'ಕಾಂತಾರ' ಚಿತ್ರ ವೀಕ್ಷಿಸಿ ನಟ ರಿಷಬ್ ಶೆಟ್ಟಿಗೆ ಕರೆ ಮಾಡಿ ಶ್ಲಾಘಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

ಕಾಂತಾರ ಕನ್ನಡ ಚಿತ್ರ ಭಾಷೆ, ಗಡಿಯನ್ನು ಮೀರಿ ರಾಜ್ಯ, ರಾಷ್ಟ್ರ ಮಾತ್ರವೇಕೆ ವಿದೇಶದಲ್ಲಿಯೂ ಸದ್ದು ಮಾಡುತ್ತಿದೆ. ಚಿತ್ರ ಬಿಡುಗಡೆಯಾಗಿ ಒಂದು ತಿಂಗಳು ಕಳೆದರೂ ಅದರ ಹವಾ ಮಾತ್ರ ಕಡಿಮೆಯಾಗಿಲ್ಲ. ಕೇವಲ ಕಲಾವಿದರು, ಸಾಮಾನ್ಯ ವ್ಯಕ್ತಿಗಳು ಮಾತ್ರವಲ್ಲ ರಾಜಕೀಯ ನಾಯಕರು ಕೂಡ ಈ ಚಿತ್ರವನ್ನು ಇಷ್ಟಪಟ್ಟಿದ್ದಾರೆ.
ನಟ ರಿಷಬ್ ಶೆಟ್ಟಿಗೆ ಕರೆ ಮಾಡಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್
ನಟ ರಿಷಬ್ ಶೆಟ್ಟಿಗೆ ಕರೆ ಮಾಡಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

ಬೆಂಗಳೂರು: ಕಾಂತಾರ ಕನ್ನಡ ಚಿತ್ರ ಭಾಷೆ, ಗಡಿಯನ್ನು ಮೀರಿ ರಾಜ್ಯ, ರಾಷ್ಟ್ರ ಮಾತ್ರವೇಕೆ ವಿದೇಶದಲ್ಲಿಯೂ ಸದ್ದು ಮಾಡುತ್ತಿದೆ. ಚಿತ್ರ ಬಿಡುಗಡೆಯಾಗಿ ಒಂದು ತಿಂಗಳು ಕಳೆದರೂ ಅದರ ಹವಾ ಮಾತ್ರ ಕಡಿಮೆಯಾಗಿಲ್ಲ. ಕೇವಲ ಕಲಾವಿದರು, ಸಾಮಾನ್ಯ ವ್ಯಕ್ತಿಗಳು ಮಾತ್ರವಲ್ಲ ರಾಜಕೀಯ ನಾಯಕರು ಕೂಡ ಈ ಚಿತ್ರವನ್ನು ಇಷ್ಟಪಟ್ಟಿದ್ದಾರೆ.

ನಿನ್ನೆ ಬೆಂಗಳೂರಿನಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ಆರಂಭವಾಗಿದ್ದು ಉದ್ಘಾಟನಾ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪಿಯೂಶ್ ಗೋಯಲ್ ಕಾಂತಾರ ಚಿತ್ರವನ್ನು ಪ್ರಸ್ತಾಪಿಸಿದರು. ಕಾಂತಾರ ಚಿತ್ರ 15-16 ಕೋಟಿ ರೂಪಾಯಿಗಳಲ್ಲಿ ತಯಾರಾದ ಚಿತ್ರ, ಇಂದು 300 ಕೋಟಿಗೂ ಅಧಿಕ ಹಣ ಗಳಿಸಿದೆ. ಹೂಡಿಕೆದಾರರು ಕಾಂತಾರ ಚಿತ್ರವನ್ನು ನೋಡಿ ಕಲಿಯಬೇಕು ಎಂದಿದ್ದರು.

ಅಷ್ಟು ಹೇಳಿದ್ದೇ ತಡ, ಸಮಾರಂಭಕ್ಕೆ ಆಗಮಿಸಿದ್ದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಜೆ ವಿರಾಮದ ಸಮಯದಲ್ಲಿ ಬೆಂಗಳೂರಿನಲ್ಲಿ ಕಾಂತಾರ ಚಿತ್ರವನ್ನು ವೀಕ್ಷಿಸಿದ್ದಾರೆ. ಅಷ್ಟೇ ಏಕೆ ನಟ ರಿಷಬ್ ಶೆಟ್ಟಿಗೆ ಕರೆ ಮಾಡಿ ಅವರ ನಟನೆ, ನಿರ್ದೇಶನಕ್ಕೆ ಪ್ರಶಂಸಿಸಿದ್ದಾರೆ.

ಬರಹಗಾರನಾಗಿ, ನಿರ್ದೇಶಕನಾಗಿ, ನಟನಾಗಿ ರಿಷಬ್ ಶೆಟ್ಟಿ ಅದ್ಭುತವಾದ ಚಿತ್ರ ತೆಗೆದಿದ್ದಾರೆ. ತುಳುನಾಡು, ಕರಾವಳಿಯ ಸಂಪದ್ಭರಿತ ಸಂಸ್ಕೃತಿ, ಸಂಪ್ರದಾಯಗಳನ್ನು ಚಿತ್ರ ಸೆರೆಹಿಡಿದಿದೆ ಎಂದು ಸಚಿವೆ ಟ್ವೀಟ್ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com