social_icon

ಬೆಂಗಳೂರಿನಲ್ಲಿ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಲು ಎನ್‌ಎಚ್‌ಎಐಗೆ ಸೂಚಿಸಿದ ಕರ್ನಾಟಕ ಹೈಕೋರ್ಟ್

ಖಾಸಗಿ ಗುತ್ತಿಗೆದಾರರು ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯಿಂದ ಹೊರಗುತ್ತಿಗೆ ಪಡೆದಿರುವ ಏಜೆನ್ಸಿಯಿಂದ ರಸ್ತೆ ಗುಂಡಿ ಮುಚ್ಚುವ ಮತ್ತು ರಸ್ತೆಗಳ ಸರಿಪಡಿಸುವ ಕಾಮಗಾರಿಯನ್ನು ಖುದ್ದು ಪರಿಶೀಲಿಸುವಂತೆ ಹೈಕೋರ್ಟ್ ಬುಧವಾರ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮುಖ್ಯ ಎಂಜಿನಿಯರ್‌ಗೆ ಸೂಚಿಸಿದೆ.

Published: 03rd November 2022 11:13 AM  |   Last Updated: 03rd November 2022 03:29 PM   |  A+A-


Pothole

ರಸ್ತೆ ಗುಂಡಿಗಳು

Posted By : Ramyashree GN
Source : Express News Service

ಬೆಂಗಳೂರು: ಖಾಸಗಿ ಗುತ್ತಿಗೆದಾರರು ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯಿಂದ ಹೊರಗುತ್ತಿಗೆ ಪಡೆದಿರುವ ಏಜೆನ್ಸಿಯಿಂದ ರಸ್ತೆ ಗುಂಡಿ ಮುಚ್ಚುವ ಮತ್ತು ರಸ್ತೆಗಳ ಸರಿಪಡಿಸುವ ಕಾಮಗಾರಿಯನ್ನು ಖುದ್ದು ಪರಿಶೀಲಿಸುವಂತೆ ಕರ್ನಾಟಕ ಹೈಕೋರ್ಟ್ ಬುಧವಾರ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (ಎನ್‌ಎಚ್‌ಎಐ) ಮುಖ್ಯ ಎಂಜಿನಿಯರ್‌ಗೆ ಸೂಚಿಸಿದೆ.

ಕಳೆದ ಆರರಿಂದ ಏಳು ವರ್ಷಗಳಲ್ಲಿ ತನ್ನ ಹಿಂದಿನ ಆದೇಶಗಳನ್ನು ನಿರ್ಲಕ್ಷಿಸಿದ್ದಕ್ಕಾಗಿ ಬಿಬಿಎಂಪಿಯನ್ನು ತೀವ್ರವಾಗಿ ಟೀಕಿಸಿದ ನ್ಯಾಯಾಲಯ, ನಾಲ್ಕು ವಾರಗಳಲ್ಲಿ ವರದಿಯನ್ನು ಸಲ್ಲಿಸುವಂತೆ ಎನ್ಎಚ್ಎಐಗೆ ನಿರ್ದೇಶನ ನೀಡಿದೆ.

ಖಾಸಗಿ ಗುತ್ತಿಗೆದಾರರು ಮತ್ತು ಏಜೆನ್ಸಿಯವರು ಮಾಡುತ್ತಿರುವ ಕಾಮಗಾರಿಯನ್ನು ಸ್ವತಂತ್ರ ಮೂರನೇ ವ್ಯಕ್ತಿಯ ಅನುಪಸ್ಥಿತಿಯಲ್ಲಿ ಮೌಲ್ಯಮಾಪನ ಮಾಡಬೇಕು ಎಂದು ನಿರ್ದೇಶನ ನೀಡಲಾಗಿದ್ದು, ಬಿಬಿಎಂಪಿ ಅಧಿಕಾರಿಗಳೇ ತಾವು ಮಾಡಿದ ಕೆಲಸಕ್ಕೆ ಪ್ರಮಾಣಪತ್ರ ನೀಡುತ್ತಿದ್ದಾರೆ ಎಂದಿದೆ.

