ಬೆಳಗಾವಿ: ತಾಲೂಕಿನ ಗೌಂಡವಾಡದಲ್ಲಿ ದೇವಸ್ಥಾನ ವಿಚಾರಕ್ಕೆ ಸಂಬಂಧಿಸಿದಂತೆ ಶನಿವಾರ ತಡರಾತ್ರಿ ಓರ್ವ ವ್ಯಕ್ತಿಯ ಕೊಲೆಯಾಗಿದ್ದು, ಗ್ರಾಮದಲ್ಲಿ ಘರ್ಷಣೆ ಸಂಭವಿಸಿದೆ. ಈ ವೇಳೆ ನಡೆದ ಹಿಂಸಾಚಾರದಲ್ಲಿ ಹಲವು ವಾಹನಗಳಿಗೆ ಬೆಂಕಿ ಹಚ್ಚಲಾಗಿದ್ದು, ಕಲ್ಲು ತೂರಾಟ ನಡೆದಿದೆ ಎಂದು ತಿಳಿದುಬಂದಿದೆ.
ಸತೀಶ್ ಪಾಟೀಲ ಹತ್ಯೆಯಾದ ವ್ಯಕ್ತಿಯಾಗಿದ್ದಾರೆ. ದೇವಸ್ಥಾನಕ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಉಂಟಾದ ಗಲಾಟೆಯಲ್ಲಿ ಇವರನ್ನು ಹತ್ಯೆ ಮಾಡಲಾಗಿದ್ದು, ಹತ್ಯೆ ಬಳಿಕ ಘರ್ಷಣೆ ಭುಗಿಲೆದ್ದಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 15 ಮಂದಿಯನ್ನು ವಶಕ್ಕೆ ಪಡೆದಿದ್ದು, ಶಾಂತಿ ಸುವ್ಯವಸ್ಥೆ ಕಾಪಾಡಲು 4 ಕೆಎಸ್ಆರ್'ಪಿ ತುಕಡಿಗಳನ್ನು ನಿಯೋಜನೆ ಮಾಡಲಾಗಿದೆ.
Advertisement