social_icon

ಹಾಸನ: ಭಾರಿ ಮಳೆಗೆ ಓರ್ವ ವ್ಯಕ್ತಿ ಸಾವು, ಜನಜೀವನ ಅಸ್ತವ್ಯಸ್ಥ

24 ಗಂಟೆಗಳ ಕಾಲ ನಿರಂತರವಾಗಿ ಸುರಿದ ಭಾರಿ ಮಳೆಗೆ ಹಾಸನ ಜಿಲ್ಲೆಯಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಮಳೆ ಸಂಬಂಧಿತ ದುರ್ಘಟನೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. 

Published: 18th May 2022 07:39 PM  |   Last Updated: 18th May 2022 07:39 PM   |  A+A-


heavy rainfall

ಭಾರಿ ಮಳೆ

Posted By : Srinivasamurthy VN
Source : The New Indian Express

ಹಾಸನ: 24 ಗಂಟೆಗಳ ಕಾಲ ನಿರಂತರವಾಗಿ ಸುರಿದ ಭಾರಿ ಮಳೆಗೆ ಹಾಸನ ಜಿಲ್ಲೆಯಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಮಳೆ ಸಂಬಂಧಿತ ದುರ್ಘಟನೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. 

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಹೊಸೂರು ಗ್ರಾಮದಲ್ಲಿ ಶಾಲಾ ಕಟ್ಟಡವೊಂದು ಕುಸಿದು ಬಿದ್ದು 28 ವರ್ಷದ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಕಳೆದರೆಡು ದಿನಗಳಿಂದ ಸುರಿದ ಭಾರೀ ಗಾಳಿ ಮಳೆಗೆ ಸರ್ಕಾರಿ ಶಾಲೆ ಗೋಡೆ ಕುಸಿದು ಯುವಕ ಸಾವನ್ನಪ್ಪಿರುವ ಘಟನೆ ಹೊಳೆನರಸೀಪುರ ತಾಲೂಕಿನ ರಂಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಚನ್ನರಾಯಪಟ್ಟಣ ತಾಲ್ಲೂಕಿನ ಎಂ.ಕೆ.ಹೊಸೂರು ಗ್ರಾಮದ ಶಿವಕುಮಾರ್ (28) ಮೃತ. ಶಿವಕುಮಾರ್ ಶಾಲೆ ಬಳಿ ನಡೆದುಕೊಂಡು ಹೋಗುತ್ತಿದ್ದಾಗ ಏಕಾಏಕಿ ಶಿಥಿಲವಾಗಿದ್ದ ಕಟ್ಟಡ ಕುಸಿದು ಬಿದ್ದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ತಹಸೀಲ್ದಾರ್ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಕೃತಿ ವಿಕೋಪ ನಿಧಿಯಡಿ ಸಂತ್ರಸ್ತ ಕುಟುಂಬಕ್ಕೆ ಪರಿಹಾರ ನೀಡುವುದಾಗಿ ತಾಲೂಕು ಪ್ರಾಧಿಕಾರ ಭರವಸೆ ನೀಡಿದೆ. ಹಳ್ಳಿ ಮೈಸೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬೆಂಗಳೂರು ಮಳೆಗೆ ಮೃತಪಟ್ಟ ಇಬ್ಬರು ಕಾರ್ಮಿಕರ ಕುಟುಂಬಕ್ಕೆ ಸರ್ಕಾರದಿಂದ ತಲಾ 5 ಲಕ್ಷ ರೂ. ಪರಿಹಾರ ಪ್ರಕಟ

ಸತತ ಮಳೆಯಿಂದಾಗಿ ಸಕಲೇಶಪುರ, ಹೊಳೆನರಸೀಪುರ ಮತ್ತು ಆಲೂರು ತಾಲೂಕಿನ ಹಲವಾರು ಕೆರೆಗಳು ತುಂಬಿ ತುಳುಕುತ್ತಿವೆ. ಹಾಸನ ನಗರ ಮತ್ತು ಸಕಲೇಶಪುರ ಪಟ್ಟಣದ ತಗ್ಗು ಪ್ರದೇಶಗಳ ನಿವಾಸಿಗಳು ಚರಂಡಿಯಲ್ಲಿ ನೀರು ಹರಿದು ಮನೆಗಳಿಗೆ ನುಗ್ಗಿದ್ದರಿಂದ ಜನರು ಪರದಾಡಿದರು. ಸಕಲೇಶಪುರ, ಆಲೂರು, ಹೊಳೆನರಸೀಪುರ, ಅರಕಲಗೂಡು ತಾಲೂಕಿನಲ್ಲಿ ನೂರಾರು ಎಕರೆ ಪ್ರದೇಶದಲ್ಲಿ ಬೆಳೆದು ನಿಂತಿದ್ದ ತಂಬಾಕು, ಭತ್ತ, ಶುಂಠಿ ಬೆಳೆಗಳು ಮುಳುಗಡೆಯಾಗಿವೆ ಎಂದು ಮೂಲಗಳು ತಿಳಿಸಿವೆ. ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹೇಮಾವತಿ ಜಲಾಶಯದಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. 

