social_icon

ಮಳಲಿ ಮಸೀದಿಯಲ್ಲಿ ಹಿಂದು ದೇವಾಲಯ: ಮಂಗಳೂರು ನ್ಯಾಯಾಲಯದಿಂದ ವಿಚಾರಣೆ ಆರಂಭ

ಮಂಗಳೂರು ಸಮೀಪದ ಮಳಲಿಯ ಜಾಮಿಯಾ ಮಸೀದಿ ವಿವಾದಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆಯನ್ನು ಇಲ್ಲಿನ ಸ್ಥಳೀಯ ನ್ಯಾಯಾಲಯ ಮಂಗಳವಾರ ಆರಂಭಿಸಿದೆ.

Published: 01st June 2022 11:52 AM  |   Last Updated: 01st June 2022 12:27 PM   |  A+A-


Renovation work of a mosque in Malali.

ಮಸೀದಿ ಇದ್ದ ಸ್ಥಳದಲ್ಲಿ ನವೀಕರಣ ಕಾಮಗಾರಿ ನಡೆಯುತ್ತಿರುವುದು.

Posted By : Manjula VN
Source : The New Indian Express

ಮಂಗಳೂರು: ಮಂಗಳೂರು ಸಮೀಪದ ಮಳಲಿಯ ಜಾಮಿಯಾ ಮಸೀದಿ ವಿವಾದಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆಯನ್ನು ಇಲ್ಲಿನ ಸ್ಥಳೀಯ ನ್ಯಾಯಾಲಯ ಮಂಗಳವಾರ ಆರಂಭಿಸಿದೆ.

ಮಸೀದಿ ನವೀಕರಣ ಸಂದರ್ಭದಲ್ಲಿ ಶತಮಾನಗಳಷ್ಟು ಹಳೆಯದಾದ ದೇವಾಲಯವೊಂದು ಪತ್ತೆಯಾದ ಹಿನ್ನೆಲೆಯಲ್ಲಿ ವಿವಾದ ಸೃಷ್ಟಿಯಾಗಿದೆ. 

ಮಳಲಿ ಮಸೀದಿ ಅರ್ಜಿಯನ್ನು ನ್ಯಾಯಾಲಯ ವಿಚಾರಣೆಗೆ ಕೈಗೆತ್ತಿಕೊಂಡ ಕೂಡಲೇ ಮಸೀದಿ ಕಮಿಟಿ ವಾದಕ್ಕೆ ವಿಶ್ವ ಹಿಂದೂ ಪರಿಷತ್ ವಕೀಲರು ಆಕ್ಷೇಪ ವ್ಯಕ್ತಪಡಿಸಿದರು. 

ಇದನ್ನೂ ಓದಿ: ಸ್ಥಳದಲ್ಲಿ ದೇವರು ಇರುವುದು ನಿಜ, ದೇವಾಲಯ ನಾಶವಾಗಿದ್ದು ಮರುಸ್ಥಾಪಿಸಬೇಕಿದೆ: ತಾಂಬೂಲ ಪ್ರಶ್ನೆಗೆ ಕೇರಳದ ದೈವಜ್ಞರಿಂದ ಉತ್ತರ

ಮಳಲಿ ಮಸೀದಿಗೆ 700 ವರ್ಷಗಳ ಇತಿಹಾಸವಿದ್ದು, ನಮ್ಮಲ್ಲಿ ಸೂಕ್ತ ದಾಖಲೆ ಇದೆ. ಆದ್ದರಿಂದ ವಿಶ್ವ ಹಿಂದೂ ಪರಿಷತ್ ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಬೇಕೆಂದು ಮಸೀದಿ ಪರ ವಕೀಲ ಎಂ.ಪಿ.ಶೆಣೈ ವಾದ ಮಂಡಿಸಿದರು. 

ವಿಹಿಂಪ ಪರ ವಾದ ಮಂಡಿಸಿದ ವಕೀಲ ಚಿದಾನಂದ ಸರಳಾಯ, ಹಿಂದೂ ಧಾರ್ಮಿಕ ಕೇಂದ್ರ ಇದ್ದ ಬಗ್ಗೆ ಸಾಕಷ್ಟು ಸಾಕ್ಷ್ಯಗಳಿವೆ. ಕಾಶಿಯ ಜ್ಞಾನವಾಪಿ ಮಸೀದಿ ಮಾದರಿಯಲ್ಲಿಯೇ ಈ ವಿವಾದ ಇದ್ದು, ಅದೇ ರೀತಿಯಲ್ಲಿ ಈ ವಿವಾದ ಇತ್ಯರ್ಥಕ್ಕೆ ಕೋರ್ಟ್ ಮುಂದಾಗಬೇಕು. ಆ ಸ್ಥಳದಲ್ಲಿ ಉತ್ಖನನ ನಡೆಸಲು ಅನುಮತಿ ನೀಡಬೇಕು. ಈ ಬಗ್ಗೆ ಕೋರ್ಟ್ ಕಮಿಷನ್ ನೇಮಕ ಮಾಡಬೇಕೆಂದು ಆಗ್ರಹಿಸಿದರು. 

