social_icon

ಚಂದ್ರಶೇಖರ್ ಗುರೂಜಿ ಹತ್ಯೆ ಹಿಂದೆ ಬೇನಾಮಿ ಆಸ್ತಿ ವಿವಾದ: ಗುರೂಜಿಗೆ ಕಂಟಕವಾಯ್ತಾ ಮಾಜಿ ಮಹಿಳಾ ಉದ್ಯೋಗಿ ಜೊತೆಗಿನ ಒಡನಾಟ!?

ಸರಳ ವಾಸ್ತುತಜ್ಞ ಚಂದ್ರಶೇಖರ ಗುರೂಜಿ (57) ಅವರನ್ನು ಇಲ್ಲಿನ ಉಣಕಲ್‌ ಕ್ರಾಸ್‌ನಲ್ಲಿರುವ ದಿ ಪ್ರೆಸಿಡೆಂಟ್‌ ಹೋಟೆಲ್‌ನ ರಿಸೆಪ್ಶನ್‌ ಲಾಬಿಯಲ್ಲಿ ಅವರ ಇಬ್ಬರು ಆಪ್ತರು ಮಂಗಳವಾರ ಮಧ್ಯಾಹ್ನ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ.

Published: 06th July 2022 09:40 AM  |   Last Updated: 06th July 2022 09:40 AM   |  A+A-


Chandrashekhar guruji

ಸರಳ ವಾಸ್ತು ಚಂದ್ರಶೇಖರ ಗುರೂಜಿ

Posted By : shilpa
Source : Online Desk

ಹುಬ್ಬಳ್ಳಿ: ಸರಳ ವಾಸ್ತುತಜ್ಞ ಚಂದ್ರಶೇಖರ ಗುರೂಜಿ (57) ಅವರನ್ನು ಇಲ್ಲಿನ ಉಣಕಲ್‌ ಕ್ರಾಸ್‌ನಲ್ಲಿರುವ ದಿ ಪ್ರೆಸಿಡೆಂಟ್‌ ಹೋಟೆಲ್‌ನ ರಿಸೆಪ್ಶನ್‌ ಲಾಬಿಯಲ್ಲಿ ಅವರ ಇಬ್ಬರು ಆಪ್ತರು ಮಂಗಳವಾರ ಮಧ್ಯಾಹ್ನ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ. ಕಲಘಟಗಿ ತಾಲ್ಲೂಕಿನ ದುಮ್ಮವಾಡದ ಮಹಾಂತೇಶ ಶಿರೂರ ಮತ್ತು ಧಾರವಾಡದ ಮಂಜುನಾಥ ಮರೇವಾಡ ಹತ್ಯೆ ಆರೋಪಿಗಳು.

ಘಟನೆಗೆ ಸಂಬಂಧಿಸಿದಂತೆ ಗುರೂಜಿ ಅವರ ಸಹೋದರನ ಮಗ ಸಂಜಯ್‌ ಅಂಗಡಿ ವಿದ್ಯಾನಗರ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದು, ತಡರಾತ್ರಿ ಪ್ರಥಮ ಮಾಹಿತಿ ವರದಿ( ಎಫ್ ಐ ಆರ್) ದಾಖಲಾಗಿದೆ. ಎಫ್‌ಐಆರ್‌ನಲ್ಲಿ ಮಹತ್ವದ ಅಂಶಗಳು ಬಯಲಾಗಿದೆ.

