ಚಾಮರಾಜನಗರ: ಚಕ್ರ ಮುರಿದು ಉರುಳಿ ಬಿದ್ದ ರಥ, ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾದ ಭಕ್ತರು! ವಿಡಿಯೋ

ಚಕ್ರ ಮುರಿದ ಪರಿಣಾಮ ರಥ ಉರುಳಿ ಉರುಳಿಬಿದ್ದ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ.
ರಥದ ಚಿತ್ರ
ರಥದ ಚಿತ್ರ

ಚಾಮರಾಜನಗರ: ದೇವಾಲಯವೊಂದರ ರಥದ  ಚಕ್ರ ಮುರಿದ ಪರಿಣಾಮ ರಥ ಉರುಳಿ ಉರುಳಿಬಿದ್ದ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ.

ಚಾಮರಾಜನಗರ ತಾಲೂಕಿನ ಚೆನ್ನಪ್ಪನಪುರ ಗ್ರಾಮದ ವೀರಭದ್ರೇಶ್ವರ ಸ್ವಾಮಿ ರಥೋತ್ಸದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಮಧ್ಯಾಹ್ನ 12 ಗಂಟೆ ಸುಮಾರಿನಲ್ಲಿ ದೇವಾಲಯದ ಹೊರ ಆವರಣದಲ್ಲಿ ರಥೋತ್ಸವ ನಡೆಯುತ್ತಿದ್ದಾಗ ರಥದ ಬಲಗಡೆಯ ಚಕ್ರ ಮುರಿದು, ರಥ ಕೆಳಗೆ ಉರುಳಿ ಬಿದ್ದಿದೆ.

ತಕ್ಷಣ ಭಕ್ತರು ಚೆಲ್ಲಾಪಿಲ್ಲಿಯಾಗಿ ಓಡಿದ್ದಾರೆ. ಅದೃಷ್ಟವಶಾತ್ ಘಟನೆಯಲ್ಲಿ ಯಾರಿಗೂ ಯಾವುದೇ ಅಪಾಯವಾಗಿಲ್ಲ 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com