ಮಳೆ ಪರಿಣಾಮ; ಶಾಲಾಗಳಿಗೆ ರಜೆ ಘೋಷಣೆ
ಇನ್ನು ಸತತ ಮಳೆಯಿಂದಾಗಿ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು. ರಾತ್ರಿ ಮಾತ್ರವಲ್ಲದೆ ಬೆಳಗ್ಗೆಯಿಂದಲೂ ಎಡೆಬಿಡದೆ ಮಳೆ ಸುರಿದಿದ್ದರಿಂದ 1 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಜಿಲ್ಲಾಡಳಿತ ಇಂದು ರಜೆ ಘೋಷಿಸಿತ್ತು. ಜಿಲ್ಲಾಧಿಕಾರಿ ಆರ್. ಗಿರೀಶ್ ಅವರ ಸೂಚನೆಯಂತೆ ಡಿಡಿಪಿಐ ಪ್ರಕಾಶ್ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಮಕ್ಕಳು ಹೊರ ಬರಲು ಸಾಧ್ಯವಾಗದ ಕಾರಣದಿಂದ ಈ ನಿರ್ಧಾರ ಮಾಡಲಾಗಿದ್ದು, ನಾಳಿನ ಪರಿಸ್ಥಿತಿ ನೋಡಿಕೊಂಡು ನಂತರ ತೀರ್ಮಾನಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಇಂದು ಬೆಳಗ್ಗೆಯಿಂದಲೇ ನಿರಂತರ ಮಳೆ ಸುರಿಯಿತು. ಇದರಿಂದ ಜನರು ಮನೆಯಿಂದ ಹೊರ ಬಂದಿರಲಿಲ್ಲ. ಹೀಗಾಗಿ ಮಳೆ ಹೊರತಾಗಿ ಒಂದು ರೀತಿಯ ಬಂದ್ ವಾತಾವರಣ ನಿರ್ಮಾಣವಾಗಿತ್ತು. ಬೆಳಗ್ಗೆ ೧೦ ಗಂಟೆಯಾದರೂ ಮೋಡ ಕವಿದ ವಾತಾವರಣ ತಿಳಿಯಾಗಿರಲಿಲ್ಲ.

ಇದನ್ನೂ ಓದಿ: ರಾಜಕಾಲುವೆ ಒತ್ತುವರಿಯಿಂದ ಮಳೆ ಅನಾಹುತ, ಮನೆಗೆ ನೀರು ನುಗ್ಗಿ ಹಾನಿಯಾದವರಿಗೆ 25 ಸಾವಿರ ರೂ. ಪರಿಹಾರ: ಸಿಎಂ ಬೊಮ್ಮಾಯಿ

ದಾಖಲೆಯ ಮಳೆ
ಹೊಳೆನರಸೀಪುರ ತಾಲೂಕಿನಲ್ಲಿ 24 ಗಂಟೆಗಳಲ್ಲಿ 170 ಮಿ.ಮೀ ಮಳೆಯಾಗಿದ್ದು, ಹಳ್ಳಿಮೈಸೂರು 155 ಮಿ.ಮೀ ಮತ್ತು ಹೊಳೆನರಸೀಪುರ ತಾಲೂಕಿನ ಹಳೇಕೋಟೆಯಲ್ಲಿ 146 ಮಿ.ಮೀ ಮಳೆಯಾಗಿದೆ. 

