ಹಿಂದೂ ಕಾರ್ಯಕರ್ತರ ಮೇಲೆ ಶಾಸಕ ಪ್ರಿಯಾಂಕ್ ಖರ್ಗೆ ದಬ್ಬಾಳಿಕೆ: ಮಠಾಧೀಶರ ದೂರು

ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಹಿಂದೂ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಬಂಜಾರ ಮಠ ಹಾಗೂ ವೀರಶೈವದ 50ಕ್ಕೂ ಹೆಚ್ಚು ಮಠಾಧೀಶರು ಮುಖ್ಯಮಂತ್ರಿ ಹಾಗೂ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರಿಗೆ ದೂರು ನೀಡಿದ್ದಾರೆ.
ಪ್ರಿಯಾಂಕ್ ಖರ್ಗೆ
ಪ್ರಿಯಾಂಕ್ ಖರ್ಗೆ

ಬೆಂಗಳೂರು: ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಹಿಂದೂ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಬಂಜಾರ ಮಠ ಹಾಗೂ ವೀರಶೈವದ 50ಕ್ಕೂ ಹೆಚ್ಚು ಮಠಾಧೀಶರು ಮುಖ್ಯಮಂತ್ರಿ ಹಾಗೂ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರಿಗೆ ದೂರು ನೀಡಿದ್ದಾರೆ.

ಚಿತ್ತಾಪುರ ವಿಧಾನಸಭಾ ಕ್ಷೇತ್ರದಲ್ಲಿ ಪ್ರಿಯಾಂಕ್ ಖರ್ಗೆ ಹಿಂದೂ ಕಾರ್ಯಕರ್ತರ ಮೇಲೆ ದೌರ್ಜನ್ಯ, ದಬ್ಬಾಳಿಕೆ ನಡೆಸುತ್ತಾ ಸುಳ್ಳು ಕೇಸ್ ಹಾಕಿಸುತ್ತಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಪ್ರಿಯಾಂಕ್ ಖರ್ಗೆ ಹೇಳಿದ ಹಾಗೆ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್ ಕೇಳುತ್ತಿದ್ದಾರೆ. ಪ್ರಮೋದ್ ಮುತಾಲಿಕ್ ಸೇರಿದಂತೆ ಹಲವು ಹಿಂದೂ ಕಾರ್ಯಕರ್ತರ ಮೇಲೆ ಕೇಸ್ ದಾಖಿಸಲಾಗಿದೆ. ಕೂಡಲೇ ಕೇಸ್ ವಾಪಸ್ ಪಡೆಯಬೇಕು ಹಾಗೂ ಚಿತ್ತಾಪುರ ಕ್ಷೇತ್ರದಲ್ಲಿ ಹಿಂದೂಗಳ ಮೇಲೆ ಆಗುತ್ತಿರುವ ದೌರ್ಜನ್ಯ ತಡೆಗಟ್ಟಿ ಎಂದು ಮನವಿ ಸಲ್ಲಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com