ಮೈಸೂರು: ಟ್ಯಾಂಕರ್ ಗೆ ಕಾರು ಡಿಕ್ಕಿಯಾದ ಪರಿಣಾಮ ಇಬ್ಬರು ಯುವತಿಯರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಜಿಲ್ಲೆಯ ಹುಣಸೂರು ತಾಲೂಕಿನ ರಂಗಯ್ಯನಕೊಪ್ಪಲು ಗೇಟ್ ಬಳಿ ಈ ದುರ್ಘಟನೆ ಸಂಭವಿಸಿದೆ. ಟೈರ್ ಪಂಚರ್ ಆಗಿ ನಿಯಂತ್ರಣ ತಪ್ಪಿದ ಕಾರು ಟ್ಯಾಂಕರ್ ಗೆ ಡಿಕ್ಕಿಯಾಗಿ ಇಬ್ಬರು ಯುವತಿಯರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ.
ಮೃತರನ್ನು ಮೈಸೂರು ಹೊರವಲಯದ ಆಲನಹಳ್ಳಿಯ ಸಾಫ್ಟ್ ವೇರ್ ಎಂಜಿನಿಯರ್ ಜೀವಿತಾ (24) ಹಾಗೂ ಆಕೆಯ ಗೆಳತಿ ಪ್ರತೀಕ್ಷಾ 24) ಎಂದು ಗುರುತಿಸಲಾಗಿದೆ. ಮೃತರು ಮೈಸೂರು ಕಡೆಯಿಂದ ಹುಣಸೂರಿನತ್ತ ಶನಿವಾರ ಸಂಜೆ ತೆರಳುತ್ತಿದ್ದಾಗ ಅಪಘಾತವಾಗಿದೆ. ಬಿಳಿಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement