social_icon

42 ವರ್ಷಗಳ ನಂತರ, ಎಚ್‌ಆರ್‌ಬಿಆರ್ ಲೇಔಟ್‌ನಲ್ಲಿ ಭೂಮಿ ಸ್ವಾಧೀನಕ್ಕೆ ಬಿಡಿಎಗೆ ಸುಪ್ರೀಂ ಅನುಮತಿ

ಬೆಂಗಳೂರಿನ ಎಚ್‌ಆರ್‌ಬಿಆರ್ ಲೇಔಟ್‌ನಲ್ಲಿ ಸುಮಾರು 70 ಕೋಟಿ ರೂಪಾಯಿ ಮೌಲ್ಯದ 3 ಎಕರೆ 23 ಗುಂಟೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ(ಬಿಡಿಎ) ಸುಪ್ರೀಂ ಕೋರ್ಟ್ ಸೋಮವಾರ...

Published: 27th July 2022 03:31 PM  |   Last Updated: 27th July 2022 03:42 PM   |  A+A-


bda

ಬಾಣಸವಾಡಿ ಮುಖ್ಯರಸ್ತೆಯಲ್ಲಿರುವ ಭೂಮಿ

Posted By : lingaraj
Source : The New Indian Express

ಬೆಂಗಳೂರು: ಬೆಂಗಳೂರಿನ ಎಚ್‌ಆರ್‌ಬಿಆರ್ ಲೇಔಟ್‌ನಲ್ಲಿ ಸುಮಾರು 70 ಕೋಟಿ ರೂಪಾಯಿ ಮೌಲ್ಯದ 3 ಎಕರೆ 23 ಗುಂಟೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ (ಬಿಡಿಎ) ಸುಪ್ರೀಂ ಕೋರ್ಟ್ ಸೋಮವಾರ ಅನುಮತಿ ನೀಡಿದೆ. 

ಬಾಣಸವಾಡಿ ಮುಖ್ಯರಸ್ತೆಯಲ್ಲಿರುವ ಈ ಆಸ್ತಿಯನ್ನು ಬಿಟ್ಟು ಕೊಡಲು ನಿರಾಕರಿಸಿದ ಕುಟುಂಬದಿಂದ ಭೂಮಿ ಸ್ವಾಧೀನಪಡಿಸಿಕೊಳ್ಳಲು ಬಿಡಿಎ 42 ವರ್ಷಗಳಿಂದ ಕಾನೂನು ಹೋರಾಟ ನಡೆಸಿದ್ದು, ಪ್ರಕರಣ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು.

“ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಿಸಿದ ಬಿಡಿಎ ಉತ್ತರ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಜಿ ಕುಮಾರ್ ಅವರು, ಇದೊಂದು ಮಹತ್ವದ ತೀರ್ಪು. ಈ ಹಿಂದೆಯೇ ಬಿಡಿಎ ಇಲ್ಲಿ ಲೇಔಟ್ ಅಭಿವೃದ್ಧಿಪಡಿಸಿದ್ದು, ವ್ಯಾಜ್ಯಗಳಿಂದಾಗಿ ಈ ಭಾಗವನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಾಗಿರಲಿಲ್ಲ. ಇದಕ್ಕಾಗಿ ನಾವು 1980 ರಿಂದ ಕಾನೂನು ಹೋರಾಟ ನಡೆಸಿದ್ದೇವೆ. ಅಂತಿಮವಾಗಿ ಭೂಮಿ ನಮ್ಮ ವಶಕ್ಕೆ ಬರುತ್ತಿದ್ದು, ಈಗ ನಾವು ಈ ಆಸ್ತಿಯಲ್ಲಿ 40x60 ಚದರ ಅಡಿಯ 35 ಸೈಟ್‌ಗಳನ್ನು ಅಭಿವೃದ್ಧಿಪಡಿಸಬಹುದು ಎಂದು ಹೇಳಿದ್ದಾರೆ.

ಇದನ್ನು ಓದಿ: ಬಿಡಿಎ ನಿರ್ಮಿಸಿರುವ 'ಅತ್ಯಂತ ದುಬಾರಿ' ಫ್ಲಾಟ್‌ಗಳು ಶೀಘ್ರದಲ್ಲೇ ಮಾರಾಟ

ಈ ಜಾಗದಲ್ಲಿ ನಮ್ಮಿಂದ ಸೈಟ್ ಪಡೆಯಲು 10 ರಿಂದ 15 ವರ್ಷಗಳಿಂದ ಕಾಯುತ್ತಿರುವ ಕ್ರೀಡಾಪಟುಗಳು ಅಥವಾ ಪ್ರಶಸ್ತಿ ವಿಜೇತರಂತಹ ವಿಶೇಷ ವರ್ಗದ ಸೈಟ್ ಹಂಚಿಕೆದಾರರಿಗೆ ನಾವು ಇದನ್ನು ಹಸ್ತಾಂತರಿಸುತ್ತೇವೆ ಎಂದು ಜಿ ಕುಮಾರ್ ಅವರು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

"ಡಿನೋಟಿಫಿಕೇಶನ್ ಆದೇಶಗಳಿಂದ ಅರ್ಕಾವತಿ ಲೇಔಟ್‌ನಲ್ಲಿ ತಮ್ಮ ಸೈಟ್‌ಗಳನ್ನು ಕಳೆದುಕೊಂಡ ಅನೇಕರು ಪರ್ಯಾಯ ಸೈಟ್‌ಗಳಿಗಾಗಿ ಕಾಯುತ್ತಿದ್ದಾರೆ ಮತ್ತು ಅವರಿಗೆ ಇಲ್ಲಿ ಸೈಟ್‌ಗಳನ್ನು ಒದಗಿಸಬಹುದು" ಎಂದು ಅವರು ಹೇಳಿದ್ದಾರೆ.

ಬಿಡಿಎ 1977 ರಲ್ಲಿ ನಾರಾಯಣ ರೆಡ್ಡಿ ಅವರಿಗೆ ಸೇರಿದ್ದ (ಸರ್ವೆ ನಂ. 345) ಆಸ್ತಿಯನ್ನು ಪ್ರಾಥಮಿಕ ಸ್ವಾಧೀನಕ್ಕಾಗಿ ಅಧಿಸೂಚನೆ ಹೊರಡಿಸಿತ್ತು ಮತ್ತು 1980 ರಲ್ಲಿ ಅಂತಿಮ ಅಧಿಸೂಚನೆಯನ್ನು ಹೊರಡಿಸಿತು. ಆದರೆ ಅವರ ಕುಟುಂಬ ಬಿಡಿಎ ಅಧಿಸೂಚನೆ ವಿರುದ್ಧ ಕೋರ್ಟ್ ಮೆಟ್ಟಿಲೇರಿತ್ತು ಎಂದು ಅವರು ವಿವರಿಸಿದ್ದಾರೆ.


Stay up to date on all the latest ರಾಜ್ಯ news
Poll
N R narayana Murty

ಯಾವುದನ್ನೂ ಫ್ರೀಯಾಗಿ ಕೊಡಬಾರದು ಎಂದು ಎನ್ ಆರ್ ನಾರಾಯಣ ಮೂರ್ತಿ ಹೇಳಿದ್ದಾರೆ.


Result
ಸರಿ
ತಪ್ಪು

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp