47ನೇ ಜಿಎಸ್ ಟಿ ಕೌನ್ಸಿಲ್ ಸಭೆ: ಇಂದು ಸಂಜೆ ಚಂಡೀಗಢಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಯಾಣ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಸೋಮವಾರದಿಂದ ಮೂರು ದಿನ ಚಂಡೀಗಢ ಪ್ರವಾಸ ಕೈಗೊಳ್ಳುತ್ತಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಸೋಮವಾರದಿಂದ ಮೂರು ದಿನ ಚಂಡೀಗಢ ಪ್ರವಾಸ ಕೈಗೊಳ್ಳುತ್ತಿದ್ದಾರೆ.

47ನೇ ಜಿಎಸ್ ಟಿ ಕೌನ್ಸಿಲ್ ಸಭೆಯಲ್ಲಿ ಭಾಗವಹಿಸಲು ಅವರು ಚಂಡೀಗಢ ಪ್ರವಾಸ ಕೈಗೊಳ್ಳುತ್ತಿದ್ದು, ಇಂದು ಸಾಯಂಕಾಲ 7 ಗಂಟೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಚಂಡೀಗಢ ಪ್ರವಾಸ ಬೆಳೆಸಲಿದ್ದಾರೆ.

ನಾಳೆ ಮತ್ತು ನಾಡಿದ್ದು ಅಂದರೆ ಜೂನ್ 28 ಮತ್ತು 29ರಂದು ಚಂಡೀಗಢದಲ್ಲಿ ನಡೆಯಲಿರುವ ಜಿಎಸ್ ಟಿ ಕೌನ್ಸಿಲ್ ಸಭೆಯಲ್ಲಿ ಮುಖ್ಯಮಂತ್ರಿಗಳು ಭಾಗಿಯಾಗುತ್ತಾರೆ. ಜೂನ್ 30ರಂದು ಬೆಳಗ್ಗೆ ಚಂಡೀಗಢದಿಂದ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com