‘ಹತ್ಯೆ ಆರೋಪಿಗಳಾದ ಮಹಾಂತೇಶ ಮತ್ತು ಮಂಜುನಾಥ ಗುರೂಜಿ ಅವರ ಸರಳ ವಾಸ್ತು ಸಂಸ್ಥೆಯ ಮಾಜಿ ಉದ್ಯೋಗಿಗಳು. ಅಲ್ಲಿಯೇ ಉದ್ಯೋಗ ಮಾಡುತ್ತಿದ್ದ ವನಜಾಕ್ಷಿ ಜೊತೆ ಮಹಾಂತೇಶ ಮದುವೆಯಾಗಿದ್ದ. ಗುರೂಜಿ ಅವರ ಎಲ್ಲ ವ್ಯವಹಾರಗಳು ಮೂವರಿಗೂ ತಿಳಿದಿತ್ತು. ಅಲ್ಲದೆ, ವನಜಾಕ್ಷಿ ಗುರೂಜಿಗೆ ಆಪ್ತಳಾಗಿದ್ದು, ಅವರ ಹೆಸರಲ್ಲಿ ಗೋಕುಲ ರಸ್ತೆಯ ಗುರೂಜಿ ಅಪಾರ್ಟ್‌ಮೆಂಟ್‌ ಸೇರಿದಂತೆ ಹಲವು ಆಸ್ತಿಗಳನ್ನು ನೋಂದಣಿ ಮಾಡಿಸಿದ್ದರು. ಆಸ್ತಿಯನ್ನು ಬೇರೆಯವರಿಗೆ ಮಾರಾಟ ಮಾಡಿರುವ ಕುರಿತು ಪ್ರಶ್ನಿಸಿದಾಗ ಭಿನ್ನಾಭಿಪ್ರಾಯ ಏರ್ಪಟ್ಟಿತ್ತು’ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಆಸ್ತಿ ಹಾಳಾಗುತ್ತಿದೆ ಎಂದು ಗುರೂಜಿ ಅವರು, ನೋಂದಣಿ ಮಾಡಿರುವ ಆಸ್ತಿಗಳನ್ನು ಮರಳಿಸುವಂತೆ ಕೇಳಿದಾಗ ಗಲಾಟೆ ಆರಂಭವಾಗಿತ್ತು. ಈ ಹಿನ್ನೆಲೆಯಲ್ಲಿ ಗುರೂಜಿ ಅವರ ಹತ್ಯೆ ಆಗಿರಬಹುದು ಎನ್ನುವ ಶಂಕೆ ವ್ಯಕ್ತವಾಗಿದೆ. ವನಜಾಕ್ಷಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ಈ ಕುರಿತು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ದೇಶಾದ್ಯಂತ ಸರಳ ವಾಸ್ತು ಬಗ್ಗೆ ಸಲಹೆ ನೀಡುತ್ತಿದ್ದ ಗುರೂಜಿ ಅವರು ಮುಂಬೈ, ಬೆಂಗಳೂರು, ಹುಬ್ಬಳ್ಳಿ ಸೇರಿದಂತೆ ಹಲವೆಡೆ ಕಚೇರಿ ತೆರೆದಿದ್ದರು. ಇವರ ಬಳಿ ಸಲಹೆ ಪಡೆಯಲು ದೇಶ-ವಿದೇಶಗಳಿಂದ ಭಕ್ತರು ಆಗಮಿಸುತ್ತಿದ್ದರು. ಉದ್ಯೋಗಿಗಳ ಹೆಸರಿನಲ್ಲಿ ಆಸ್ತಿ ಮಾಡಿದ್ರಾ ಗುರೂಜಿ? ಹತ್ಯೆಗೆ ಆಸ್ತಿ ಕಾರಣ? ಎನ್ನುವ ಹಲವು ಪ್ರಶ್ನೆಗಳು ಉದ್ಭವಿಸಿವೆ.

ಇನ್ನು ಬಹು ಮುಖ್ಯವಾಗಿ ಈ ಕೊಲೆಯ ರೂವಾರಿ ವನಜಾಕ್ಷಿ ಎನ್ನಲಾಗಿದ್ದು, ವನಜಾಕ್ಷಿ ಜೊತೆಗೆ ಚಂದ್ರಶೇಖರ ಗುರುಜಿ ಅತ್ಯಂತ ಸಲುಗೆ ಹೊಂದಿದ್ದರು ಎನ್ನಲಾಗಿದೆ. ಚಂದ್ರಶೇಖರ ಗುರೂಜಿ ಸಾವಿರಾರು ಕೋಟಿ ಒಡೆಯನಾಗಿದ್ದು, ಅನೇಕ ಸಚಿವರು ಶಾಸಕರ ಜೊತೆಗೆ ವ್ಯಾಪಾರ ವಹಿವಾಟು ಮತ್ತು ಪಾಲುದಾರಿಕೆ ಹೊಂದಿದ್ದಾರೆ ಎನ್ನಲಾಗಿದೆ.

ಆದರೆ ಅವರದೇ ಆದ ಸಂಸ್ಥೆಯಲ್ಲಿ ಒಬ್ಬ ಸಾಮಾನ್ಯ ಉದ್ಯೋಗಿ ಜೊತೆಗೆ ಅಷ್ಟೊಂದು ಆಸ್ತಿ ವಹಿವಾಟು ಹೊಂದುವಷ್ಟು ಸಲುಗೆ ಹೊಂದಿದ್ದು ಭಾರೀ ಚರ್ಚೆಗೆ ಮತ್ತು ಅನುಮಾನಕ್ಕೆ ಗ್ರಾಸವಾಗಿದೆ. ಪೊಲೀಸರ ತನಿಖೆಯಿಂದಷ್ಟೇ ಸತ್ಯ ಹೊರಬೀಳಬೇಕಾಗಿದೆ. ಆದರೆ ಹುಬ್ಬಳ್ಳಿಃ ಧಾರವಾಡ ಪೊಲೀಸ್ ಕಮಿಷನರ್ ಲಾಬೂರಾಮ್ ಕೊಲೆಗೆ ಸಂಬಂಧಿಸಿದಂತೆ ಯಾವುದೇ ಮಾಹಿತಿ ನೀಡಿಲ್ಲ.


Stay up to date on all the latest ರಾಜ್ಯ news
Poll
K Annamalai

ಎನ್‌ಡಿಎಯಿಂದ ಹೊರಬರುವ ಎಐಎಡಿಎಂಕೆ ನಿರ್ಧಾರವು 2024ರ ಲೋಕಸಭೆ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಬಿಜೆಪಿ ಪಕ್ಷದ ಸಾಧನೆ ಮೇಲೆ ಪರಿಣಾಮ ಬೀರಲಿದೆಯೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp