ಸಿಎಂ ಇಬ್ರಾಹಿಂ ರಾಜಿನಾಮೆಯಿಂದ ತೆರವಾಗಿದ್ದ ಪರಿಷತ್ ಸ್ಥಾನಕ್ಕೆ ಚುನಾವಣೆ ಘೋಷಣೆ!

ಸಿಎಂ ಇಬ್ರಾಹಿಂ ರಾಜೀನಾಮೆ ಯಿಂದ ತೆರವಾಗಿದ್ದ ರಾಜ್ಯ ವಿಧಾನಪರಿಷತ್ ನ ಒಂದು ಸ್ಥಾನಕ್ಕೆ ಚುನಾವಣೆ ಘೋಷಣೆಯಾಗಿದೆ.
ಸಿಎಂ ಇಬ್ರಾಹಿಂ
ಸಿಎಂ ಇಬ್ರಾಹಿಂ

ಬೆಂಗಳೂರು: ಸಿಎಂ ಇಬ್ರಾಹಿಂ ರಾಜೀನಾಮೆ ಯಿಂದ ತೆರವಾಗಿದ್ದ ರಾಜ್ಯ ವಿಧಾನಪರಿಷತ್ ನ ಒಂದು ಸ್ಥಾನಕ್ಕೆ ಚುನಾವಣೆ ಘೋಷಣೆಯಾಗಿದೆ. 

ಆಗಸ್ಟ್ 11ರಂದು ಮತದಾನ ನಡೆಯಲಿದ್ದು, ನಾಮಪತ್ರ ಸಲ್ಲಿಕೆಗೆ ಆಗಸ್ಟ್ 1 ಕಡೆಯ ದಿನ. ಈ ಕುರಿತು ಭಾರತ ಚುನಾವಣೆ ಆಯೋಗ ಸೋಮವಾರ ಪ್ರಕಟಣೆ ಹೊರಡಿಸಿದೆ. ಆಗಸ್ಟ್4 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ.

ಆಗಸ್ಟ್ 11ರಂದು ಬೆಳಗ್ಗೆ 9ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದೆ. ಅದೇ ದಿನ ಸಂಜೆ 5 ಗಂಟೆಗೆ ಮತ ಏಣಿಕೆ ನಡೆಯಲಿದೆ. ಬಹುತೇಕ ಅವಿರೋಧ ಆಯ್ಕೆ ಸಾಧ್ಯತೆಯಿದ್ದು ಬಿಜೆಪಿಗೆ ಸ್ಥಾನ ಲಭಿಸಲಿರುವ ಸಾಧ್ಯತೆಯಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com