ಬೆಂಗಳೂರು: ಕೊಲೆ ಮಾಡಿ ಮಹಿಳೆ ಶವ ಸಾಗಿಸುತ್ತಿದ್ದವರ ರಹಸ್ಯ ಬಯಲು ಮಾಡಿತು ರಸ್ತೆಯ ಹಂಪ್!
ಹಣದ ವಿಷಯಕ್ಕೆ ಮಹಿಳೆಯನ್ನು ಕೊಲೆ ಮಾಡಿ, ಮೃತ ದೇಹವನ್ನು ಬೈಕ್ನಲ್ಲಿ ರಾಮನಗರದ ಕಡೆಗೆ ಸಾಗಿಸುತ್ತಿದ್ದ ಕಿರಾತಕರು ಮಂಗಳವಾರ ರಾತ್ರಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ.
Published: 12th May 2022 07:59 AM | Last Updated: 12th May 2022 07:59 AM | A+A A-

ಸಾಂದರ್ಭಿಕ ಚಿತ್ರ
ಬೆಂಗಳೂರು: ಹಣದ ವಿಷಯಕ್ಕೆ ಮಹಿಳೆಯನ್ನು ಕೊಲೆ ಮಾಡಿ, ಮೃತ ದೇಹವನ್ನು ಬೈಕ್ನಲ್ಲಿ ರಾಮನಗರದ ಕಡೆಗೆ ಸಾಗಿಸುತ್ತಿದ್ದ ಕಿರಾತಕರು ಮಂಗಳವಾರ ರಾತ್ರಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ.
ಘಟನೆಯಲ್ಲಿ ನಾಗರಾಜು, ವಿನೋದ್ ಎಂಬುವರು ಗಾಯಗೊಂಡಿದ್ದು ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ. ಚನ್ನಪಟ್ಟಣದ ಸ್ನೇಹಿತರ ಮನೆಯಲ್ಲಿ ತಲೆ ಮರೆಸಿಕೊಂಡಿದ್ದ ದುರ್ಗಾ ಆಕೆಯ ಪತಿ ರಘು ಎಂಬುವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಅಭಿ ಎಂಬಾತ ನಿಗಾಗಿ ಶೋಧ ಕಾರ್ಯ ನಡೆಸಿದ್ದಾರೆ.
ಸೌಮ್ಯ ಬೆಂಗಳೂರಿನ ರಾಜರಾಜೇಶ್ವರಿ ನಗರದ ಮುತ್ತರಾಯನಗರದವಳು. ಈ ಸೌಮ್ಯ ತನ್ನ ಸ್ನೇಹಿತೆ ದುರ್ಗಾ ಮನೆಯಲ್ಲಿ ವಾಸ ಮಾಡುತ್ತಿದ್ದಳು. ಇಬ್ಬರು ಕಲ್ಯಾಣ ಮಂಟಪದಲ್ಲಿ ಕೆಲಸ ಮಾಡುತ್ತಿದ್ದರು. ಈ ಸೌಮ್ಯಾ ದುರ್ಗಾ ಮನೆಯಲ್ಲಿ ಹಣ ಹಾಗೂ ಒಡವೆಗಳನ್ನ ಕಳ್ಳತನ
ಮಾಡಿ ಪರಾರಿಯಾಗಿದ್ದಳು. ಆಕೆಯನ್ನು ಹೇಗೋ ಹುಡುಕಿ ವಾಪಸ್ ಕರೆದುಕೊಂಡು ಬಂದ ದುರ್ಗಾ ಆಕೆಯನ್ನು ರೂಮಿನಲ್ಲಿ ಕೂಡಿ ಹಾಕಿ ದೊಣ್ಣೆಯಿಂದ ಥಳಿಸಿದ್ದಳು.ಸಂಜೆ ಕೊಠಡಿ ಬಾಗಿಲು ತಗೆದು ನೋಡಿದಾಗ ಸೌಮ್ಯ ಮೃತಪಟ್ಟಿದ್ದಳು.
