'ಜೈಲಿಗೆ ಹೋಗಿ ಬಂದು ಮೂರು ವರ್ಷ ಆಯ್ತು, ಈಗ ಮತ್ತೆ ಲವ್ ಲೆಟರ್': ಡಿಕೆ ಶಿವಕುಮಾರ್

ಇಡಿ ಹಾಗೂ ಐಟಿ ಅಧಿಕಾರಿಗಳು ನನಗೆ ಹಾಗೂ ನನ್ನೊಂದಿಗೆ ವ್ಯವಹರಿಸಿದವರಿಗೆ ಅನಗತ್ಯವಾಗಿ ಕಿರುಕುಳ ಕೊಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ.
ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್

ಬೆಂಗಳೂರು: ಇಡಿ ಹಾಗೂ ಐಟಿ ಅಧಿಕಾರಿಗಳು ನನಗೆ ಹಾಗೂ ನನ್ನೊಂದಿಗೆ ವ್ಯವಹರಿಸಿದವರಿಗೆ ಅನಗತ್ಯವಾಗಿ ಕಿರುಕುಳ ಕೊಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ.

ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಇಡಿ ವಿಚಾರಣೆಗೆ ವಿರೋಧ ವ್ಯಕ್ತಪಡಿಸಿ ಫ್ರೀಡಂ ಪಾರ್ಕ್ ನಲ್ಲಿಂದು ಪ್ರತಿಭಟನೆ ವೇಳೆ ಮಾತನಾಡಿದ ಅವರು, ನಾನು ಜೈಲಿಗೆ ಹೋಗಿ ಬಂದು ಮೂರು ವರ್ಷ ಆಯಿತು. ಈಗ ಮತ್ತೆ ಲವ್ ಲೆಟರ್ ಬರ್ತಾ ಇದ್ದಾವೆ. ಒಂದು ವರ್ಷ ಬಿಟ್ಟು ಬಿಡ್ರಪ್ಪ ಅಂತಾ ಇಡಿ, ಐಟಿ ಅಧಿಕಾರಿಗಳಿಗೆ ಪತ್ರ ಬರೆದಿದ್ದೇನೆ. ಎರಡ್ಮೂರು ವರ್ಷ ಬಿಟ್ಟು ಚಾರ್ಜ್ ಶೀಟ್ ಹಾಕಿದ್ದಾರೆ ಎಂದರು.

ನನ್ನ ಜೊತೆಗೆ ವ್ಯವಹಾರ ಮಾಡಿದವರಿಗೆ ನೋಟಿಸ್ ನೀಡುತ್ತಿದ್ದಾರೆ. ರಾಮನಗರ ಅಭ್ಯರ್ಥಿ ಸೇರಿದಂತೆ ನನ್ನೊಂದಿಗೆ ವ್ಯವಹಾರ ಮಾಡಿದವರಿಗೆ ನೋಟಿಸ್ ಕೊಟ್ಟು ಕರೆಯುತ್ತಿದ್ದಾರೆ. ನನ್ನಂತವರಿಗೆ ಇದೇ ರೀತಿಯ ಕಿರುಕುಳ ಕೊಡುತ್ತಿದ್ದಾರೆ ಎಂದು ಅವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com