social_icon

ಹುಲಿ ಗಣತಿ ಕಾರ್ಯಕ್ಕೆ ಕಾಳಿ ಹುಲಿ ಸಂರಕ್ಷಿತಾ ಪ್ರದೇಶ ಮಾದರಿ!

ಹುಲಿ ಗಣತಿ ಕಾರ್ಯ ಕಷ್ಟಸಾಧ್ಯ ಎನ್ನುವ ಇತರ ಹುಲಿ ಮೀಸಲು ಪ್ರದೇಶಗಳಿಗೆ ಉತ್ತರ ಕನ್ನಡ ಜಿಲ್ಲೆಯ ಹುಲಿ ಮೀಸಲು ಪ್ರದೇಶ ಕಾಳಿ ಹುಲಿ ಸಂರಕ್ಷಿತಾ ಪ್ರದೇಶ ಮಾದರಿಯಾಗಿದೆ.

Published: 29th July 2022 05:49 PM  |   Last Updated: 29th July 2022 05:57 PM   |  A+A-


Casual_Tiger_Images1

ಸಾಂದರ್ಭಿಕ ಚಿತ್ರ

The New Indian Express

ಹುಬ್ಬಳ್ಳಿ: ಹುಲಿ ಗಣತಿ ಕಾರ್ಯ ಕಷ್ಟಸಾಧ್ಯ ಎನ್ನುವ ಇತರ ಹುಲಿ ಮೀಸಲು ಪ್ರದೇಶಗಳಿಗೆ ಉತ್ತರ ಕನ್ನಡ ಜಿಲ್ಲೆಯ ಹುಲಿ ಮೀಸಲು ಪ್ರದೇಶ ಕಾಳಿ ಹುಲಿ ಸಂರಕ್ಷಿತಾ ಪ್ರದೇಶ ಮಾದರಿಯಾಗಿದೆ. ರಾಷ್ಟ್ರೀಯ ಹುಲಿ ಸಂರಕ್ಷಿತಾ ಪ್ರಾಧಿಕಾರ ಮತ್ತು ಭಾರತದ ವನ್ಯಜೀವಿ ಸಂಸ್ಥೆ ಹುಲಿ ಗಣತಿಗೆ ಅಳವಡಿಸಿರುವ ಶಿಷ್ಟಾಚಾರವನ್ನು ಕಾಳಿ ಮೀಸಲು ಪ್ರದೇಶ ಸರಿಯಾದ ರೀತಿಯಲ್ಲಿ ಅನುಸರಿಸುತ್ತಿದೆ ಎಂದು ಅರಣ್ಯಾಧಿಕಾರಿಗಳು ಹೇಳಿದ್ದಾರೆ. 

ಉತ್ತರ ಕನ್ನಡ ಜಿಲ್ಲೆಯಲ್ಲಿ ಬರುವ ಕಾಳಿ ಹುಲಿ ಸಂರಕ್ಷಿತ ಪ್ರದೇಶ ಸುಂದರವಾದ ಅರಣ್ಯ ಪ್ರದೇಶ ಮತ್ತು ಪ್ರಮುಖ ಪ್ರವಾಸಿ ತಾಣವೂ ಆಗಿದೆ. ಈ ಹಿಂದೆ 2018ರಲ್ಲಿ ನಡೆಸಲಾದ ಗಣತಿಯಲ್ಲಿ 12 ಹುಲಿಗಳಿರುವುದಾಗಿ ಹೇಳಲಾಗಿತ್ತು. ಹೆಚ್ಚಿನ ಸಂಖ್ಯೆಯಲ್ಲಿ ಹುಲಿಗಳು ಇರಬಹುದು ಅಥವಾ ನಿರೀಕ್ಷೆಗಿಂತ ಕಡಿಮೆ ಇರಬಹುದು ಎಂದು ಅರಣ್ಯಾಧಿಕಾರಿಗಳು ವಿಶ್ವಾಸ ಹೊಂದಿದ್ದಾರೆ. 

