ರೇಣುಕಾಚಾರ್ಯ ಸಹೋದರನ ಪುತ್ರ ಚಂದ್ರು ಅಂತ್ಯಕ್ರಿಯೆ: ಯಡಿಯೂರಪ್ಪ ಸಂತಾಪ
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರ ಸಹೋದರನ ಪುತ್ರ ಚಂದ್ರಶೇಖರ್ ಅವರ ಪಾರ್ಥಿವ ಶರೀರವನ್ನು ಶುಕ್ರವಾರ ವೀರಶೈವ ಲಿಂಗಾಯತ ಜಂಗಮ ಸಂಪ್ರದಾಯದಂತೆ ಕುಂದೂರು ಗ್ರಾಮದಲ್ಲಿರುವ ಕುಟುಂಬದ ಜಮೀನಿನಲ್ಲಿ ಅಂತಿಮ ಸಂಸ್ಕಾರ ನೆರವೇರಿಸಲಾಯಿತು.
Published: 05th November 2022 08:40 AM | Last Updated: 05th November 2022 11:07 AM | A+A A-

ಚಂದ್ರಶೇಖರ್ ಅವರ ಅಂತ್ಯಕ್ರಿಯೆಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ.
ದಾವಣಗೆರೆ: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರ ಸಹೋದರನ ಪುತ್ರ ಚಂದ್ರಶೇಖರ್ ಅವರ ಪಾರ್ಥಿವ ಶರೀರವನ್ನು ಶುಕ್ರವಾರ ವೀರಶೈವ ಲಿಂಗಾಯತ ಜಂಗಮ ಸಂಪ್ರದಾಯದಂತೆ ಕುಂದೂರು ಗ್ರಾಮದಲ್ಲಿರುವ ಕುಟುಂಬದ ಜಮೀನಿನಲ್ಲಿ ಅಂತಿಮ ಸಂಸ್ಕಾರ ನೆರವೇರಿಸಲಾಯಿತು.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ, ಗೃಹ ಸಚಿವ ಆರಗ ಜ್ಞಾನೇಂದ್ರ ಮತ್ತಿತರರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.
ಅಕ್ಟೋಬರ್ 30 ರಿಂದ ನಾಪತ್ತೆಯಾಗಿದ್ದ ಚಂದ್ರಶೇಖರ್ ಅವರ ಮೃತದೇಹ ತುಂಗಾ ಮೇಲ್ದಂಡೆ ಕಾಲುವೆಯಲ್ಲಿ ನೀರಿನ ಅಡಿಯಲ್ಲಿ ಬಿದ್ದಿದ್ದ ಕಾರಿನ ಹಿಂಬದಿಯ ಸೀಟಿನಲ್ಲಿ ನಿಗೂಢವಾಗಿ ಪತ್ತೆಯಾಗಿತ್ತು. ಆದರೆ, ವಾಹನ ಚಾಲಕ ಮಾತ್ರ ನಾಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಇದನ್ನೂ ಓದಿ: ಶಾಸಕ ಎಂ.ಪಿ.ರೇಣುಕಾಚಾರ್ಯ ತಮ್ಮನ ಪುತ್ರ ಚಂದ್ರಶೇಖರ್ ಸಾವು ಪ್ರಕರಣ: ಕೊಲೆ ಕೇಸ್ ದಾಖಲು
ಚಂದ್ರಶೇಖರ್ ಅವರ ತಂದೆ ಎಂ.ಪಿ.ರಮೇಶ್ ನೀಡಿದ ದೂರಿನ ಮೇರೆಗೆ ದಾವಣಗೆರೆ ಪೊಲೀಸರು ಐಪಿಸಿ ಸೆಕ್ಷನ್ 302, 201, 427 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಚಂದ್ರಶೇಖರ್ ಅವರ ತಲೆಗೆ ತೀವ್ರವಾಗಿ ಹೊಡೆದು ಕೊಲೆ ಮಾಡಲಾಗಿದೆ. ಹತ್ಯೆ ಬಳಿಕ ಶವವನ್ನು ಕಾರಿನ ಹಿಂಬದಿಯಲ್ಲಿಟ್ಟು ನೀರಿಗೆ ತಳ್ಳಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಅಧಿಕಾರಿಗಳು ಹಂತಕರ ಪತ್ತೆಗೆ ಹೊನ್ನಾಳಿ ಮಾಜಿ ಇನ್ಸ್ಪೆಕ್ಟರ್ ಟಿ.ವಿ.ದೇವರಾಜ್ ನೇತೃತ್ವದಲ್ಲಿ ತಂಡ ರಚಿಸಿದ್ದಾರೆ.
ಇದನ್ನೂ ಓದಿ: ಚಂದ್ರಶೇಖರ್ ಸಾವು ಪ್ರಕರಣ: 2-3 ದಿನಗಳಲ್ಲಿ ಮರಣೋತ್ತರ ಪರೀಕ್ಷಾ ವರದಿ ನಮ್ಮ ಕೈ ಸೇರಲಿದೆ: ಎಡಿಜಿಪಿ
ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿ, ರೇಣುಕಾಚಾರ್ಯ ಅವರಿಗೆ ಬಂದಿರುವ ಬೆದರಿಕೆ ಕರೆಗಳನ್ನು ಪತ್ತೆ ಮಾಡಲಾಗುತ್ತಿದ್ದು, ಆರೋಪಿಗಳನ್ನು ಶೀಘ್ರದಲ್ಲೇ ಪತ್ತೆ ಹಚ್ಚಲಾಗುತ್ತದೆ ಎಂದಿದ್ದಾರೆ.
ರೇಣುಕಾಚಾರ್ಯ ಅವರಿಗೆ ಸಾಂತ್ವನ ಹೇಳಲು ಹೊನ್ನಾಳಿಗೆ ಬಂದಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಾತಮಾಡಿ, ರೇಣುಕಾಚಾರ್ಯ ಅವರು ತಮ್ಮ ಸೋದರನ ಪುತ್ರನನ್ನು ಅಪಹರಿಸಲಾಗಿದೆ ಎಂದು ಹೇಳುತ್ತಿದ್ದು, ಅಷ್ಟರಲ್ಲಾಗಲೇ ಮೃತದೇಹ ಪತ್ತೆಯಾಗಿದೆ. ಪ್ರಕರಣ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಜ್ಞಾನೇಂದ್ರ ಅವರೊಂದಿಗೆ ಮಾತನಾಡಿ, ಸಮಗ್ರ ತನಿಖೆ ನಡೆಸುವಂತೆ ಮನವಿ ಮಾಡಲಾಗಿದೆ ಎಂದರು.