social_icon

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಅವಾಂತರ: ಹಲವು ಕಡೆಗಳಲ್ಲಿ ಭೂಕುಸಿತ

ಕಳೆದೊಂದು ವಾರದಿಂದ ಬಿಟ್ಟೂಬಿಡದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಸುರಿಯುತ್ತಿದ್ದು, ನಿನ್ನೆ ಶುಕ್ರವಾರ ಮಳೆ ಕಡಿಮೆಯಾಗಿದ್ದರೂ ಸತತ ಮಳೆಯಿಂದಾಗಿ ಹಲವೆಡೆ ಸಾಕಷ್ಟು ಅವಘಡಗಳು, ಹಾನಿ ಸಂಭವಿಸಿವೆ. ಹಲವೆಡೆ ಭೂಕುಸಿತ, ಮರಗಳು ಧರೆಗುರುಳಿದ್ದು, ಮಳೆ ನೀರು ಹಲವು ಕಡೆಗಳಲ್ಲಿ ಮನೆಯೊಳಗೆ ನುಗ್ಗಿವೆ.

Published: 09th July 2022 08:38 AM  |   Last Updated: 09th July 2022 01:21 PM   |  A+A-


A house has a narrow miss after a landslide at Moodbidri in Dakshina Kannada district

ಭೂಕುಸಿತದಿಂದ ಸ್ಪಲ್ಪದರಲ್ಲಿಯೇ ತಪ್ಪಿಸಿಕೊಂಡ ಮೂಡಬಿದರೆಯ ಮನೆ

Posted By : sumana
Source : The New Indian Express

ಮಂಗಳೂರು: ಕಳೆದೊಂದು ವಾರದಿಂದ ಬಿಟ್ಟೂಬಿಡದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಸುರಿಯುತ್ತಿದ್ದು, ನಿನ್ನೆ ಶುಕ್ರವಾರ ಮಳೆ ಕಡಿಮೆಯಾಗಿದ್ದರೂ ಸತತ ಮಳೆಯಿಂದಾಗಿ ಹಲವೆಡೆ ಸಾಕಷ್ಟು ಅವಘಡಗಳು, ಹಾನಿ ಸಂಭವಿಸಿವೆ. ಹಲವೆಡೆ ಭೂಕುಸಿತ, ಮರಗಳು ಧರೆಗುರುಳಿದ್ದು, ಮಳೆ ನೀರು ಹಲವು ಕಡೆಗಳಲ್ಲಿ ಮನೆಯೊಳಗೆ ನುಗ್ಗಿವೆ.

ಇಂದು ಶನಿವಾರದವರೆಗೆ ದಕ್ಷಿಣ ಕನ್ನಡದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ರಜೆ. ನಿನ್ನೆ ಸಾಯಂಕಾಲ ಹೊತ್ತಿಗೆ ಮಳೆ ಕಡಿಮೆಯಾಯಿತು. 

ಮೂಡಬಿದಿರೆಯಲ್ಲಿ ಅಡಿಕೆ ತೋಟ ಕುಸಿದು ಮನೆ ಅಪಾಯದಲ್ಲಿದೆ. ಪ್ರಶಾಂತ್ ಮತ್ತು ರಾಜೇಶ್ ಎಂಬುವರಿಗೆ ಸೇರಿದ ಜಮೀನಿನ ಮಣ್ಣು ಜಾರಿ ಬಿದ್ದಿದ್ದು, ಮನೆ ಯಾವಾಗ ಬೇಕಾದರೂ ಕುಸಿಯುವ ಸಾಧ್ಯತೆ ಇದೆ. 100ಕ್ಕೂ ಹೆಚ್ಚು ಅಡಕೆ ಮರಗಳು ಸಂಪೂರ್ಣ ನಾಶವಾಗಿದ್ದು, 25 ಲಕ್ಷ ರೂಪಾಯಿಗಳವರೆಗೆ ನಷ್ಟವಾಗಿದೆ. ಭೂಕುಸಿತದ ಭೀತಿಯಿಂದ ಮನೆಯವರು ಮನೆ ಖಾಲಿ ಮಾಡಿದ್ದಾರೆ. ಸುಳ್ಯ ತಾಲ್ಲೂಕಿನ ಜಾಲ್ಸೂರಿನಲ್ಲೂ ಗುಡ್ಡ ಕುಸಿದಿದ್ದು ಹಲವು ವಾಹನಗಳು ಹಾನಿಗೀಡಾಗಿವೆ.