ಈ ಹಿಂದಿನ ಆದೇಶಗಳಲ್ಲಿ ರಸ್ತೆಗಳ ಕಳಪೆ ಸ್ಥಿತಿ ಮತ್ತು ನಿರ್ದಿಷ್ಟವಾಗಿ ಗುಂಡಿಗಳು, ಅಪಘಾತಗಳಿಗೆ ಕಾರಣವಾಗುವ ಮಾನವ ಜೀವಗಳನ್ನು ಬಲಿತೆಗೆದುಕೊಳ್ಳುವ ಬಗ್ಗೆ ಗಮನಿಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್ ಕಿಣಗಿ ಅವರ ವಿಭಾಗೀಯ ಪೀಠವು, ಬಿಬಿಎಂಪಿ ನಿರ್ಮಿಸಿದ ಕಾಮಗಾರಿಯ ಪ್ರಕಾರ ರಸ್ತೆಗಳಲ್ಲಿ ಕಾಸ್ಮೆಟಿಕ್ ಕೆಲಸವನ್ನು ಮಾತ್ರ ಮಾಡಲಾಗುತ್ತಿದೆ, ಅದು ಭಾರಿ ಮಳೆಯ ನಂತರ ಏಳುತ್ತದೆ ಎಂದು ಮೌಖಿಕವಾಗಿ ಛಾಯಾಚಿತ್ರಗಳನ್ನು ಗಮನಿಸಿತು.

ಇದನ್ನೂ ಓದಿ: ಬೆಂಗಳೂರಿನ ರಸ್ತೆಗುಂಡಿಗೆ ಮತ್ತೊಂದು ಬಲಿ: ಗುಂಡಿ ತಪ್ಪಿಸಲು ಹೋಗಿ ಕಾರು ಪಲ್ಟಿ, ಬೈಕ್ ಸವಾರ ಸ್ಥಳದಲ್ಲೇ ಸಾವು

ನಗರದ ಕಳಪೆ ರಸ್ತೆಗಳ ಸ್ಥಿತಿಯನ್ನು ಸುಧಾರಿಸಲು ನಿರ್ದೇಶನಗಳನ್ನು ಕೋರಿ 2015 ರಲ್ಲಿ ಕೋರಮಂಗಲದ ವಿಜಯನ್ ಮೆನನ್ ಮತ್ತು ಇತರ ಮೂವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ವಿಚಾರಣೆಯನ್ನು ನ್ಯಾಯಾಲಯ ನಡೆಸುತ್ತಿದೆ.

ಎನ್‌ಎಚ್‌ಎಐ ಅಥವಾ ಅವರು ನಾಮನಿರ್ದೇಶನ ಮಾಡಿದ ಹಿರಿಯ ಅಧಿಕಾರಿ ಕಾರ್ಯನಿರ್ವಹಣೆಯನ್ನು ಖುದ್ದಾಗಿ ಪರಿಶೀಲಿಸಲು ಮುಖ್ಯ ಇಂಜಿನಿಯರ್‌ಗೆ ಸೂಚಿಸಿದೆ ಮತ್ತು ಬಿಬಿಎಂಪಿ ಅಧಿಕಾಗಳ, ರಸ್ತೆ ಗುಂಡಿ ಮುಚ್ಚುವ ಏಜೆನ್ಸಿ ಅಥವಾ ಗುತ್ತಿಗೆದಾರರ ಕಡೆಯಿಂದ ಯಾವುದೇ ಲೋಪವಿದ್ದರೆ ವರದಿಯಲ್ಲಿ ಸೂಚಿಸುವಂತೆ ನ್ಯಾಯಾಲಯ ಸೂಚಿಸಿದೆ.