ಇದನ್ನೂ ಓದಿ: ಮಂಗಳೂರು: ಮಳಲಿಯಲ್ಲಿರುವುದು ದರ್ಗಾವೋ, ದೇಗುಲವೋ?; ದೈವ ಸಾನಿಧ್ಯ ಪತ್ತೆಗೆ ಇಂದು ತಾಂಬೂಲ ಪ್ರಶ್ನೆ, ಮಸೀದಿ ಸುತ್ತಮುತ್ತ ಸೆಕ್ಷನ್ 144 ಜಾರಿ

ನವೀಕರಣ ಸಮಯದಲ್ಲಿ ಅಲ್ಲಿ ದೇವಸ್ಥಾನದ ಮಾದರಿ ಸಿಕ್ಕಿದೆ. ಅದರ ಫೋಟೋಗಳನ್ನು ನೀಡಲಾಗಿದೆ. ಆ ಜಾಗದಲ್ಲಿ ಹಿಂದೂ ಧಾರ್ಮಿಕ ಕೇಂದ್ರ ಇದ್ದ ಬಗ್ಗೆ ಸಾಕಷ್ಟು ಐತಿಹಾಸಿಕ ಸಾಕ್ಷ್ಯ ಇದೆ. ಇದೊಂದು ಜ್ಞಾನವಾಪಿ ಮಾದರಿ ಪ್ರಕರಣ, ಸತ್ಯಾಸತ್ಯತೆ ತಿಳಿಯಬೇಕು. ಅದಕ್ಕೆ ಕೂಡಲೇ ಕೋರ್ಟ್ ಕಮಿಷನರ್ ನೇತೃತ್ವದಲ್ಲಿ ಸಮಿತಿ ನೇಮಿಸುವಂತೆ ಮನವಿ ಮಾಡಿದರು. 

ಇದನ್ನು ಆಕ್ಷೇಪಿಸಿದ ಮಸೀದಿ ಪರ ವಾದ ಮಂಡಿಸುತ್ತಿರುವ ವಕೀಲ ಶೆಣೈ, ಮಳಲಿ ಜಾಗ ಅದು ಸರ್ಕಾರಿ ಜಾಗ. ಅಲ್ಲಿ ಹಿಂದೆ ಇಲ್ಲಿ ಯಾವ ದೇವಸ್ಥಾನ ಇತ್ತು ಎಂದು ಸಾಕ್ಷ್ಯ ಒದಗಿಸಲಿ. ಮಳಲಿ ಮುಸ್ಲಿಮರು ಹಲವು ವರ್ಷಗಳಿಂದ ಅಲ್ಲಿ ಅವರ ಧಾರ್ಮಿಕ ಕ್ರಿಯೆ ನಡೆಸುತ್ತಿದ್ದಾರೆ. ಮಸೀದಿ ಆಡಳಿತದ ಬಳಿ ಎಲ್ಲಾ ರೀತಿಯ ಜಾಗದ ದಾಖಲೆಗಳೂ ಇವೆ. ಅದರ ಜೊತೆಗೆ ನವೀಕರಣದ ವೇಳೆ ಸ್ಥಳೀಯ ಪಂಚಾಯತ್ ಅನುಮತಿ ಪಡೆಯಲಾಗಿದೆ. ಹೀಗಾಗಿ ಕೂಡಲೇ ನವೀಕರಣ ಕಾಮಗಾರಿ ಮಾಡಲು ಅನುಮತಿ ಕೊಡಿ ಎಂದು ತಿಳಿಸಿದರು. ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶೆ ಸುಜಾತಾ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದರು.


Stay up to date on all the latest ರಾಜ್ಯ news
Poll
New parliament building

ಹೊಸ ಸಂಸತ್ ಕಟ್ಟಡದ ಉದ್ಘಾಟನೆಯನ್ನು ಬಹಿಷ್ಕರಿಸುವ ಹಲವಾರು ವಿರೋಧ ಪಕ್ಷಗಳ ನಿರ್ಧಾರವು ಸಮರ್ಥನೀಯವೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp