಧನ

ಹುಬ್ಬಳ್ಳಿ ಸಮೀಪದ ರಾಯನಾಳ ಗ್ರಾಮದಲ್ಲಿ ಸೋಮವಾರ ರಾತ್ರಿ ಗಂಗಿವಾಲ್ ಗ್ರಾಮದ ಗ್ರಾಮ ಪಂಚಾಯಿತಿ ಸದಸ್ಯನನ್ನು ಜನರ ಗುಂಪೊಂದು ಹತ್ಯೆ ಮಾಡಿದೆ. ಮೃತರನ್ನು ದೀಪಕ್ ಪಟದಾರಿ (31) ಎಂದು ಗುರುತಿಸಲಾಗಿದೆ. ಈತ ರೌಡಿಶೀಟರ್ ಆಗಿದ್ದ ಎನ್ನಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಹುಬ್ಬಳ್ಳಿ: ಹುಬ್ಬಳ್ಳಿ ಸಮೀಪದ ರಾಯನಾಳ ಗ್ರಾಮದಲ್ಲಿ ಸೋಮವಾರ ರಾತ್ರಿ ಗಂಗಿವಾಲ್ ಗ್ರಾಮದ ಗ್ರಾಮ ಪಂಚಾಯಿತಿ ಸದಸ್ಯನನ್ನು ಜನರ ಗುಂಪೊಂದು ಹತ್ಯೆ ಮಾಡಿದೆ. ಮೃತನನ್ನು ದೀಪಕ್ ಪಟದಾರಿ (31) ಎಂದು ಗುರುತಿಸಲಾಗಿದೆ. ಈತ ರೌಡಿಶೀಟರ್ ಆಗಿದ್ದ ಎನ್ನಲಾಗಿದೆ.

ರಾಜಕೀಯ ವೈಷಮ್ಯ ಹಾಗೂ ಪ್ರೇಮ ವಿವಾಹದ ವಿಚಾರಗಳೇ ಕೊಲೆಗೆ ಕಾರಣ ಎಂದು ಮೂಲಗಳು ಹೇಳುತ್ತಿವೆ.  ದೀಪಕ್ ತನ್ನ ದ್ವಿಚಕ್ರ ವಾಹನದಲ್ಲಿ ತನ್ನ ಮನೆಗೆ ಹೋಗುತ್ತಿದ್ದಾಗ, ರಾಯನಾಳದಲ್ಲಿ ಜನರ ಗುಂಪೊಂದು ಆತನ ಮೇಲೆ ಹಲ್ಲೆ ನಡೆಸಿದ್ದರಿಂದ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಹಳೇ ಹುಬ್ಬಳ್ಳಿ ಪೊಲೀಸರು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಂಗಳವಾರ ಬೆಳಗ್ಗೆ ಪೊಲೀಸರು ಹತ್ಯೆಗೆ ಸಂಬಂಧಿಸಿದಂತೆ 10 ಮಂದಿಯನ್ನು ಬಂಧಿಸಿದ್ದು, ತನಿಖೆ ನಡೆಯುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com