ರಾಜ್ಯದಲ್ಲಿ ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 588 ಸೇರಿ 623 ಮಂದಿಗೆ ಪಾಸಿಟಿವ್; ಒಬ್ಬರು ಸಾವು
ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 623 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,60,831ಕ್ಕೆ ಏರಿಕೆಯಾಗಿದೆ.
Published: 19th June 2022 10:15 PM | Last Updated: 19th June 2022 10:15 PM | A+A A-

ಸಾಂದರ್ಭಿಕ ಚಿತ್ರ
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 623 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,60,831ಕ್ಕೆ ಏರಿಕೆಯಾಗಿದೆ.
ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಒಬ್ಬರು ಮೃತಪಟ್ಟಿದ್ದು. ಇದರೊಂದಿಗೆ ಸಾವಿನ ಸಂಖ್ಯೆ 40,071 ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನು ಓದಿ: ಕೋವಿಡ್-19: ಬೆಂಗಳೂರಿನಲ್ಲಿ 716 ಕೇಸ್ ಸೇರಿ ರಾಜ್ಯದಲ್ಲಿ ಇಂದು 750 ಸೋಂಕು ಪ್ರಕರಣಗಳು ಪತ್ತೆ
ಬೆಂಗಳೂರಿನಲ್ಲಿ ಇಂದು 588 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 17,96,042ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲಿ ಕೊರೋನಾದಿಂದ ಯಾರು ಮೃತಪಟ್ಟಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.
ರಾಜ್ಯದಲ್ಲಿ ಇಂದು 412 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,15,683ಕ್ಕೆ ಏರಿಕೆಯಾಗಿದೆ. ಇನ್ನು 5,035 ಸಕ್ರಿಯ ಪ್ರಕರಣಗಳಿವೆ.
ಇಂದಿನ 19/06/2022 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/d4kixDS5Fy @CMofKarnataka @BSBommai @mla_sudhakar @Comm_dhfwka @MDNHM_Kar @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/wxcIkoJ1Pa
— K'taka Health Dept (@DHFWKA) June 19, 2022