ಕಾಮಗಾರಿ ನಡೆಯುವ ಸ್ಥಳಗಳಿಗೆ ಭೇಟಿ ನೀಡಿದ ಬಳಿಕ ಮುಖ್ಯ ಎಂಜಿನಿಯರ್ ಅಥವಾ ಅವರು ಸೂಚಿಸಿದ ಅಧಿಕಾರಿಯು ಕಾಮಗಾರಿ ಆದೇಶದ ಪ್ರಕಾರ ಕಾಮಗಾರಿ ನಡೆದಿದೆಯೇ, ಹಾಗೂ ಗುತ್ತಿಗೆದಾರರು ಅಥವಾ ಏಜೆನ್ಸಿಯವರ ತೃಪ್ತಿಯಂತೆ ಕಾಮಗಾರಿ ನಡೆದಿದೆಯೇ ಎಂಬುದರ ಕುರಿತು ಸ್ವತಂತ್ರವಾಗಿ ಪರಿಶೀಲನೆ ನಡೆಸಿ ವಿವರವಾದ ವರದಿ ಸಲ್ಲಿಸಬೇಕು. ಯಾವುದಾದರೂ ಸಲಹೆಗಳಿದ್ದರೆ ನೀಡಬಹುದು ಎಂದು ನ್ಯಾಯಾಲಯ ಹೇಳಿದೆ.

ಇದನ್ನೂ ಓದಿ: ನವೆಂಬರ್ 10 ರೊಳಗೆ ಬೆಂಗಳೂರು ನಗರ ಗುಂಡಿ ಮುಕ್ತವಾಗಲಿದೆ: ಬಿಬಿಎಂಪಿ

ಬುಧವಾರ ನೀಡಿರುವ ಆದೇಶವನ್ನು ಚಾಲ್ತಿಯಲ್ಲಿರುವ ಕಾಮಗಾರಿಯನ್ನು ಸ್ಥಗಿತಗೊಳಿಸುವುದು ಎಂದು ಪರಿಗಣಿಸಬಾರದು ಮತ್ತು ಮುಂದಿನ ಆದೇಶದವರೆಗೆ ಈಗಾಗಲೇ ಕೈಗೊಂಡಿರುವ ಕಾಮಗಾರಿಯನ್ನು ಮುಂದುವರಿಸಬೇಕು ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

ಈಮಧ್ಯೆ, ಪೈಥಾನ್ ಯಂತ್ರವನ್ನು ಬಳಸಿ ಗುಂಡಿಗಳನ್ನು ಮುಚ್ಚುವ ಕೆಲಸವನ್ನು ವಹಿಸಿಕೊಂಡಿದ್ದ ಅಮೆರಿಕನ್ ರೋಡ್ ಟೆಕ್ನಾಲಜಿ ಸಲ್ಯೂಷನ್ಸ್ ಸಂಸ್ಥೆಗೆ, ಒಪ್ಪಂದದ ನಿಯಮಗಳನ್ನು ಪೂರೈಸದ ಆರೋಪದ ಮೇಲೆ ಬಿಬಿಎಂಪಿ ನೀಡಿರುವ ನೋಟಿಸ್‌ಗಳಿಗೆ ಉತ್ತರಿಸಲು ನ್ಯಾಯಾಲಯವು ಕಾಲಾವಕಾಶ ನೀಡಿದೆ. ಮುಂದಿನ ವಿಚಾರಣೆಯನ್ನು ಡಿಸೆಂಬರ್ 7ಕ್ಕೆ ಮುಂದೂಡಲಾಗಿದೆ.


Stay up to date on all the latest ರಾಜ್ಯ news
Poll
New parliament building

ಹೊಸ ಸಂಸತ್ ಕಟ್ಟಡದ ಉದ್ಘಾಟನೆಯನ್ನು ಬಹಿಷ್ಕರಿಸುವ ಹಲವಾರು ವಿರೋಧ ಪಕ್ಷಗಳ ನಿರ್ಧಾರವು ಸಮರ್ಥನೀಯವೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp