ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ: ಸಾರ್ವಜನಿಕರಿಂದ ಚಾಲಕನಿಗೆ ಧರ್ಮದೇಟು, ಪೊಲೀಸರ ವಶಕ್ಕೆ

ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದೆ. ಬೆಂಗಳೂರಿನ ಸುಮ್ಮನಹಳ್ಳಿ ಬ್ರಿಡ್ಜ್ ಬಳಿ ಬಿಎಂಟಿಸಿ ಬಸ್ಸು ಡಿಕ್ಕಿಯಾಗಿ ಬೈಕ್ ಸವಾರ ಪ್ರಮೋದ್ ಎನ್ನುವವರ ತಲೆಗೆ ತೀವ್ರ ಪೆಟ್ಟಾಗಿ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದೆ. ಬೆಂಗಳೂರಿನ ಸುಮ್ಮನಹಳ್ಳಿ ಬ್ರಿಡ್ಜ್ ಬಳಿ ಬಿಎಂಟಿಸಿ ಬಸ್ಸು ಡಿಕ್ಕಿಯಾಗಿ ಬೈಕ್ ಸವಾರ ಪ್ರಮೋದ್ ಎನ್ನುವವರ ತಲೆಗೆ ತೀವ್ರ ಪೆಟ್ಟಾಗಿ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. 

ಸ್ಥಳದಲ್ಲಿ ನೆರೆದಿದ್ದ ಸಾರ್ವಜನಿಕರು ಬಿಎಂಟಿಸಿ ಚಾಲಕನಿಗೆ ಹಿಗ್ಗಾಮುಗ್ಗ ಥಳಿಸಿದ್ದಾರೆ. ಕೊನೆಗೆ ಚಾಲಕನನ್ನು ರಕ್ಷಿಸಿ ಪೊಲೀಸ್ ಠಾಣೆಗೆ ಹೊಯ್ಸಳ ಸಿಬ್ಬಂದಿ ಕರೆದೊಯ್ದರು. ಬಿಎಂಟಿಸಿ ಬಸ್ಸನ್ನು ಜಪ್ತಿ ಮಾಡಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಳೆದ ರಾತ್ರಿ ಈ ದುರ್ಘಟನೆ ನಡೆದಿದೆ.

ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com