ಬೆಂಗಳೂರು: ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಸಿಎಂ ಬೊಮ್ಮಾಯಿ

ಹಲವು ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡುವೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಬುಧವಾರ ಕೊಂಚ ಬಿಡುವು ಮಾಡಿಕೊಂಡು ಬಸವನಗುಡಿಯ ಗಾಂಧಿ ‌ಬಜಾರ್​ನ ವಿದ್ಯಾರ್ಥಿಭವನ ಹೋಟೆಲ್​ಗೆ ತೆರಳಿ ಮಸಾಲೆ ದೋಸೆ...
ಸಿಎಂ ಬೊಮ್ಮಾಯಿ
ಸಿಎಂ ಬೊಮ್ಮಾಯಿ

ಬೆಂಗಳೂರು: ಹಲವು ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡುವೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಬುಧವಾರ ಕೊಂಚ ಬಿಡುವು ಮಾಡಿಕೊಂಡು ಬಸವನಗುಡಿಯ ಗಾಂಧಿ ‌ಬಜಾರ್​ನ ವಿದ್ಯಾರ್ಥಿಭವನ ಹೋಟೆಲ್​ಗೆ ತೆರಳಿ ಮಸಾಲೆ ದೋಸೆ ಸವಿದರು.

ಗಾಂಧಿ ಬಜಾರ್ ರಸ್ತೆಯಲ್ಲಿರುವ ವಿದ್ಯಾರ್ಥಿ ಭವನಕ್ಕೆ ತೆರಳಿದ ಬೊಮ್ಮಾಯಿ ಅವರು, ದೋಸೆ, ಉಪ್ಪಿಟ್ಟು ಕೇಸರಿ ಬಾತ್ ಸವಿದಿದ್ದಾರೆ.

ಸಿಎಂ ಬೊಮ್ಮಾಯಿಗೆ ಸ್ಥಳೀಯ ಶಾಸಕ ಉದಯ್ ಗರುಡಾಚಾರ್, ಸಂಸದ ತೇಜಸ್ವಿ ಸೂರ್ಯ ಹಾಗೂ ಹಿರಿಯ ಅಧಿಕಾರಿಗಳ ಸಾಥ್ ನೀಡಿದರು. ಈ ವೇಳೆ ಸಿಎಂ ಜೊತೆ ಆಪ್ ಮುಖಂಡ ಹಾಗೂ ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ಕೂಡ ಇದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com