ಅಮಾಯಕರ ಹತ್ಯೆ ಮಾಡಿದವರ ಎನ್‌ಕೌಂಟರ್‌ಗೂ ಸರ್ಕಾರ ಸಿದ್ಧ: ಅಶ್ವತ್ಥನಾರಾಯಣ

ಮಂಗಳೂರಿನಲ್ಲಿ ಅಮಾಯಕರ ಹತ್ಯೆ ಮಾಡಿದ ಆರೋಪಿಗಳ ವಿರುದ್ಧ ಎನ್‌ಕೌಂಟರ್ ಸೇರಿದಂತೆ ಯಾವುದೇ ಕಠಿಣ ಕ್ರಮಕ್ಕೆ ಸರ್ಕಾರ ಸಿದ್ಧವಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.
ಅಶ್ವತ್ಥ ನಾರಾಯಣ
ಅಶ್ವತ್ಥ ನಾರಾಯಣ

ರಾಮನಗರ: ಮಂಗಳೂರಿನಲ್ಲಿ ಅಮಾಯಕರ ಹತ್ಯೆ ಮಾಡಿದ ಆರೋಪಿಗಳ ವಿರುದ್ಧ ಎನ್‌ಕೌಂಟರ್ ಸೇರಿದಂತೆ ಯಾವುದೇ ಕಠಿಣ ಕ್ರಮಕ್ಕೆ ಸರ್ಕಾರ ಸಿದ್ಧವಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.

ರಾಮನಗರದಲ್ಲಿ ಮಾತನಾಡಿದ ಅವರು,  ಯಾವ ಕಾರಣಕ್ಕೂ ಕೊಲೆ ಗಡುಕರು, ದುಷ್ಕರ್ಮಿಗಳನ್ನು ರಕ್ಷಿಸುವ ಪ್ರಶ್ನೆ ಇಲ್ಲ. ಈಗಾಗಲೇ  ತನಿಖೆಗೆ ತಂಡಗಳನ್ನು ರಚಿಸಲಾಗಿದೆ. ಅಮಾಯಕರ ಜೀವ ರಕ್ಷಣೆ ನಮ್ಮ‌ ಕರ್ತವ್ಯ ಎಂದರು.

ಬಿಜೆಪಿ ಕಾರ್ಯಕರ್ತರ ಆಕ್ರೋಶ ಈ ಸಂದರ್ಭದಲ್ಲಿ ಸಹಜ. ಈಗಾಗಲೇ ಸಂಬಂಧಿಸಿದವರನ್ನು ಬಂಧಿಸಲಾಗಿದೆ. ಸರ್ಕಾರ ಹಾಗೂ ಗೃಹ ಸಚಿವರು ಸಮರ್ಥವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಜನರ ಭಾವನೆಗಳಿಗೆ ಪೂರಕವಾಗಿ ಕಾರ್ಯ ನಿರ್ವಹಿಸುತ್ತೇವೆ. ಯು.ಪಿ. ಮಾದರಿ ಅಲ್ಲ, ಅದಕ್ಕಿಂತ ಐದು ಹೆಜ್ಜೆ ಮುಂದೆ ಹೋಗಿ ಕ್ರಮ ಕೈಗೊಳ್ಳುತ್ತೇವೆ. ಅದರಲ್ಲೂ ಯಾವುದೇ ಮುಲಾಜು ಇಲ್ಲ ಎಂದು ಸ್ಪಷ್ಟಪಡಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com