ಮೈಸೂರಿನಲ್ಲಿ ಪ್ರಧಾನಿ ಮೋದಿಗಾಗಿ ರೆಡಿಯಾಗಿದೆ ಸಸ್ಯಾಹಾರಿ ಫುಡ್ ಮೆನು!

ಎರಡು ದಿನಗಳ ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಬೆಂಗಳೂರಿನಲ್ಲಿ ಹಲವು ಕಾರ್ಯಕ್ರಮಗಳನ್ನು ಮುಗಿಸಿ ಮೈಸೂರಿಗೆ ತೆರಳಿದ್ದು, ಅಲ್ಲೂ ಹಲವು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ.
ಮೈಸೂರಿನಲ್ಲಿ ಪ್ರಧಾನಿ ಮೋದಿಗಾಗಿ ರೆಡಿಯಾಗಿದೆ ಸಸ್ಯಾಹಾರಿ ಫುಡ್ ಮೆನು!

ಮೈಸೂರು: ಎರಡು ದಿನಗಳ ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಬೆಂಗಳೂರಿನಲ್ಲಿ ಹಲವು ಕಾರ್ಯಕ್ರಮಗಳನ್ನು ಮುಗಿಸಿ ಮೈಸೂರಿಗೆ ತೆರಳಿದ್ದು, ಅಲ್ಲೂ ಹಲವು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ.

ಪ್ರಧಾನಿ ಮೋದಿ ಅವರು ಇಂದು ರಾತ್ರಿ ಮೈಸೂರಿನಲ್ಲಿ ತಂಗಲಿದ್ದು, ಅವರಿಗೆ ಊಟ ಉಪಚಾರದ ಮೆನು ರೆಡಿಯಾಗಿದೆ. ನರೇಂದ್ರ ಮೋದಿಗಾಗಿ ಶುದ್ದ ಸಸ್ಯಾಹಾರಿ ಊಟದ ಮೆನು ತಯಾರಿಸಲಾಗಿದೆ.

ರಾತ್ರಿಯ ಊಟಕ್ಕೆ ಕಿಚಡಿ/ ಗುಜರಾತಿ ಕರಿ, ರೋಟಿ, ದಾಲ್, ರೈಸ್, ಎರಡು ರೀತಿಯ ಸಬ್ಜಿ, ಮೊಸರು, ಮಿಕ್ಸ್ ಫ್ರೂಟ್ ಒಳಗೊಂಡ ಮೆನು ಸಿದ್ಧಪಡಿಸಲಾಗಿದೆ.

ನಾಳೆ ಬೆಳಗಿನ ಉಪಾಹಾರಕ್ಕೆ ಅವಲಕ್ಕಿ, ಉಪ್ಪಿಟ್ಟು, ಇಡ್ಲಿ-ಸಾಂಬಾರ್ , ಬ್ರೆಡ್ ಬಟರ್, ಮಿಕ್ಸ್ ಫ್ರೂಟ್, ಮಧ್ಯಾಹ್ನದ ಊಟಕ್ಕೆ ವೆಜಿಟೇಬಲ್ ಸೂಪ್, ಮಸಾಲ ಮಜ್ಜಿಗೆ ರೋಟಿ, ಜೀರಾ ರೈಸ್, ದಾಲ್ ಹಾಗೂ ಮಿಕ್ಸ್ ಫ್ರೂಟ್ ಇರಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com