ಕ್ರೇನ್​ ಹರಿದು ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿ ಸಾವು

ಬೆಂಗಳೂರು ಪೂರ್ವ ತಾಲೂಕಿನ ಕನ್ನಮಂಗಲ ಗೇಟ್​ ಬಳಿ ಕ್ರೇನ್​ ಹರಿದು ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಬೆಂಗಳೂರು ಪೂರ್ವ ತಾಲೂಕಿನ ಕನ್ನಮಂಗಲ ಗೇಟ್​ ಬಳಿ ಕ್ರೇನ್​ ಹರಿದು ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ

ನೂರ್ ಪೀಜಾರ್ (19) ಮೃತ ವಿದ್ಯಾರ್ಥಿನಿಯಾಗಿದ್ದಾಳೆ. ಮೃತ ವಿದ್ಯಾರ್ಥಿನಿ ಬುಧವಾರ ಮಧ್ಯಾಹ್ನ ಕಾಲೇಜಿನಿಂದ ಮನೆಗೆ ಹಿಂತಿರುಗುತ್ತಿದ್ದಾಗ ಕನ್ನಮಂಗಲ ಗೇಟ್ ಬಳಿ ಅಪಘಾತ ಸಂಭವಿಸಿತ್ತು. ರಸ್ತೆಬದಿಯಲ್ಲಿ ವಿದ್ಯಾರ್ಥಿನಿ ನಡೆದುಕೊಂಡು ಹೋಗುತ್ತಿರುವುದನ್ನು ಗಮನಿಸದ ಕ್ರೇನ್ ಚಾಲಕ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದ. ಈ ವೇಳೆ ವಿದ್ಯಾರ್ಥಿನಿ ಕ್ರೇನ್ ಚಕ್ರಗಳಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದಳು. ವಿದ್ಯಾರ್ಥಿನಿಗೆ ಕ್ರೇನ್ ಡಿಕ್ಕಿ ಹೊಡೆದ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿತ್ತು.

ಅಪಘಾತ ಸಂಭವಿಸಿದ ಕೂಡಲೇ ವೈಟ್ ಫೀಲ್ಡ್ ನಲ್ಲಿರುವ ಆಸ್ಪತ್ರೆಗೆ ವಿದ್ಯಾರ್ಥಿನಿಯನ್ನು ದಾಖಲು ಮಾಡಲಾಗಿತ್ತು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಚಾಲಕ ಪೆರಿಯಾ ಸ್ವಾಮಿಯನ್ನು ಬಂಧನಕ್ಕೊಳಪಡಿಸಿ, ಕ್ರೇನ್'ನ್ನು ವಶಪಡಿಸಿಕೊಂಡಿದ್ದರು.

ಇನ್ನು ವಿದ್ಯಾರ್ಥಿನಿಯ ಚಿಕಿತ್ಸಾ ವೆಚ್ಚವನ್ನು ಭರಿಸಲಾಗದೆ ನೂರ್ ಪೀಜಾ ತಂದೆ ರೆಹ್ಮಾನ್ ಖಾನ್ ಅವರು ಪರದಾಡುತ್ತಿದ್ದು, ನಮ್ಮ ಕೈಲಾದಷ್ಟು ಸಹಾಯ ಮಾಡಿದ್ದೇವೆಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com