ತಕ್ಷಣ ದುರ್ಗಾ ತನ್ನ ಪತಿ ರಘು ಹಾಗೂ ಸಹೋದರ ನಾಗರಾಜ್ ಗೆ ಮಾಹಿತಿ ನೀಡಿದಳು. ರಘು ತನ್ನ ಸ್ನೇಹಿತರಾದ ಅಭಿ, ವಿನೋದ್ ಅವರನ್ನ ಮನೆಗೆ ಕರೆಸಿ ಮೃತ ದೇಹವನ್ನ ಶ್ರೀರಂಗಪಟ್ಟಣದ ಕಾವೇರಿ ನದಿಗೆ ಎಸೆಯುವ ಪ್ಲಾನ್ ಮಾಡಿದರು. ಅದರಂತೆ ವಿನೋದ್ ಶ್ವೇತಾ ಶವವನ್ನ ಬೈಕ್ ನಲ್ಲಿ ಕೂರಿಸಿಕೊಂಡು ಹಿಂದೆ ನಾಗರಾಜ್ ಹಿಡಿದುಕೊಂಡು ಹೊರಟಿದ್ದರು. ಇತ್ತ ದುರ್ಗಾ ಹಾಗೂ ರಘು ಒಂದು ಬೈಕ್ ನಲ್ಲಿ ಅಭಿ ಒಂದು ಬೈಕ್ ನಲ್ಲಿ ಹೊರಟಿದ್ದರು. ಆದರೆ ಶವ ಇದ್ದ ಬೈಕ್ ಅಪಘಾತವಾಗಿ ಕೊಲೆ ರಹಸ್ಯ ಬಯಲಾಗಿದೆ.
ಈ ವೇಳೆ ಮೃತದೇಹದ ಕುರಿತು ಪ್ರಶ್ನಿಸಿದಾಗ ಬೈಕ್ನಿಂದ ಬಿದ್ದು ಸಾವನ್ನಪ್ಪಿರುವುದಾಗಿ ಕಥೆ ಕಟ್ಟಿದ್ದರು. ಮೃತದೇಹವನ್ನು ಆಸ್ಪತ್ರೆಗೆ ರವಾನಿಸುವ ವೇಳೆ ಗಲಾಟೆ ನಡೆದಿರುವ ಕುರಿತು ಪೊಲೀಸರ ಮುಂದೆ ನಿಜ ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ರಘು, ಅಭಿ ಎಂಬಾತನ ಮೂಲಕ ವಿನೋದ್, ನಾಗರಾಜು ಅವರನ್ನು ಕರೆಸಿ, ಶವವನ್ನು ಶ್ರೀರಂಗಪಟ್ಟಣ ಬಳಿಯ ನದಿಗೆ ಅಥವಾ ಸೇತುವೆ ಕೆಳಗೆ ಎಸೆಯುವ ಪ್ಲ್ಯಾನ್ ಮಾಡಿಕೊಂಡಿದ್ದರು. ರಘು, ದುರ್ಗಾ, ಅಭಿ ಎರಡು ಬೈಕ್ನಲ್ಲಿ, ವಿನೋದ್, ನಾಗರಾಜು ಮೃತ ದೇಹವನ್ನು
ಮಧ್ಯದಲ್ಲಿಇರಿಸಿಕೊಂಡು, ಬೆಂಗಳೂರಿನಿಂದ ಹೊರಟಿದ್ದಾರೆ.
ರಾಮನಗರ ಜಿಲ್ಲಾಧಿಕಾರಿ ಕಚೇರಿ ಬಳಿ ಅಪಘಾತ ಸಂಭವಿಸಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರಿಗೆ ಮಾಹಿತಿ ಲಭ್ಯವಾಗಿದೆ ಎಂದು ಹೇಳಿದರು. ಕೊಲೆಗೀಡಾದ ಶ್ವೇತಾಳ ಮರಣೋತ್ತರ ಪರೀಕ್ಷೆ ನಡೆಸಿದ್ದು, ರಾಮನಗರ ಬಳಿ ಅಪಘಾತ ಸಂಭವಿಸುವ ವೇಳೆಗೆ ಮಹಿಳೆಯ ಕೊಲೆಯಾಗಿ 12
ತಾಸಾಗಿತ್ತು ಎಂದು ಹೇಳಿದರು. ಅಪಘಾತ ಸಂಭವಿಸಿದ್ದಾಗ ಜತೆಯಲ್ಲಿ ದುರ್ಗಾ ಹಾಗೂ ಆಕೆ ಪತಿ ರಘು, ಚನ್ನಪಟ್ಟಣದಲ್ಲಿ ಸ್ನೇಹಿತರ ಮನೆಯಲ್ಲಿ ತಲೆ ಮರೆಸಿಕೊಂಡಿದ್ದರು. ಪೊಲೀಸರು ಪತ್ತೆ ಹೆಚ್ಚಿ ಕರೆ ತರೆತಂದಿದ್ದಾರೆ. ಮತ್ತೊಬ್ಬ ಆರೋಪಿಗಾಗಿ ಹುಡುಕಾಟ ನಡೆದಿದೆ ಎಂದರು.