ಮೀನು ಹಿಡಿಯಲು ದೌಡು: 
ಕೋಡಿ ಬಿದ್ದ ಕೆರೆ ನೀರಲ್ಲಿ ಮೀನು ಹಿಡಿಯಲು ಗ್ರಾಮಸ್ಥರು ಮುಗಿಬಿದ್ದ ಘಟನೆಯೂ ನಡೆಯಿತು. ಹಿರೀಸಾವೆ ದೊಡ್ಡ ಕೆರೆಯಲ್ಲಿ ಜನರು ಕೋಡಿ ನೀರಲ್ಲಿ ತೇಲಿಬರೋ ಮೀನಿಗಾಗಿ ಬಲೆ ಹಿಡಿದು ಕಾಯುತ್ತಾ ಕುಳಿತಿದ್ದ ದೃಶ್ಯ ಸಾಮಾನ್ಯವಾಗಿತ್ತು. ದೊಡ್ಡಕೆರೆ ಎರಡೂವರೆ ದಶಕದ ಬಳಿಕ ತುಂಬಿದ್ದು,  ಕೆಲವರು ತುಂಬಿದ ಕೆರೆಯಲ್ಲಿ ನೀರಿನಾಟದಲ್ಲಿ ಮಗ್ನರಾಗಿದ್ದರು. ಆನೆಕೆರೆ, ಕೌಶಿಕ ಮತ್ತು ಹಿರೇಸಾವೆ ಗ್ರಾಮಸ್ಥರು ಮೀನುಗಾರಿಕೆಗಾಗಿ ವಿವಿಧ ಟ್ಯಾಂಕ್‌ಗಳಿಗೆ ತೆರಳಿದರು. ಚನ್ನರಾಯಪಟ್ಟಣ ತಾಲೂಕಿನ ಹಿರೇಸಾವೆ ಗ್ರಾಮದಲ್ಲಿ ಮೀನುಗಾರಿಕಾ ಗುತ್ತಿಗೆದಾರ ಚಂದ್ರು ಎಂಬುವರಿಗೆ ಟ್ಯಾಂಕ್ ಒಡೆದು 15 ಲಕ್ಷ ರೂ.ಗಳಷ್ಟು ನಷ್ಟವಾಗಿದೆ. 

ಇದನ್ನೂ ಓದಿ: ಬೆಂಗಳೂರಿನಲ್ಲಿ ದಾಖಲೆಯ ಮಳೆಯ ಅವಾಂತರ: ಇಬ್ಬರು ಕಾರ್ಮಿಕರು ಸಾವು, ಪೈಪ್ ಲೈನ್ ನಲ್ಲಿ ಮೃತದೇಹ

ಸಂಚಾರ ಅಸ್ತವ್ಯಸ್ಥ
ಬೆಂಗಳೂರು - ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ದೊಡ್ಡಮಂಡಿಗಾನಹಳ್ಳಿ ಬಳಿ, ತಣ್ಣೀರುಹಳ್ಳ, ಹಾಸನ ಸಮೀಪದ ಡೈರಿ ವೃತ್ತದಲ್ಲಿ ಚರಂಡಿಯಿಂದ ಭಾರಿ ನೀರು ಹರಿದು ಬಂದಿದ್ದರಿಂದ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ಕಲ್ಲಾರೆಹಳ್ಳಿ ಮತ್ತು ಸಕಲೇಶಪುರ ನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಹಾಳಾಗಿದೆ. ಚುನಾಯಿತ ಪ್ರತಿನಿಧಿಗಳ ಲೋಪದೋಷಕ್ಕೆ ಗ್ರಾಮಸ್ಥರು ಹಿಡಿಶಾಪ ಹಾಕುತ್ತಿದ್ದಾರೆ. ಜಿಲ್ಲಾಧಿಕಾರಿ ಆರ್.ಗಿರೀಶ್ ಅವರು ಕಂದಾಯ, ಪಿಡಬ್ಲ್ಯುಡಿ ಮತ್ತು ಸೆಸ್ಕಾಂ ವಿಶೇಷ ಸಭೆ ನಡೆಸಿ, ಹಾನಿಗೊಳಗಾದ ಪ್ರದೇಶಗಳಿಗೆ ಧಾವಿಸಿ, ಘಟನೆಯ ನಂತರ ರಕ್ಷಣಾ ಕಾರ್ಯಾಚರಣೆಯನ್ನು ತಕ್ಷಣವೇ ಕೈಗೊಳ್ಳುವಂತೆ ಸೂಚಿಸಿದರು. 
 
ಗೊರೂರು ಸಮೀಪದ ಹೇಮಾವತಿ ಜಲಾಶಯದಲ್ಲಿ ಬುಧವಾರ ಗರಿಷ್ಠ ಮಟ್ಟವಾದ 2922 ಟಿಎಂಸಿ ಅಡಿ ನೀರಿನ ಮಟ್ಟ 2901.61 ರಷ್ಟಿದೆ. ಬುಧವಾರ ಒಳಹರಿವು 1266 ಕ್ಯೂಸೆಕ್ ಇತ್ತು.
 


Stay up to date on all the latest ರಾಜ್ಯ news
Poll
New parliament building

ಹೊಸ ಸಂಸತ್ ಕಟ್ಟಡದ ಉದ್ಘಾಟನೆಯನ್ನು ಬಹಿಷ್ಕರಿಸುವ ಹಲವಾರು ವಿರೋಧ ಪಕ್ಷಗಳ ನಿರ್ಧಾರವು ಸಮರ್ಥನೀಯವೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp