ಬೆಂಗಳೂರು: ರಾಜ್ಯ ಬಿಜೆಪಿಯ ಮಾಧ್ಯಮ ವಕ್ತಾರ ಚಂದ್ರಶೇಖರ್ ಅವರು ಬೆಂಗಳೂರಿನಲ್ಲಿ ಇಂದು ಮಧ್ಯಾಹ್ನ ನಿಧನರಾಗಿದ್ದಾರೆ.
ಜಾಗತಿಕ, ರಾಷ್ಟ್ರೀಯ ವಿಷಯಗಳ ಕುರಿತು ಪಾಂಡಿತ್ಯ ಹೊಂದಿದ್ದ ಚಂದ್ರಶೇಖರ್ ಅವರು ಹೃದಯಾಘಾತದಿಂದ ಹಠಾತ್ ನಿಧನವಾಗಿರುವುದಕ್ಕೆ ಬಿಜೆಪಿ ನಾಯಕರು ಸಂತಾಪ ವ್ಯಕ್ತಪಡಿಸಿದ್ದಾರೆ.
ಕೆಆರ್ ಮಾರ್ಕೆಟ್ ಬಳಿ ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದಾಗ ಚಂದ್ರಶೇಖರ್ ಅವರಿಗೆ ಹೃದಯಾಘಾತವಾಗಿತ್ತು. ಸದ್ಯ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಪಾರ್ಥಿವ ಶರೀರವನ್ನು ಇಡಲಾಗಿದೆ.
Advertisement