ಮಂಗಳೂರಿನ ಬೊಂದೆಲ್ ಬಳಿಯ ಬಟ್ರಕೋಡಿಯಲ್ಲಿ ಹೊಸದಾಗಿ ನಿರ್ಮಿಸಲಾಗಿದ್ದ ಕಾಂಕ್ರೀಟ್ ರಸ್ತೆ ಸಂಪೂರ್ಣ ಹಾಳಾಗಿದೆ. ಐದು ತಿಂಗಳ ಹಿಂದೆ ನಿರ್ಮಿಸಿದ ರಸ್ತೆಯಲ್ಲಿ ಮಳೆ ನೀರು ಹರಿಯಲು ಸೂಕ್ತ ಸೌಲಭ್ಯ ಇಲ್ಲದ ಕಾರಣ ಬಿರುಕು ಬಿಟ್ಟಿದೆ. ಇದೇ ವೇಳೆ ನಗರದ ಕೊಟ್ಟಾರ ಗುತ್ತು ಎಂಬಲ್ಲಿ ಬೃಹತ್ ಮರವೊಂದು ರಸ್ತೆಗೆ ಬಿದ್ದ ಪರಿಣಾಮ ಸುಮಾರು ಮೂರು ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು.

ಇದನ್ನೂ ಓದಿ: ಕಾರವಾರ: ಭಾರೀ ಮಳೆ, ಜಿಲ್ಲೆಯ ಹಲವೆಡೆ ಜಲಾವೃತ!

ಕಣ್ಣೂರಿನಲ್ಲಿ ಭೂಕುಸಿತದಿಂದ ಹಲವು ಕುಟುಂಬಗಳು ಅಪಾಯದಲ್ಲಿವೆ. 

ಮೋರಿ ಕೊಚ್ಚಿಹೋಗಿ ಸೃಷ್ಟಿಯಾದ ಕಂದಕದಿಂದ ಅದ್ಯಪಾಡಿ ಮುಖ್ಯ ಕಾಂಕ್ರೀಟ್ ರಸ್ತೆಯ ಒಂದು ಭಾಗವನ್ನು ಮಂಗಳೂರು ವಿಮಾನ ನಿಲ್ದಾಣದ ಕಡೆಗೆ ಹೋಗುವ ರಸ್ತೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು, ಅದನ್ನೀಗ ಅಧಿಕಾರಿಗಳು ಖುದ್ದಾಗಿ ಹೋಗಿ ಪರಿಶೀಲಿಸಿ ಸರಿಪಡಿಸಿದ್ದಾರೆ. ಅಧಿಕಾರಿಗಳು ಕಾಂಕ್ರೀಟ್ ರಸ್ತೆಯ ಭಾಗವನ್ನು ಕೆಡವಿದ್ದರು. ಇದೀಗ 8 ಮೀಟರ್ ಅಗಲದ ಕಂದಕವನ್ನು ಬೃಹತ್ ಬಂಡೆಗಳಿಂದ ತುಂಬುವ ಕೆಲಸವನ್ನು ಪ್ರಾರಂಭಿಸಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣದ ರನ್‌ ವೇ ಮಧ್ಯಭಾಗದಿಂದ ಒಳಗಿನ ತಡೆಗೋಡೆಗೆ ಇರುವ ಅಂತರವು ಸುಮಾರು 75 ಮೀಟರ್‌ಗಳಷ್ಟಿದೆ. ಪರಿಧಿಯ ಗೋಡೆಗೆ ಹೆಚ್ಚುವರಿ 25 ಮೀಟರ್‌ಗಳ ಬಫರ್ ಇದೆ, ಇದು ಗಟ್ಟಿಯಾದ ಅಡಿಪಾಯದ ಮೇಲೆ ನಿರ್ಮಿಸಲಾದ ಗೋಡೆಯ ಮೇಲೆ ನಿಂತಿದೆ. ರನ್‌ವೇಗೆ ಯಾವುದೇ ಅಪಾಯವಿಲ್ಲ. ವಿಮಾನ ನಿಲ್ದಾಣದಲ್ಲಿ ಕಾರ್ಯಾಚರಣೆಗಳು ಸಾಮಾನ್ಯವಾಗಿ ನಡೆಯುತ್ತಿವೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


Stay up to date on all the latest ರಾಜ್ಯ news
Poll
K Annamalai

ಎನ್‌ಡಿಎಯಿಂದ ಹೊರಬರುವ ಎಐಎಡಿಎಂಕೆ ನಿರ್ಧಾರವು 2024ರ ಲೋಕಸಭೆ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಬಿಜೆಪಿ ಪಕ್ಷದ ಸಾಧನೆ ಮೇಲೆ ಪರಿಣಾಮ ಬೀರಲಿದೆಯೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp