ಮಳೆಹಾನಿ: ಹೆಚ್ಚುವರಿ ಪರಿಹಾರ ನಿಗದಿಪಡಿಸಿ ರಾಜ್ಯ ಸರ್ಕಾರ ಆದೇಶ

ರಾಜ್ಯದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಆಗಿರುವ ಹಾನಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹೆಚ್ಚುವರಿ ಪರಿಹಾರ ನಿಗದಿಪಡಿಸಿ ಆದೇಶ ಹೊರಡಿಸಿದೆ. 
ಸಿಎಂ ಬೊಮ್ಮಾಯಿ
ಸಿಎಂ ಬೊಮ್ಮಾಯಿ
Updated on

ಬೆಂಗಳೂರು: ರಾಜ್ಯದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಆಗಿರುವ ಹಾನಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹೆಚ್ಚುವರಿ ಪರಿಹಾರ ನಿಗದಿಪಡಿಸಿ ಆದೇಶ ಹೊರಡಿಸಿದೆ.

ಹೌದು.. ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಕೆಲವೆಡೆ ನದಿಗಳು ಅಪಾಯಮಟ್ಟ ಮೀರಿ ಹರಿಯುತ್ತಿವೆ. ಮನೆಗಳು ಕುಸಿದಿದ್ದು, ಜೀವ ಹಾನಿ, ಆಸ್ತಿಪಾಸ್ತಿ ಹಾನಿ ಸಂಭವಿಸಿದೆ. ಇನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉಡುಪಿ, ಕೊಡಗು, ಮಡಿಕೇರಿ ಸುತ್ತಮುತ್ತಲು ತೆರಳಿ ಹಾನಿಗೊಳಗಾದ ಪ್ರದೇಶಗಳನ್ನು ವೀಕ್ಷಿಸಿದ್ದಾರೆ.

ಇದರ ಬೆನ್ನಲ್ಲೇ ರಾಜ್ಯದಲ್ಲಿ ನೆರೆ ಸಂತ್ರಸ್ತರಿಗೆ ರಾಜ್ಯ ಸರ್ಕಾರ ಈ ಬಾರಿಯೂ ಕೇಂದ್ರ ಸರ್ಕಾರದ ಎಸ್ ಡಿಆರ್ ಎಫ್/ಎನ್ ಡಿಆರ್ ಎಫ್ ಮಾರ್ಗಸೂಚಿಗಿಂತ ಹೆಚ್ಚುವರಿ ಪರಿಹಾರ ನಿಗದಿ ಪಡಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಎಸ್ ಡಿಆರ್ ಎಫ್/ಎನ್ ಡಿಆರ್ ಎಫ್ ಮಾರ್ಗಸೂಚಿ ದರ ಮತ್ತು ಪರಿಷ್ಕೃತ ದರ ಹೀಗಿದೆ.
* ಮಾನವ ಜೀವಹಾನಿಗೆ ಎಸ್ ಡಿಆರ್ ಎಫ್/ಎನ್ ಡಿಆರ್ ಎಫ್ ಮಾರ್ಗಸೂಚಿ ದರ 4 ಲಕ್ಷ ರೂ. ಇದ್ದು, ಪರಿಷ್ಕೃತ ದರ 5 ಲಕ್ಷ ರೂ ನಿಗದಿಪಡಿಸಿದೆ.
* ಪ್ರವಾಹ ನೀರು ನುಗ್ಗಿರುವ ಮನೆಗಳು ಗೃಹೋಪಯೋಗಿ ವಸ್ತುಗಳು ಹಾಗೂ ಬಟ್ಟೆ ಬರೆ ಹಾನಿಗೆ ರೂ 3,800 (ಎಸ್ ಡಿಆರ್ ಎಫ್/ಎನ್ ಡಿಆರ್ ಎಫ್ ಮಾರ್ಗಸೂಚಿ ದರ), ಪರಿಷ್ಕೃತ ದರ 10,000 ರೂ.
* ಶೇ 75ಕ್ಕಿಂತ ಹೆಚ್ಚು ಸಂಪೂರ್ಣ ಹಾನಿ ಎಂ ವರ್ಗಕ್ಕೆ 95,೧೦೦ (ಎಸ್ ಡಿಆರ್ ಎಫ್/ಎನ್ ಡಿಆರ್ ಎಫ್ ಮಾರ್ಗಸೂಚಿ ದರ), ಪರಿಷ್ಕೃತ ದರ 5 ಲಕ್ಷ ರೂ.
* ಶೇ. 25 ರಿಂದ ಶೇ 75ರಷ್ಟು ತೀವ್ರ ಮನೆಹಾನಿ (ಕೆಡವಿ ಹೊಸದಾಗಿ ನಿರ್ಮಿಸುವುದು) ಬಿ೨ ವರ್ಗಕ್ಕೆ 95,೧೦೦ (ಎಸ್ ಡಿಆರ್ ಎಫ್/ಎನ್ ಡಿಆರ್ ಎಫ್ ಮಾರ್ಗಸೂಚಿ ದರ), ಪರಿಷ್ಕೃತ ದರ ೫ ಲಕ್ಷ ರೂ.
* ಶೇ. 25 ರಿಂದ ಶೇ 75ರಷ್ಟು ತೀವ್ರ ಮನೆಹಾನಿ (ದುರಸ್ಥಿ), ಬಿ1 ವರ್ಗಕ್ಕೆ 95,೧೦೦ (ಎಸ್ ಡಿಆರ್ ಎಫ್/ಎನ್ ಡಿಆರ್ ಎಫ್ ಮಾರ್ಗಸೂಚಿ ದರ), ಪರಿಷ್ಕೃತ ದರ 3 ಲಕ್ಷ ರೂ.
* ಶೇ. 15 ರಿಂದ 25ರಷ್ಟು ಭಾಗಶಃ ಮನೆ ಹಾನಿ ಸಿ ವರ್ಗಕ್ಕೆ 5200 ರೂ. (ಎಸ್ ಡಿಆರ್ ಎಫ್/ಎನ್ ಡಿಆರ್ ಎಫ್ ಮಾರ್ಗಸೂಚಿ ದರ), ಪರಿಷ್ಕೃತ ದರ 50 ಸಾವಿರ ರೂ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com