ಈ ಬಾರಿ ಕ್ಯಾಮರ್ ಟ್ರಾಪ್ ಪ್ರಯೋಗ ಮೂಲಕ ಹುಲಿ ಗಣತಿ ನಡೆಸಲಾಗುತ್ತಿದೆ. ಇದರಿಂದ ಮೀಸಲು ಪ್ರದೇಶದಲ್ಲಿರುವ ವಾಸ್ತವ ಹುಲಿಗಳ ಸಂಖ್ಯೆ ತಿಳಿಯಲು ನೆರವಾಗಲಿದೆ. ಕಾಳಿ ಹುಲಿ ಮೀಸಲು ಪ್ರದೇಶವಲ್ಲದೆ ಉತ್ತರ ಕನ್ನಡ ಜಿಲ್ಲೆಯ ಇತರ ಅರಣ್ಯ ಪ್ರದೇಶಗಳಲ್ಲಿಯೂ ಗಣತಿ ನಡೆಸಲಾಗುತ್ತಿದೆ. ಆಂತರಿಕ ವರದಿ ಪ್ರಕಾರ, ಜಿಲ್ಲೆಯಲ್ಲಿ 30 ಹುಲಿಗಳಿದ್ದು, ಅವುಗಳಲ್ಲಿ ಬಹುತೇಕ ಕಾಳಿ ಮೀಸಲು ಅರಣ್ಯ ಪ್ರದೇಶದಲ್ಲಿವೆ. ಯಲ್ಲಾಪುರ, ಶಿರಸಿ, ಹಳಿಯಾಳ ವಿಭಾಗದಿಂದಲೂ ಹುಲಿಗಳು ಇರುವ ಬಗ್ಗೆ ವರದಿಯಾಗಿದೆ.

ಇದನ್ನೂ ಓದಿ: ಕಾಳಿ ಹುಲಿ ಸಂರಕ್ಷಿತಾರಣ್ಯದಲ್ಲಿ ಕರ್ನಾಟಕದ ಮೊದಲ ವೈಲ್ಡ್ ಆರ್ಕಿಡೇರಿಯಂ ಸ್ಥಾಪನೆ

ಎನ್ ಟಿಸಿಎ ಮತ್ತು ಭಾರತದ ವನ್ಯಜೀವಿ ಸಂಸ್ಥೆಯ ಶಿಷ್ಠಾಚಾರದಂತೆ ಹುಲಿ ಗಣತಿ ಕಾರ್ಯ ನಡೆಸಲಾಗುತ್ತದೆ. ಈ ಉದ್ದೇಶಕ್ಕಾಗಿ ಸ್ವಯಂ ಸೇವಕರಿಗೆ ಲೈನ್ ಟ್ರಾನ್ಸೆಕ್ಟ್ ಸಮೀಕ್ಷೆಯನ್ನು ಕಡ್ಡಾಯಗೊಳಿಸಲಾಗಿದೆ. ಹುಲಿಗಳ ನಿಖರವಾದ ಸಂಖ್ಯೆ ತಿಳಿಯಲು ಸರಿಯಾಗಿ ಈ ಕಾರ್ಯವಿಧಾನವನ್ನು ಅನುಸರಿಸಬೇಕು ಎಂದು ಅರಣ್ಯ ಅಧಿಕಾರಿಯೊಬ್ಬರು ಹೇಳಿದ್ದಾರೆಯ ಕರ್ನಾಟಕದಲ್ಲಿ ಹೆಚ್ಚಿನ ಸಂಖ್ಯೆಯ ಹುಲಿಗಳಿರುವುದಾಗಿ ಅರಣ್ಯ ಇಲಾಖೆ ಹೇಳಿದೆ. 

ಕೇರಳ, ತಮಿಳುನಾಡಿನೊಂದಿಗೆ ಕರ್ನಾಟಕ ಹುಲಿಗಳಿಗೆ ಪ್ರಮುಖ ಆವಾಸ ಸ್ಥಳವಾಗಿದೆ. ಇದೇ ರೀತಿಯಾಗಿ ಕಾಳಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ವಿವಿಧ ರೀತಿಯ ಪ್ರಾಣಿಗಳಿವೆ. ಇಲ್ಲಿ ಹುಲಿಗಳ ಸಂಖ್ಯೆಯಲ್ಲಿ ಏರಿಕೆಯಾಗಿರುವುದನ್ನು ನಿರೀಕ್ಷಿಸಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.


Stay up to date on all the latest ರಾಜ್ಯ news
Poll
rahul-gandhi

ಮಾನಹಾನಿ ಪ್ರಕರಣದಲ್ಲಿ ಜೈಲು ಶಿಕ್ಷೆ; ಲೋಕಸಭಾ ಸದಸ್ಯ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹ: ಇದರಿಂದ...


Result
ಕಾಂಗ್ರೆಸ್ ಗೆ ಹಿನ್ನಡೆ
ಕಾಂಗ್ರೆಸ್ ಗೆ ಪ್ರಯೋಜನ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp