ಬೆಂಗಳೂರು: ಸಂಸತ್ ಭವನದ ಆವರಣದಲ್ಲಿ ನಾಡಪ್ರಭು ಕೆಂಪೇಗೌಡರ ಕಂಚಿನ ಪುತ್ಥಳಿ ಸ್ಥಾಪಿಸುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಮನವಿ ಮಾಡಿದ್ದಾರೆ.
ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್ಪೋರ್ಟ್ನಲ್ಲಿ ಕೆಂಪೇಗೌಡರ 108 ಅಡಿಯ ಪ್ರತಿಮೆ (Kempegowda statue) ನಿರ್ಮಾಣವಾಗಿದ್ದು, ನವೆಂಬರ್ 11 ರಂದು ಉದ್ಘಾಟನೆಯಾಗಲಿದೆ. ಇದರ ಬೆನ್ನಲ್ಲೇ ಸಂಸತ್ ಭವನದ ಆವರಣದಲ್ಲಿ ಕೆಂಪೇಗೌಡರ ಕಂಚಿನ ಪುತ್ಥಳಿ ಸ್ಥಾಪಿಸುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಮನವಿ ಮಾಡಿಕೊಂಡಿದ್ದಾರೆ.
ಈ ಕುರಿತು ಪತ್ರವೊಂದನ್ನು ಬರೆದಿರುವ ಅವರು, 'ಕೆಂಪೇಗೌಡರು 16ನೇ ಶತಮಾನದಲ್ಲಿ ಬೆಂಗಳೂರು ನಗರವನ್ನು ಸ್ಥಾಪಿಸಿದರು. ಶತಮಾನಗಳ ಹಿಂದೆ ಅವರು ಬಿತ್ತಿದ ಬೀಜಗಳು ಇಂದು ಜಾಗತಿಕವಾಗಿ ಪ್ರಸಿದ್ಧವಾದ ಮಹಾನಗರವಾಗಿ ಅರಳಿವೆ. ಅದು ನಾವೆಲ್ಲರೂ ಹೆಮ್ಮೆಪಡುತ್ತೇವೆ. ಸಂಸತ್ ಭವನದ ಆವರಣದಲ್ಲಿ ಕೆಂಪೇಗೌಡರ ಕಂಚಿನ ಪುತ್ಥಳಿ ಸ್ಥಾಪಿಸುವಂತೆ ದೇವೇಗೌಡ ಅವರು ಮನವಿ ಮಾಡಿದ್ದಾರೆ.
Advertisement